ವಿಮಾನ ನಿಲ್ದಾಣದಿಂದ ತಿರುಪತಿಗೆ ನೇರ ಬಸ್
Team Udayavani, Aug 28, 2018, 12:08 PM IST
ದೇವನಹಳ್ಳಿ: ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ (ಕೆಐಎಎಲ್), ತಿರುಪತಿ ನಡುವಿನ ನೇರ ಫ್ಲೈಬಸ್ ಸೇವೆಗೆ ಕೆಎಸ್ಆರ್ಟಿಸಿ ಮತ್ತು ಕೆಐಎಎಲ್ ಅಧಿಕಾರಿಗಳು ಸೋಮವಾರ ಚಾಲನೆ ನೀಡಿದರು.
ತಿರುಪತಿ ತಿಮ್ಮಪ್ಪನ ದರ್ಶನಕ್ಕಾಗಿ ದೇಶ, ವಿದೇಶಗಳಿಂದ ಬರುವ ಪ್ರಯಾಣಿಕರು ಮೊದಲು ವಿಮಾನ ನಿಲ್ದಾಣಕ್ಕೆ ಬಂದು, ನಂತರ ಮೆಜೆಸ್ಟಿಕ್ ಮೂಲಕ ತಿರುಪತಿಗೆ ತೆರಳಬೇಕಿತ್ತು. ಇದರಿಂದ ಪ್ರಯಾಣಿಕರ ಸಾಕಷ್ಟು ಸಮಯ ವ್ಯರ್ಥವಾಗುವುದನ್ನು ಮನಗೊಂಡ ಕೆಐಎಎಲ್ ಅಧಿಕಾರಿಗಳು, ಕೆಎಸ್ಸಾರ್ಟಿಸಿ ಸಹಕಾರದೊಂದಿಗೆ ತಿರುಪತಿಗೆ ನೇರ ಫ್ಲೈ ಬಸ್ ಸೇವೆ ಆರಂಭಿಸಿದ್ದಾರೆ.
ಈ ವೇಳೆ ಮಾತನಾಡಿದ ಕೆಎಸ್ಆರ್ಟಿಸಿ ಡಿಟಿಒ ಅಧಿಕಾರಿ ಶ್ರೀಕಾಂತ್, ಕೆಐಎಎಲ್ ಪ್ರಯಾಣಿಕರಿಗೆ ಅನುಕೂಲ ಕಲ್ಪಿಸುವ ದೃಷ್ಟಿಯಿಂದ ಕೆಐಎಎಲ್ನಿಂದ ತಿರುಪತಿಗೆ ಪ್ರತಿ ದಿನ ಬೆಳಗ್ಗೆ 10 ಗಂಟೆ ಹಾಗೂ ರಾತ್ರಿ 10 ಗಂಟೆಗೆ ಫ್ಲೈ ಬಸ್ಗಳು ಹೊರಡಲಿವೆ. ಹಾಗೇ ತಿರುಪತಿಯಿಂದ ಕೆಐಎಎಲ್ಗೆ ಬೆಳಗ್ಗೆ 11 ಗಂಟೆ ಹಾಗೂ ರಾತ್ರಿ 9 ಗಂಟೆಗೆ ಬಸ್ ವ್ಯವಸ್ಥೆ ಮಾಡಲಾಗಿದೆ.
ಫ್ಲೈ ಬಸ್ನ ಪ್ರತಿ ಸೀಟಿನಲ್ಲಿ ಮೊಬೈಲ್ ಚಾರ್ಜರ್, ವಿಮಾನದಲ್ಲಿ ಇರುವಂತೆ ಸೀಟ್ ಲೈಟ್ ಹಾಗೂ ಎಸಿ ವ್ಯವಸ್ಥೆ ಇರುತ್ತದೆ. ಒಮ್ಮೆ 48 ಪ್ರಯಾಣಿಕರು ಈ ಬಸ್ನಲ್ಲಿ ಸಂಚರಿಸಬಹುದಾಗಿದ್ದು, ವಿಮಾನ ನಿಲ್ದಾಣದಿಂದ ತಿರುಪತಿಗೆ 800 ರೂ. ದರ ನಿಗದಿ ಮಾಡಲಾಗಿದೆ. ಸೋಮವಾರದಿಂದ 5 ದಿನಗಳ ಕಾಲ ಫ್ಲೈ ಬಸ್ನಲ್ಲಿ ತಿರುಪತಿಗೆ ತೆರಳುವ ಪ್ರಯಾಣಿಕರಿಗೆ 500 ರೂ. ಮೌಲ್ಯದ ಗಿಫ್ಟ್ ವೋಚರ್ ನೀಡಲಾಗುವುದು ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
CCTV: ಬೆಳಗಾವಿಯಲ್ಲಿ ಹುಲಿ ಓಡಾಟದ ವಿಡಿಯೋ ವೈರಲ್… ಸುಳ್ಳು ಸುದ್ದಿ ಎಂದ ಅರಣ್ಯ ಇಲಾಖೆ
Yadgiri: ಜೆಡಿಎಸ್ ಪಕ್ಷಕ್ಕೆ ಅಂಗಲಾಚುವ ಸ್ಥಿತಿ ಬಂದಿಲ್ಲ… ಶಾಸಕ ಕಂದಕೂರು
ಕಾಂಗ್ರೆಸ್ ಸರಕಾರ ಬಂದಾಗಿನಿಂದ ರಾಜ್ಯದಲ್ಲಿ ಹಿಂದೂಗಳಿಗೆ ರಕ್ಷಣೆಯೇ ಇಲ್ಲದಾಗಿದೆ: ಜೋಶಿ
ಪೊಲೀಸರ ಭರ್ಜರಿ ಕಾರ್ಯಾಚರಣೆ: ದಾಖಲೆ ಇಲ್ಲದೇ ಕಾರಿನಲ್ಲಿ ಸಾಗಿಸುತ್ತಿದ್ದ 2.93 ಕೋಟಿ ಜಪ್ತಿ
Bengaluru:ನಗರ್ತಪೇಟೆಯಲ್ಲಿ ಬಿಜೆಪಿ ಪ್ರತಿಭಟನೆಯ ಕಿಚ್ಚು; ಕ್ರಮದ ಭರವಸೆ, ಪ್ರತಿಭಟನೆ ವಾಪಸ್
MUST WATCH
ಹೊಸ ಸೇರ್ಪಡೆ
Panaji; ಹೊಸ ದಾಖಲೆ ನಿರ್ಮಿಸಿದ ಗೋವಾ ಮುಖ್ಯಮಂತ್ರಿ ಪ್ರಮೋದ್ ಸಾವಂತ್
ರಾಷ್ಟ್ರೀಯ ನಾಟ್ಯೋತ್ಸವ; ದೇಶವೇ ಕೆರೆಮನೆಯತ್ತ ನೋಡುವಂತಾಗಿದ್ದು ಸಾಧನೆ
Thirthahalli ಅಂಗನವಾಡಿ ಮಿಲೆಟ್ ಲಡ್ಡು ಮಿಶ್ರಣದಲ್ಲಿ ಹುಳು ಪ್ರತ್ಯಕ್ಷ !
CCTV: ಬೆಳಗಾವಿಯಲ್ಲಿ ಹುಲಿ ಓಡಾಟದ ವಿಡಿಯೋ ವೈರಲ್… ಸುಳ್ಳು ಸುದ್ದಿ ಎಂದ ಅರಣ್ಯ ಇಲಾಖೆ
ಬ್ಯಾಡಗಿ: ಮೆಣಸಿನಕಾಯಿ ವಹಿವಾಟು ಸುಗಮ; ಪೊಲೀಸ್ ಭದ್ರತೆ