ಸಂತ್ರಸ್ತರಿಗೆ ದೇಶದಲ್ಲೇ ಮಾದರಿ ಪುನರ್ವಸತಿ


Team Udayavani, Aug 28, 2018, 6:00 AM IST

180827kpn72.jpg

ಬೆಂಗಳೂರು: “ಶತಮಾನದ ದುರಂತದಿಂದ ಕೊಡಗಿನಲ್ಲಿ ನೆಲೆ ಕಳೆದುಕೊಂಡಿರುವ ಕುಟುಂಬಗಳಿಗೆ ಶಾಶ್ವತ ಪುನರ್ವಸತಿ ಕಲ್ಪಿಸಲು 42 ಎಕರೆ ಭೂಮಿ ಗುರುತಿಸಲಾಗಿದ್ದು, 758 ಕುಟುಂಬಗಳಿಗೆ ಮನೆ ನಿರ್ಮಿಸಿಕೊಡಲಾಗುವುದು’ ಎಂದು ವಸತಿ ಸಚಿವ ಯು.ಟಿ.ಖಾದರ್‌ ತಿಳಿಸಿದ್ದಾರೆ.

ವಿಕಾಸಸೌಧದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕೊಡಗು ಸಂತ್ರಸ್ತರ ಪರಿಹಾರ ಹಾಗೂ ಪುನರ್ವಸತಿ ಬಗ್ಗೆ ಸರ್ಕಾರ ಹೆಚ್ಚು ಕಾಳಜಿ ವಹಿಸಿದ್ದು ದೇಶದಲ್ಲೇ ಮಾದರಿಯಾದ ಮನೆ ನಿರ್ಮಿಸಿಕೊಡಲಾಗುವುದು ಎಂದು ಹೇಳಿದರು.

758 ಕುಟುಂಬಗಳಿಗೆ ಪುನರ್ವಸತಿ ಕಲ್ಪಿಸಲು 42 ಎಕರೆ ಭೂಮಿ ಮೀಸಲಿಡಲಾಗಿದ್ದು ಈ ಪೈಕಿ 24 ಎಕರೆಗೆ
ಸಂಬಂಧಿಸಿದಂತೆ ಸರ್ವೇ ನಂಬರ್‌ ಸಹ ಗುರುತಿಸಲಾಗಿದೆ. ಉಳಿದ ಭೂಮಿಯ ಸರ್ವೇ ಕಾರ್ಯ ಪ್ರಗತಿಯಲ್ಲಿದೆ ಎಂದು ತಿಳಿಸಿದರು.

ಕೊಡಗು ಜಿಲ್ಲೆಯನ್ನು ಪುನರ್‌ ನಿರ್ಮಾಣ ಮಾಡಲು ಸರ್ಕಾರ ಮುಂದಾಗಿದೆ. ವಸತಿಗೆ ಸಂಬಂಧಿಸಿದಂತೆ ಜಿಲ್ಲಾಧಿಕಾರಿ ಇಂದು ವರದಿ ಸಲ್ಲಿಸಿದ್ದಾರೆ. 758 ಕುಟುಂಬಗಳು ಸೂರು ಕಳೆದುಕೊಂಡಿದ್ದು, ಅವರಿಗೆ ಮಾದರಿ ಮನೆಗಳನ್ನು ನಿರ್ಮಿಸಿ ಕೊಡಲಾಗುವುದು. ಈ ಸಂಬಂಧ ಮುಖ್ಯಮಂತ್ರಿ ಹಾಗೂ ಅಧಿಕಾರಿಗಳೊಂದಿಗೆ ಚರ್ಚೆ ನಡೆಸುತ್ತೇನೆ. ಸದ್ಯಕ್ಕೆ ಆಶ್ರಯ ಕೇಂದ್ರಗಳಲ್ಲಿ ಅವರಿಗೆ ನೆರವು ಕಲ್ಪಿಸಲಾಗಿದೆ ಎಂದರು. 

ಗುಡ್ಡಗಾಡು ಪ್ರದೇಶದಲ್ಲಿ ಮನೆ ಕಟ್ಟುವುದೇ ಸವಾಲಿನ ಕೆಲಸ. ಎಲ್ಲರಿಗೂ ಒಂದೇ ಮಾದರಿಯ ಮನೆಗಳನ್ನು ನಿರ್ಮಿಸಿಕೊಡಲಾಗುವುದು. ಎರಡು, ಮೂರು ಮಾದರಿಯ ಯೋಜನೆ ಸಿದಟಛಿಪಡಿಸಲಾಗಿದ್ದು ಮುಖ್ಯಮಂತ್ರಿ ಜತೆ ಚರ್ಚೆ ಬಳಿಕ ಅಂತಿಮಗೊಳಿಸಲಾಗುವುದು ಎಂದು ಹೇಳಿದರು.

ಕೊಡಗಿನ ಅನಾಹುತಕ್ಕೆ ಅವೈಜ್ಞಾನಿಕ ಪ್ರಗತಿ ಕಾರಣ ಎನ್ನಲಾಗುತ್ತಿದೆ. ಈ ಸಂಬಂಧ ತಜ್ಞರ ಸಲಹೆ ಪಡೆಯುತ್ತೇವೆ. ಗುಡ್ಡಗಾಡು ಪ್ರದೇಶಗಳಲ್ಲಿ ಕಟ್ಟಡಗಳ ನಿರ್ಮಾಣವನ್ನು ವೈಜ್ಞಾನಿಕವಾಗಿ ಮಾಡುತ್ತೇವೆ. ಅದಕ್ಕಾಗಿ ಅಗತ್ಯ ಮಾನದಂಡಗಳನ್ನು ರೂಪಿಸಲಾಗುವುದು ಎಂದು ತಿಳಿಸಿದರು.

ಕೊಡಗಿನ ಜನರಿಗೆ ವಸತಿ ಕಲ್ಪಿಸಲು ಕನಿಷ್ಠ 6ತಿಂಗಳು ಬೇಕು. ಅಲ್ಲಿಯವರೆಗೆ ಸಂತ್ರಸ್ತರಿಗೆ  ತಾತ್ಕಾಲಿಕವಾಗಿ ವಸತಿ ಸೌಲಭ್ಯ ಕಲ್ಪಿಸುವ ಸಂಬಂಧ ಚರ್ಚೆಗಳು ನಡೆಯುತ್ತಿವೆ. ನೆರೆ ಹಾವಳಿಯಿಂದ ಹಾನಿಯಾಗಿರುವ ಮನೆಗಳಿಗೆ ಜಿಲ್ಲಾಧಿಕಾರಿ ಮೂಲಕ ಪರಿಹಾರ ಒದಗಿಸಲಾಗುವುದು ಎಂದು ಹೇಳಿದರು.

ಸರಕಾರದಿಂದ ಉಡುಗೊರೆ ಕಿಟ್‌
ಕೊಡಗು ಜಿಲ್ಲೆಯಲ್ಲಿ ಸಂಭವಿಸಿರುವುದು ಪ್ರಕೃತಿ ವಿಕೋಪ. ಆದುದರಿಂದ, ಈ ಜಿಲ್ಲೆಯಲ್ಲಿ ಕಟ್ಟುವ ಮನೆಗಳಿಗೆ
ಪ್ರತ್ಯೇಕವಾದ ಅನುದಾನ ಬಳಕೆಯಾಗಲಿದೆ ಎಂದು ಸಚಿವ ಖಾದರ್‌ ಪ್ರಶ್ನೆಯೊಂದಕ್ಕೆ ಉತ್ತರಿಸಿದರು. ಹೊಸ ಮನೆಗಳಿಗೆ ಹೋಗುವವರಿಗೆ ರಾಜ್ಯ ಸರಕಾರದಿಂದ ಉಡುಗೊರೆ ಕಿಟ್‌ ಅನ್ನು ನೀಡಲು ಉದ್ದೇಶಿಸಲಾಗಿದೆ. ಅದರಲ್ಲಿ ಗೃಹ ಬಳಕೆಗೆ ತಿಂಗಳಿಗೆ ಅಗತ್ಯರುವಷ್ಟು ಸಾಮಗ್ರಿಗಳು ಸೇರಿ ಇನ್ನಿತರ ವಸ್ತುಗಳು ಇರಲಿವೆ ಎಂದರು.

ಟಾಪ್ ನ್ಯೂಸ್

33

Lok Sabha polls: ಹಂತ-1ರ ಮತದಾನಕ್ಕೆ ಭರ್ಜರಿ ಸಿದ್ಧತೆ

voter

ಈ ಲೋಕ ಚುನಾವಣೆ ವಿಶ್ವದಲ್ಲೇ ಅತ್ಯಂತ ದುಬಾರಿ ಚುನಾವಣೆ!

1-weeewq

Hyderabad: ಓವೈಸಿ ಪ್ರತಿಸ್ಪರ್ಧಿ, ಬಿಜೆಪಿಯ ಮಾಧವಿ ಆಸ್ತಿ 221.37 ಕೋಟಿ ರೂ.

1-weewewqe

Emotional; 11 ವರ್ಷ ಬಳಿಕ ಗಲ್ಲಿಗೆ ಗುರಿಯಾದ ಮಗಳನ್ನು ಭೇಟಿಯಾದ ತಾಯಿ!

1-qeqqew

I.N.D.I.A;ಗಂಡೇ ವಿಧಾನಸಭೆ ಕ್ಷೇತ್ರದಿಂದ ಕಲ್ಪನಾ ಸೊರೇನ್‌ ಕಣಕ್ಕೆ?

Ashwin Vaishnav

Train ಪ್ರಯಾಣಿಕರಿಗೆ ಇನ್ನು 20 ರೂ.ಗಳಲ್ಲಿ ಊಟ!

1-sadguru

Sadhguru; ಕಾವೇರಿ ಕಾಲಿಂಗ್‌ ಮೂಲಕ 10.9 ಕೋಟಿ ಸಸಿಗಳ ನಾಟಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

33

Lok Sabha polls: ಹಂತ-1ರ ಮತದಾನಕ್ಕೆ ಭರ್ಜರಿ ಸಿದ್ಧತೆ

Reservation: ಜನಸಂಖ್ಯೆ ಆಧಾರದಲ್ಲಿ ಮೀಸಲು ನೀಡಲು ಸಿದ್ಧರೇ?

Reservation: ಜನಸಂಖ್ಯೆ ಆಧಾರದಲ್ಲಿ ಮೀಸಲು ನೀಡಲು ಸಿದ್ಧರೇ?

Ra

Congress; ಇಂದು ರಾಜ್ಯಕ್ಕೆ ರಾಹುಲ್‌ ಗಾಂಧಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

33

Lok Sabha polls: ಹಂತ-1ರ ಮತದಾನಕ್ಕೆ ಭರ್ಜರಿ ಸಿದ್ಧತೆ

voter

ಈ ಲೋಕ ಚುನಾವಣೆ ವಿಶ್ವದಲ್ಲೇ ಅತ್ಯಂತ ದುಬಾರಿ ಚುನಾವಣೆ!

1-weeewq

Hyderabad: ಓವೈಸಿ ಪ್ರತಿಸ್ಪರ್ಧಿ, ಬಿಜೆಪಿಯ ಮಾಧವಿ ಆಸ್ತಿ 221.37 ಕೋಟಿ ರೂ.

1-weewewqe

Emotional; 11 ವರ್ಷ ಬಳಿಕ ಗಲ್ಲಿಗೆ ಗುರಿಯಾದ ಮಗಳನ್ನು ಭೇಟಿಯಾದ ತಾಯಿ!

Archery World Cup: ಆರ್ಚರಿ ವಿಶ್ವಕಪ್‌ ರಿಕರ್ವ್‌ ವಿಭಾಗದಲ್ಲೂ ಭಾರತ ಫೈನಲ್‌ಗೆ

Archery World Cup: ಆರ್ಚರಿ ವಿಶ್ವಕಪ್‌ ರಿಕರ್ವ್‌ ವಿಭಾಗದಲ್ಲೂ ಭಾರತ ಫೈನಲ್‌ಗೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.