ತೋಟಗಾರಿಕೆ ಹಾನಿಗೆ ವಿಶೇಷ ಪ್ಯಾಕೇಜ್ ಬೇಕು
Team Udayavani, Aug 29, 2018, 6:00 AM IST
ಮಡಿಕೇರಿ: ಕೊಡಗಿನಲ್ಲಿ ಸಂಭವಿಸಿದ ಪ್ರಕೃತಿ ವಿಕೋಪದಿಂದ ತೋಟಗಾರಿಕಾ ಕ್ಷೇತ್ರಕ್ಕೆ 82 ಕೋಟಿ ರೂ. ಗಳಷ್ಟು ನಷ್ಟವಾಗಿದ್ದು, ವಿಶೇಷ ಪರಿಹಾರದ ಪ್ಯಾಕೇಜ್ ಘೋಷಿಸುವಂತೆ ಮುಖ್ಯಮಂತ್ರಿಯವರಲ್ಲಿ ಮನವಿ ಮಾಡಿಕೊಳ್ಳುವುದಾಗಿ ಕೃಷಿ ಸಚಿವ ಶಿವಶಂಕರ ರೆಡ್ಡಿ ತಿಳಿಸಿದ್ದಾರೆ.
ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಆಗಸ್ಟ್ನಲ್ಲಿ ಕೊಡಗಿನಲ್ಲಿ 900 ಮಿ.ಮೀ.ಗೂ ಅಧಿಕ ಮಳೆಯಾಗಿದ್ದರೆ, ಪ್ರಕೃತಿ ವಿಕೋಪ ಸಂಭವಿಸಿದ ಒಂದು ವಾರದ ಅವಧಿಯಲ್ಲಿ ದಾಖಲೆಯ 450 ಮಿ.ಮೀ. ಮಳೆಯಾಗಿದೆ. 8,500 ಹೆಕ್ಟೇರ್ ಕರಿಮೆಣಸು, 800
ಹೆಕ್ಟೇರ್ ಬಾಳೆ, 600 ಹೆಕ್ಟೇರ್ ಶುಂಠಿ, 1200 ಹೆಕ್ಟೇರ್ ಅಡಿಕೆ, 9,800 ಹೆಕ್ಟೇರ್ ಭತ್ತ, 4,000 ಹೆಕ್ಟೇರ್ ಪ್ರದೇಶದಲ್ಲಿ ಬೆಳೆದ ಮೆಕ್ಕೆಜೋಳ ಸೇರಿ 35 ಸಾವಿರ ಹೆಕ್ಟೇರ್ ಪ್ರದೇಶದ ಕೃಷಿ ಬೆಳೆ ನಾಶವಾಗಿದೆ. ಕಾμ ಬೆಳೆ ಶೇ.90 ರಷ್ಟು ಭಾಗ ನಷ್ಟವಾಗಿದ್ದು, ಇದರ ಅಂದಾಜು 350 ಕೋಟಿ ರೂ.ಗಳಷ್ಟಾಗಿದೆ. ನೂತನ ತಂತ್ರಜಾnನದ ಆ್ಯಪ್ ಬಳಸಿ ಬೆಳೆ ನಷ್ಟದ ಕುರಿತು ಸರ್ವೇ ಮತ್ತು ಸಮೀಕ್ಷೆ ನಡೆಸಿ ವರದಿ ತಯಾರಿಸಲಾಗುವುದು. ತೋಟಗಾರಿಕಾ ಬೆಳೆಗಳ ನಷ್ಟದ ಸಮೀಕ್ಷೆ ನಡೆಸಲು ಈಗಾಗಲೇ 60 ಅಧಿಕಾರಿಗಳನ್ನು ನಿಯೋಜಿಸಲಾಗಿದ್ದು, ಶೇ.30ರಷ್ಟು ಸರ್ವೇ ಕಾರ್ಯ ಪೂರ್ಣಗೊಂಡಿದೆ. ಇನ್ನು 15 ದಿನಗಳಲ್ಲಿ ಸಮೀಕ್ಷೆ ಪೂರ್ಣಗೊಂಡು ಅಧಿಕಾರಿಗಳು ವರದಿ ನೀಡಲಿದ್ದಾರೆ. ಕೃಷಿ ಕ್ಷೇತ್ರಕ್ಕೆ ಸಂಬಂಧಿಸಿದಂತೆ ಮುಂದಿನ
15 ದಿನಗಳಲ್ಲಿ ಪರಿಹಾರ ವಿತರಿಸುವ ಪ್ರಕ್ರಿಯೆ ನಡೆಯಲಿದೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ
Modi ಹಸಿ ಸುಳ್ಳು: ಸಿಎಂ ಸಿದ್ದರಾಮಯ್ಯ ಕೆಂಡ; ಒಬಿಸಿ, ಎಸ್ಸಿ ಮೀಸಲಾತಿ ಹೇಳಿಕೆಗೆ ವಿರೋಧ
Lok Sabha Election; ಹಂತ 1: 14 ಕ್ಷೇತ್ರಗಳ ಬಹಿರಂಗ ಪ್ರಚಾರ ಅಂತ್ಯ: ನಾಳೆ ಮತದಾನ
ಅನಂತಸ್ವಾಮಿ ಧಾಟಿಯಲ್ಲೇ ನಾಡಗೀತೆ; ರಾಜ್ಯ ಸರಕಾರದ ಆದೇಶ ಎತ್ತಿಹಿಡಿದ ಹೈಕೋರ್ಟ್
Exam; ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ-2ಕ್ಕೆ 1.49 ಲಕ್ಷ ವಿದ್ಯಾರ್ಥಿಗಳ ನೋಂದಣಿ
MUST WATCH
ಹೊಸ ಸೇರ್ಪಡೆ
Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ
Daily Horoscope: ಉದ್ಯೋಗದಲ್ಲಿ ಮೇಲಧಿಕಾರಿಗಳಿಗೆ ತೃಪ್ತಿ, ಅಪೇಕ್ಷಿತ ಆರ್ಥಿಕ ನೆರವು ಲಭ್ಯ
Modi ಹಸಿ ಸುಳ್ಳು: ಸಿಎಂ ಸಿದ್ದರಾಮಯ್ಯ ಕೆಂಡ; ಒಬಿಸಿ, ಎಸ್ಸಿ ಮೀಸಲಾತಿ ಹೇಳಿಕೆಗೆ ವಿರೋಧ
Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ
Lok Sabha Election; ಹಂತ 1: 14 ಕ್ಷೇತ್ರಗಳ ಬಹಿರಂಗ ಪ್ರಚಾರ ಅಂತ್ಯ: ನಾಳೆ ಮತದಾನ