ಕೊಗ್ರೆ ಸುತ್ತಮುತ್ತ ಮತ್ತೆ ಭೂಕಂಪನ
Team Udayavani, Aug 28, 2018, 6:00 AM IST
ಚಿಕ್ಕಮಗಳೂರು: ಜಿಲ್ಲೆಯ ಕೊಪ್ಪ ತಾಲೂಕಿನ ಕೊಗ್ರೆ ಗ್ರಾಮದ ಸುತ್ತಮುತ್ತ ಸೋಮವಾರವೂ ಮತ್ತೆ ಭೂಮಿಯೊಳಗಿನಿಂದ ಭಾರೀ ಶಬ್ದ ಕೇಳಿಸಿದ್ದು, ಭೂಮಿ ಕಂಪಿಸಿದ ಅನುಭವವಾಗಿದೆ.
ಜೂನ್ನಿಂದಲೂ ಕೊಗ್ರೆ, ಅತ್ತಿಕುಡಿಗೆ, ಬೈರೇದೇವರು, ಬೆತ್ತದಕೊಳಲು ಗ್ರಾಮಗಳಲ್ಲಿ ಭೂಮಿಯೊಳಗಿನಿಂದ ಭಾರೀ ಶಬ್ದ ಕೇಳಿ ಬರುತ್ತಿದೆ. ಶಬ್ದ ಬರುವಾಗ ಭೂಮಿ ಕಂಪಿಸಿದ ಅನುಭವವಾಗುತ್ತದೆ. ಶುಕ್ರವಾರ ಮಧ್ಯರಾತ್ರಿ ಭಾರೀ ಶಬ್ದದೊಂದಿಗೆ ಭೂಮಿ ಕಂಪಿಸಿದ ಅನುಭವವಾಗಿತ್ತು. ಎರಡು ದಿನದ ನಂತರ ಸೋಮವಾರ ಮಧ್ಯಾಹ್ನ 12.05ರ ಸಮಯದಲ್ಲಿ ಮತ್ತೂಮ್ಮೆ ಶಬ್ದ ಕೇಳಿ ಬಂದಿದೆ. “ಈ ವರೆಗೆ ಕೇಳಿ ಬಂದಿದ್ದ ಶಬ್ದಕ್ಕಿಂತಲೂ ಸೋಮವಾರ ಕೇಳಿದ ಶಬ್ದ ಬಹಳ ಜೋರಾಗಿತ್ತು. ಭೂಮಿ ಕಂಪಿಸಿದ ಅನುಭವವಾಯಿತು.
ಮನೆಯೊಳಗಿದ್ದ ಕೆಲವು ಪಾತ್ರೆಗಳೂ ನೆಲಕ್ಕುರುಳಿದವು’ಎಂದು ಗ್ರಾಮಸ್ಥರು ತಿಳಿಸಿದ್ದಾರೆ. ಭೂಕಂಪದ ಭಯ ಬೇಡ. ಆ ರೀತಿಯ ಯಾವುದೇ ಸಾಧ್ಯತೆಗಳೂ ಇಲ್ಲವೆಂದು ಜಿಲ್ಲಾಡಳಿತ ಹೇಳಿದೆಯಾದರೂ, ಪ್ರತಿನಿತ್ಯ ಈ ರೀತಿಯ ಶಬ್ದ ಕೇಳಿ ಬರುತ್ತಿರುವುದು, ಭೂಮಿ ಕಂಪಿಸಿದಂತಾಗುತ್ತಿರುವುದರಿಂದ ಗ್ರಾಮಸ್ಥರಲ್ಲಿನ ಆತಂಕ ಕಡಿಮೆಯಾಗಿಲ್ಲ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್
Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್
LS Polls: ರಾಜ್ಯದಲ್ಲಿ ಕಾಂಗ್ರೆಸ್ ವಿರೋಧಿ ಅಲೆ: ರಾಘವೇಂದ್ರ
Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…
LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…
MUST WATCH
ಹೊಸ ಸೇರ್ಪಡೆ
Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್
ಹೆಸ್ಕತ್ತೂರು ಕಟ್ಟಿನಬುಡ: ಕೃಷಿಗೆ ಆಸರೆಯಾಗದ ವಾರಾಹಿ ಕಾಲುವೆ ನೀರು!
Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ
WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್ ಮೆಟ್ಟಿಲೇರಿದ ಪ್ರಕರಣ, ಏನಿದು?