ಅನೈತಿಕ ಕೆಲಸದಲ್ಲಿ ಬಿಜೆಪಿ ಕಾಲಹರಣ: ದಿನೇಶ್
Team Udayavani, Aug 28, 2018, 6:35 AM IST
ಹಾವೇರಿ: “ಬಿಜೆಪಿಯವರು ಅನೈತಿಕ ಕೆಲಸದಲ್ಲಿಯೇ ಕಾಲಹರಣ ಮಾಡುತ್ತಿದ್ದಾರೆಯೇ ಹೊರತು ಸಮರ್ಥವಾಗಿ ವಿರೋಧ ಪಕ್ಷದ ಸ್ಥಾನವನ್ನೂ ನಿರ್ವಹಿಸುತ್ತಿಲ್ಲ’ ಎಂದು ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಆರೋಪಿಸಿದರು.
ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬಿಜೆಪಿಯವರಿಂದ ಯಾವುದೇ ಒಳ್ಳೆಯ ಉದ್ದೇಶಕ್ಕಾಗಿ ಹೋರಾಟ ನಡೆಯುತ್ತಿಲ್ಲ. ಅವರಿಗೆ ನೀತಿ, ತತ್ವ ಏನೂ ಇಲ್ಲ. ಶಾಸಕರಿಗೆ ಆಮಿಷಯೊಡ್ಡುವುದು, ಕೆಲವರ ಮೇಲೆ ಆದಾಯ ತೆರಿಗೆ ಇಲಾಖೆಯಿಂದ ದಾಳಿ ನಡೆಸುವುದು ಮಾಡುತ್ತಿದ್ದಾರೆ. ಬಿಜೆಪಿಯವರು ಕೇಂದ್ರದ ಮೇಲೆ ಒತ್ತಡ ತಂದು ಮಹದಾಯಿ ವಿವಾದ ಬಗೆಹರಿಸುವುದಾಗಲಿ, ಬರಗಾಲ ಸಂದರ್ಭದಲ್ಲಿ ರಾಜ್ಯಕ್ಕೆ ಹೆಚ್ಚು ಅನುದಾನ ತರುವುದಾಗಲಿ, ಪ್ರಕೃತಿ ವಿಕೋಪಕ್ಕೆ ಒಳಗಾಗಿರುವ ಕೊಡಗು ಜಿಲ್ಲೆಗೆ ಹೆಚ್ಚಿನ ಪರಿಹಾರಧನ ತರುವುದಕ್ಕಾಗಲಿ ಹೋರಾಟ ಮಾಡುತ್ತಿಲ್ಲ. ಬದಲಾಗಿ ಕೇವಲ ಅಧಿಕಾರಕ್ಕಾಗಿ ಹೋರಾಟ ನಡೆಸಿದ್ದಾರೆ ಎಂದರು.
ಅಕ್ಕಿ ಕಡಿತ ನಿರ್ಣಯ ಆಗಿಲ್ಲ: ರಾಜ್ಯದಲ್ಲಿ ಸಮ್ಮಿಶ್ರ ಸರ್ಕಾರ ಸ್ಥಿರವಾಗಿದ್ದು ಇದನ್ನು ಅಭದ್ರಗೊಳಿಸಲು ಬಿಜೆಪಿಯವರು, ಕೆಲ ಮಾಧ್ಯಮದವರು ಹುಡುಕಾಡುತ್ತಿದ್ದಾರೆ. ಆದರೆ, ಅವರಿಗೆ ಏನೂ ಸಿಗುತ್ತಿಲ್ಲ. ಇದು ಸಮ್ಮಿಶ್ರ ಸರ್ಕಾರವಾಗಿರುವುದರಿಂದ ಇವತ್ತಿನ ಸರ್ಕಾರದ ನೀತಿಗಳಿಗೆ ನಾವು ಬದ್ಧರಾಗಬೇಕಿದೆ. ಇದಕ್ಕಾಗಿ ಸಮನ್ವಯ ಸಮಿತಿ ರಚಿಸಲಾಗಿದ್ದು ಯಾವುದೇ ವಿಚಾರವಿದ್ದರೂ ಅಲ್ಲಿ ಚರ್ಚಿಸಿಯೇ ಮುಂದಿನ ನಿರ್ಧಾರ ಕೈಗೊಳ್ಳಲಾಗುವುದು. ಅನ್ನಭಾಗ್ಯ ಯೋಜನೆಯಲ್ಲಿ ಪೂರೈಸುವ ಅಕ್ಕಿ ಪ್ರಮಾಣದ ಬಗ್ಗೆ ಮುಖ್ಯಮಂತ್ರಿಗಳು ಈವರೆಗೆ ಯಾವುದೇ ಆದೇಶ ಮಾಡಿಲ್ಲ. ಈ ಬಗ್ಗೆ ಸಮನ್ವಯ ಸಮಿತಿಯಲ್ಲಿಯೇ ಚರ್ಚಿಸಿ ನಿರ್ಣಯ ಕೈಗೊಳ್ಳಲಾಗುವುದು ಎಂದರು.
ಸೆಪ್ಟೆಂಬರ್ನಲ್ಲಿ ಸಚಿವ ಸಂಪುಟ ವಿಸ್ತರಣೆ ನಡೆಯಲಿದ್ದು, ಆಗ ಉತ್ತರ ಕರ್ನಾಟಕಕ್ಕೆ ಹೆಚ್ಚಿನ ಆದ್ಯತೆ ನೀಡಲಾಗುವುದು. ಆ ಸಂದರ್ಭದಲ್ಲಿ ಕೆಲವು ಜಿಲ್ಲೆಗಳ ಉಸ್ತುವಾರಿ ಸಚಿವರ ಬದಲಾವಣೆ ಆದರೂ ಆಗಬಹುದು.
– ದಿನೇಶ್ ಗುಂಡೂರಾವ್, ಕೆಪಿಸಿಸಿ ಅಧ್ಯಕ್ಷ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
PSI re-examination: ಪಿಎಸ್ಐ ಮರು ಪರೀಕ್ಷೆ, ಅಂತಿಮ ಅಂಕಪಟ್ಟಿ ಬಿಡುಗಡೆ
Lok sabha polls: ಸುರೇಶ್ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್ ದಾಸ್
Congress candidate: ನಾನು ಹುಟ್ಟಿದಾಗ ಒಕ್ಕಲಿಗ, ಬೆಳೆಯುತ್ತ ವಿಶ್ವಮಾನವ: ಲಕ್ಷ್ಮಣ್
Dinesh Gundu Rao: ಕ್ಷಯ ರೋಗ ನಿಯಂತ್ರಣ ಔಷಧ ಪೂರೈಕೆಗೆ ಕೇಂದ್ರಕ್ಕೆ ಮನವಿ; ದಿನೇಶ್
Lok Sabha elections: ಸಂಸದ ಬಸವರಾಜುಗೆ “ಗೋ ಬ್ಯಾಕ್’ ಎಂದ ಬಿಜೆಪಿಗರು!
MUST WATCH
ಹೊಸ ಸೇರ್ಪಡೆ
Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್, ಸ್ಟೋಯಿನಿಸ್, ಅಗರ್ ಹೊರಕ್ಕೆ
ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್
Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್
Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್ಗಳು: ಪ್ರವಾಸಿಗರಿಗೆ ಭಯ
IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್ಗಳ ಜಯ