ಮುಂದಿನ ಚುನಾವಣೆ: ಕೈಗೆ ಪಾಠ
Team Udayavani, Aug 30, 2018, 6:00 AM IST
ಬೆಂಗಳೂರು: “ಲೋಕಸಭೆ ಚುನಾವಣೆಯಲ್ಲಿ ಹೈದರಾಬಾದ್ ಕರ್ನಾಟಕ ಭಾಗದಲ್ಲಿ ಕಾಂಗ್ರೆಸ್ಗೆ ಪಾಠ ಕಲಿಸಲಾಗುವುದು’ ಎಂದು ಮಾಜಿ ಸಚಿವ ಬಾಬೂರಾವ್ ಚಿಂಚನಸೂರ್ ಹೇಳಿದ್ದಾರೆ.
ಬುಧವಾರ ಬಿಜೆಪಿ ಸೇರ್ಪಡೆಗೊಂಡ ನಂತರ ಸುದ್ದಿಗಾರರ ಜತೆ ಮಾತನಾಡಿದ ಅವರು, ವಿಧಾನಸಭೆ ಚುನಾವಣೆಯಲ್ಲಿ ಪಿತೂರಿ ಮಾಡಿ ನನ್ನನ್ನು ಸೋಲಿಸಲಾಯಿತು. ಇದಕ್ಕೆ ಲೋಕಸಭೆ ಚುನಾವಣೆಯಲ್ಲಿ ಪ್ರತ್ಯುತ್ತರ ನೀಡಲಿದ್ದೇನೆ ಎಂದರು.
ನಾನು ಮಲ್ಲಿಕಾರ್ಜುನ ಖರ್ಗೆ ಅವರ ಬಗ್ಗೆ ಮಾತನಾಡುವುದಿಲ್ಲ ಎಂದು ಹೇಳುತ್ತಲೇ ಪರೋಕ್ಷವಾಗಿ ವಾಗ್ಧಾಳಿ ನಡೆಸಿದರು. ನಾನು ಐದು ಬಾರಿ ವಿಧಾನಸಭೆಗೆ ಆಯ್ಕೆಯಾಗಿದ್ದೇನೆ. ಇದನ್ನು ಸಹಿಸದೆ ನನ್ನ ವಿರುದ್ಧ ಷಡ್ಯಂತ್ರ ರೂಪಿಸಲಾಯಿತು. ನನ್ನನ್ನು ಬಿಜೆಪಿ ಅಥವಾ ಜೆಡಿಎಸ್ ಸೋಲಿಸಿಲ್ಲ.
ಕಾಂಗ್ರೆಸ್ನವರೇ ಸೋಲಿಸಿದರು ಎಂದರು. ಮಾಜಿ ಸಚಿವ ಮಾಲೀಕಯ್ಯ ಗುತ್ತೇದಾರ್ ಮಾತನಾಡಿ, ಮಲ್ಲಿಕಾರ್ಜುನ ಖರ್ಗೆ ಅವರು ನಮ್ಮ ಏಳಿಗೆ ಸಹಿಸದೆ ತುಳಿಯುವ ಕೆಲಸ ಮಾಡಿದರು. ಮೊದಲ ಬಾರಿಗೆ ಗೆದ್ದ ಅವರ ಪುತ್ರನಿಗೆ ಸಚಿವ ಸ್ಥಾನ ಕೊಡಿಸಿ ನಮಗೆ ಆನ್ಯಾಯ ಮಾಡಿದರು ಎಂದು ದೂರಿದರು.
ನಾನು ಹಾಗೂ ಬಾಬೂರಾವ್ ಚಿಂಚನಸೂರ್ ಅವರು ಹೈ-ಕ ಭಾಗದಲ್ಲಿ ನಮ್ಮದೇ ಮತಬ್ಯಾಂಕ್ ಹೊಂದಿದ್ದೇವೆ. ನಮ್ಮ ಶಕ್ತಿ ಪ್ರದರ್ಶನ ಮಾಡಿ ಮುಂದಿನ ಚುನಾವಣೆಯಲ್ಲಿ ಬಿಜೆಪಿ ಗೆಲ್ಲುವಂತೆ ನೋಡಿಕೊಳ್ಳುತ್ತೇವೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ
Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್ರಿಂದ ಪರಿಶೀಲನೆ
Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ
Lok Sabha Election: ‘ಬಿವೈಆರ್ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’
ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ
MUST WATCH
ಹೊಸ ಸೇರ್ಪಡೆ
Bajpe: ಹೆದ್ದಾರಿಯಲ್ಲಿ ಬ್ರೇಕ್ ಫೇಲ್ ಆಗಿ ಅಂಗಡಿಗಳು, ಹಲವು ವಾಹನಗಳಿಗೆ ಗುದ್ದಿದ ಲಾರಿ!
ಧರ್ಮ ಮಾರ್ಗದಲ್ಲಿ ನಡೆದರಷ್ಟೇ ಜೀವನ ಸಾರ್ಥಕ: ಶ್ರೀ ವಿಧುಶೇಖರಶ್ರೀ
CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ
Karkala: ಕಾಂಗ್ರೆಸ್ಸಿನಿಂದ ಬೃಹತ್ ಪರಿವರ್ತನಾ ರ್ಯಾಲಿ
Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ