ಸಮ್ಮಿಶ್ರ ಸರ್ಕಾರಕ್ಕೆ ಶತಕ ಕಾಂಗ್ರೆಸ್‌ನಲ್ಲಿಲ್ಲ ಸಂಭ್ರಮ


Team Udayavani, Aug 30, 2018, 6:25 AM IST

congress-700.jpg

ಬೆಂಗಳೂರು: ರಾಜ್ಯ ಸಮ್ಮಿಶ್ರ ಸರ್ಕಾರಕ್ಕೆ ನೂರು ದಿನ ತುಂಬಿದ್ದು, ಸರ್ಕಾರದ ಭಾಗವಾಗಿರುವ ಕಾಂಗ್ರೆಸ್‌ನಲ್ಲಿ ಯಾವುದೇ ಸಂಭ್ರಮದ ವಾತಾವರಣ ಕಂಡು ಬರುತ್ತಿಲ್ಲ. ಉಪ ಮುಖ್ಯಮಂತ್ರಿ ಪರಮೇಶ್ವರ್‌ ಸಮಾಧಾನಕ್ಕೆ ಪತ್ರಿಕಾಗೋಷ್ಠಿ ನಡೆಸಿ ಸರ್ಕಾರ ಮತ್ತು ಪಕ್ಷದಲ್ಲಿ ಯಾವುದೇ ಗೊಂದಲ ಇಲ್ಲ ಎನ್ನುವುದನ್ನು ಬಿಂಬಿಸುವ ಪ್ರಯತ್ನ ನಡೆಸಿದರು.

ಆದರೆ, ಪಕ್ಷದಲ್ಲಿ ಆಂತರಿಕವಾಗಿ ಶಾಸಕರು ಹಾಗೂ ಪಕ್ಷದ ಮುಖಂಡರಿಗೆ ಸರ್ಕಾರದಲ್ಲಿ ಮಾನ್ಯತೆ ದೊರೆಯುತ್ತಿಲ್ಲ ಎಂಬ ಅಸಮಾಧಾನ ಮನೆ ಮಾಡಿದೆ. ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ  ಒಂದು ರೀತಿಯಲ್ಲಿ ಮೌನ ತಾಳಿರುವುದು  ಮತ್ತು ಅವಕಾಶ ಸಿಕ್ಕಾಗಲೆಲ್ಲಾ ಪರೋಕ್ಷವಾಗಿ ಸರ್ಕಾರದ ತೀರ್ಮಾನಗಳ ಬಗ್ಗೆ ತಮ್ಮ ಆಪ್ತರ ಬಳಿ ಅಸಮಧಾನ ತೋಡಿಕೊಳ್ಳುತ್ತಿರುವುದು ದೋಸ್ತಿಗಳಲ್ಲಿ ಎಲ್ಲವೂ ಸರಿಯಿಲ್ಲ ಎನ್ನುವುದನ್ನು ಸೂಚಿಸುತ್ತದೆ.

ಕಾಂಗ್ರೆಸ್‌ ಶಾಸಕರು ತಮ್ಮ ಕ್ಷೇತ್ರದ ಕೆಲಸಗಳಿಗೆ ಸಚಿವರು ಹಾಗೂ ಮುಖ್ಯಮಂತ್ರಿ ಬಳಿ ಹೋದರೆ ಯಾವುದೇ ಬೆಲೆ ಸಿಗುತ್ತಿಲ್ಲ ಎಂದು ಅನೇಕ ಶಾಸಕರು ಸಿದ್ದರಾಮಯ್ಯ ಬಳಿ ಅಳಲು ತೋಡಿಕೊಂಡಿದ್ದರು. ಅಧಿಕಾರಿಗಳ ವರ್ಗಾವಣೆ ವಿಷಯದಲ್ಲಿಯೂ ಸೋತ ಜೆಡಿಎಸ್‌ ಅಭ್ಯರ್ಥಿಗಳು ಹೇಳಿದವರನ್ನು ವರ್ಗಾವಣೆ ಮಾಡಲಾಗುತ್ತಿದೆ ಕೆಲ ಕಾಂಗ್ರೆಸ್‌ ಶಾಸಕರು ಎಂದು ಆರೋಪಿಸಿದ್ದರು.

ಅಲ್ಲದೇ ಹಿಂದಿನ ಸಿದ್ದರಾಮಯ್ಯ ಸರ್ಕಾರದಲ್ಲಿ ಘೋಷಣೆ ಮಾಡಿದ್ದ ಅನೇಕ ಯೋಜನೆಗಳಿಗೆ ಕತ್ತರಿ ಹಾಕುವ ಮೂಲಕ ಮುಖ್ಯಮಂತ್ರಿ ಕುಮಾರಸ್ವಾಮಿ ಏಕ ಪಕ್ಷೀಯ ನಿರ್ಧಾರಗಳನ್ನು ತೆಗೆದುಕೊಳ್ಳುತ್ತಿದ್ದಾರೆ ಎಂದು ದೂರಿದ್ದಾರೆ.

ಕೆಪಿಸಿಸಿ ಅಧ್ಯಕ್ಷ ಹಾಗೂ ಕಾರ್ಯಾಧ್ಯಕ್ಷ ಈಶ್ವರ್‌ ಖಂಡ್ರೆ ಸ್ಥಳೀಯ ಸಂಸ್ಥೆಗಳ ಚುನಾವಣೆ ಪ್ರಚಾರಕ್ಕೆ ಕಳೆದ ಐದು ದಿನಗಳಲ್ಲಿ ರಾಜ್ಯಾದ್ಯಂತ ಪ್ರವಾಸ ಮಾಡಿದ್ದು, ಈ ಸಂದರ್ಭದಲ್ಲಿ ಜಿಲ್ಲಾ ಮುಖಂಡರಿಂದ ಹಿಡಿದು, ತಳ ಮಟ್ಟದ ಕಾರ್ಯಕರ್ತರು ಸಮ್ಮಿಶ್ರ ಸರ್ಕಾರದ ಬಗ್ಗೆ ದೂರುಗಳನ್ನು ಸಲ್ಲಿಸಿದ್ದಾರೆ ಎನ್ನಲಾಗಿದೆ. ಈ ಎಲ್ಲಾ ವಿಚಾರಗಳನ್ನು ಕೆಪಿಸಿಸಿ ಅಧ್ಯಕ್ಷ ದಿನೇಶ್‌ ಗುಂಡೂರಾವ್‌ ರಾಜ್ಯ ಕಾಂಗ್ರೆಸ್‌ ಉಸ್ತುವಾರಿ ಕೆ.ಸಿ. ವೇಣುಗೋಪಾಲ್‌ ಅವರ ಗಮನಕ್ಕೂ ತಂದಿದ್ದಾರೆ ಎಂದು ತಿಳಿದು ಬಂದಿದೆ.

ಹೀಗಾಗಿ ಆ.31ರಂದು ನಡೆಯಲಿರುವ ಸಮನ್ವಯ ಸಮಿತಿ ಸಭೆ ಮಹತ್ವ ಪಡೆದಿದೆ.

ಟಾಪ್ ನ್ಯೂಸ್

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

2-rain

Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ

1-24-saturday

Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್‌ ಧನಪ್ರಾಪ್ತಿ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

voter

Vote ಮಾಡದಿದ್ದರೆ ಬ್ಯಾಂಕ್‌ ಖಾತೆಯಿಂದ 350 ರೂ. ಕಡಿತ?

gold

Gold 10 ಗ್ರಾಂ ಬೆಲೆ 74,100 ರೂ.: ಇದು ನೂತನ ದಾಖಲೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

ರಾಜ್ಯ 2ನೇ ಹಂತ: 337 ಮಂದಿ ಕಣಕ್ಕೆ: ನಾಮಪತ್ರ ಸಲ್ಲಿಕೆ ಮುಕ್ತಾಯ, ಇಂದು ಪರಿಶೀಲನೆ

ರಾಜ್ಯ 2ನೇ ಹಂತ: 337 ಮಂದಿ ಕಣಕ್ಕೆ: ನಾಮಪತ್ರ ಸಲ್ಲಿಕೆ ಮುಕ್ತಾಯ, ಇಂದು ಪರಿಶೀಲನೆ

aaa

ನೇಹಾ ಕಗ್ಗೊಲೆ ಆಕಸ್ಮಿಕ, ವೈಯಕ್ತಿಕ ಸರಕಾರದ ಹೇಳಿಕೆ ವಿವಾದ, ಆಕ್ರೋಶ

1-weweqwe

Globant; ಮನೆಯಿಂದಲೇ 30,000 ಮಂದಿ ಕೆಲಸ

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

2-rain

Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ

1-24-saturday

Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್‌ ಧನಪ್ರಾಪ್ತಿ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

1-qweqwqe

Ban in Singapore; ಎವರೆಸ್ಟ್‌ ಮಸಾಲಾದಲ್ಲಿ ಕ್ರಿಮಿನಾಶಕ ಅಂಶ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.