ಸಂತ್ರಸ್ತರಿಗೆ ದೇಶದಲ್ಲೇ ಮಾದರಿ ಪುನರ್ವಸತಿ
Team Udayavani, Aug 28, 2018, 6:00 AM IST
ಬೆಂಗಳೂರು: “ಶತಮಾನದ ದುರಂತದಿಂದ ಕೊಡಗಿನಲ್ಲಿ ನೆಲೆ ಕಳೆದುಕೊಂಡಿರುವ ಕುಟುಂಬಗಳಿಗೆ ಶಾಶ್ವತ ಪುನರ್ವಸತಿ ಕಲ್ಪಿಸಲು 42 ಎಕರೆ ಭೂಮಿ ಗುರುತಿಸಲಾಗಿದ್ದು, 758 ಕುಟುಂಬಗಳಿಗೆ ಮನೆ ನಿರ್ಮಿಸಿಕೊಡಲಾಗುವುದು’ ಎಂದು ವಸತಿ ಸಚಿವ ಯು.ಟಿ.ಖಾದರ್ ತಿಳಿಸಿದ್ದಾರೆ.
ವಿಕಾಸಸೌಧದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕೊಡಗು ಸಂತ್ರಸ್ತರ ಪರಿಹಾರ ಹಾಗೂ ಪುನರ್ವಸತಿ ಬಗ್ಗೆ ಸರ್ಕಾರ ಹೆಚ್ಚು ಕಾಳಜಿ ವಹಿಸಿದ್ದು ದೇಶದಲ್ಲೇ ಮಾದರಿಯಾದ ಮನೆ ನಿರ್ಮಿಸಿಕೊಡಲಾಗುವುದು ಎಂದು ಹೇಳಿದರು.
758 ಕುಟುಂಬಗಳಿಗೆ ಪುನರ್ವಸತಿ ಕಲ್ಪಿಸಲು 42 ಎಕರೆ ಭೂಮಿ ಮೀಸಲಿಡಲಾಗಿದ್ದು ಈ ಪೈಕಿ 24 ಎಕರೆಗೆ
ಸಂಬಂಧಿಸಿದಂತೆ ಸರ್ವೇ ನಂಬರ್ ಸಹ ಗುರುತಿಸಲಾಗಿದೆ. ಉಳಿದ ಭೂಮಿಯ ಸರ್ವೇ ಕಾರ್ಯ ಪ್ರಗತಿಯಲ್ಲಿದೆ ಎಂದು ತಿಳಿಸಿದರು.
ಕೊಡಗು ಜಿಲ್ಲೆಯನ್ನು ಪುನರ್ ನಿರ್ಮಾಣ ಮಾಡಲು ಸರ್ಕಾರ ಮುಂದಾಗಿದೆ. ವಸತಿಗೆ ಸಂಬಂಧಿಸಿದಂತೆ ಜಿಲ್ಲಾಧಿಕಾರಿ ಇಂದು ವರದಿ ಸಲ್ಲಿಸಿದ್ದಾರೆ. 758 ಕುಟುಂಬಗಳು ಸೂರು ಕಳೆದುಕೊಂಡಿದ್ದು, ಅವರಿಗೆ ಮಾದರಿ ಮನೆಗಳನ್ನು ನಿರ್ಮಿಸಿ ಕೊಡಲಾಗುವುದು. ಈ ಸಂಬಂಧ ಮುಖ್ಯಮಂತ್ರಿ ಹಾಗೂ ಅಧಿಕಾರಿಗಳೊಂದಿಗೆ ಚರ್ಚೆ ನಡೆಸುತ್ತೇನೆ. ಸದ್ಯಕ್ಕೆ ಆಶ್ರಯ ಕೇಂದ್ರಗಳಲ್ಲಿ ಅವರಿಗೆ ನೆರವು ಕಲ್ಪಿಸಲಾಗಿದೆ ಎಂದರು.
ಗುಡ್ಡಗಾಡು ಪ್ರದೇಶದಲ್ಲಿ ಮನೆ ಕಟ್ಟುವುದೇ ಸವಾಲಿನ ಕೆಲಸ. ಎಲ್ಲರಿಗೂ ಒಂದೇ ಮಾದರಿಯ ಮನೆಗಳನ್ನು ನಿರ್ಮಿಸಿಕೊಡಲಾಗುವುದು. ಎರಡು, ಮೂರು ಮಾದರಿಯ ಯೋಜನೆ ಸಿದಟಛಿಪಡಿಸಲಾಗಿದ್ದು ಮುಖ್ಯಮಂತ್ರಿ ಜತೆ ಚರ್ಚೆ ಬಳಿಕ ಅಂತಿಮಗೊಳಿಸಲಾಗುವುದು ಎಂದು ಹೇಳಿದರು.
ಕೊಡಗಿನ ಅನಾಹುತಕ್ಕೆ ಅವೈಜ್ಞಾನಿಕ ಪ್ರಗತಿ ಕಾರಣ ಎನ್ನಲಾಗುತ್ತಿದೆ. ಈ ಸಂಬಂಧ ತಜ್ಞರ ಸಲಹೆ ಪಡೆಯುತ್ತೇವೆ. ಗುಡ್ಡಗಾಡು ಪ್ರದೇಶಗಳಲ್ಲಿ ಕಟ್ಟಡಗಳ ನಿರ್ಮಾಣವನ್ನು ವೈಜ್ಞಾನಿಕವಾಗಿ ಮಾಡುತ್ತೇವೆ. ಅದಕ್ಕಾಗಿ ಅಗತ್ಯ ಮಾನದಂಡಗಳನ್ನು ರೂಪಿಸಲಾಗುವುದು ಎಂದು ತಿಳಿಸಿದರು.
ಕೊಡಗಿನ ಜನರಿಗೆ ವಸತಿ ಕಲ್ಪಿಸಲು ಕನಿಷ್ಠ 6ತಿಂಗಳು ಬೇಕು. ಅಲ್ಲಿಯವರೆಗೆ ಸಂತ್ರಸ್ತರಿಗೆ ತಾತ್ಕಾಲಿಕವಾಗಿ ವಸತಿ ಸೌಲಭ್ಯ ಕಲ್ಪಿಸುವ ಸಂಬಂಧ ಚರ್ಚೆಗಳು ನಡೆಯುತ್ತಿವೆ. ನೆರೆ ಹಾವಳಿಯಿಂದ ಹಾನಿಯಾಗಿರುವ ಮನೆಗಳಿಗೆ ಜಿಲ್ಲಾಧಿಕಾರಿ ಮೂಲಕ ಪರಿಹಾರ ಒದಗಿಸಲಾಗುವುದು ಎಂದು ಹೇಳಿದರು.
ಸರಕಾರದಿಂದ ಉಡುಗೊರೆ ಕಿಟ್
ಕೊಡಗು ಜಿಲ್ಲೆಯಲ್ಲಿ ಸಂಭವಿಸಿರುವುದು ಪ್ರಕೃತಿ ವಿಕೋಪ. ಆದುದರಿಂದ, ಈ ಜಿಲ್ಲೆಯಲ್ಲಿ ಕಟ್ಟುವ ಮನೆಗಳಿಗೆ
ಪ್ರತ್ಯೇಕವಾದ ಅನುದಾನ ಬಳಕೆಯಾಗಲಿದೆ ಎಂದು ಸಚಿವ ಖಾದರ್ ಪ್ರಶ್ನೆಯೊಂದಕ್ಕೆ ಉತ್ತರಿಸಿದರು. ಹೊಸ ಮನೆಗಳಿಗೆ ಹೋಗುವವರಿಗೆ ರಾಜ್ಯ ಸರಕಾರದಿಂದ ಉಡುಗೊರೆ ಕಿಟ್ ಅನ್ನು ನೀಡಲು ಉದ್ದೇಶಿಸಲಾಗಿದೆ. ಅದರಲ್ಲಿ ಗೃಹ ಬಳಕೆಗೆ ತಿಂಗಳಿಗೆ ಅಗತ್ಯರುವಷ್ಟು ಸಾಮಗ್ರಿಗಳು ಸೇರಿ ಇನ್ನಿತರ ವಸ್ತುಗಳು ಇರಲಿವೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vijaypura:ರಾಹುಲ್ ಗಾಂಧಿ ನಿರ್ಗಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್
Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್
LS Polls: ರಾಜ್ಯದಲ್ಲಿ ಕಾಂಗ್ರೆಸ್ ವಿರೋಧಿ ಅಲೆ: ರಾಘವೇಂದ್ರ
Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…
MUST WATCH
ಹೊಸ ಸೇರ್ಪಡೆ
Davanagere; ಪ್ರಧಾನಿ ಮೋದಿ ರ್ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ
2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್ಯಾಂಕ್ ಪಡೆದ ತೀರ್ಥಹಳ್ಳಿಯ ಸುಚಿಂತ್
Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ
Vijaypura:ರಾಹುಲ್ ಗಾಂಧಿ ನಿರ್ಗಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ
ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್.ವರಲಕ್ಷ್ಮೀ