ಕೊಡಗಿನಲ್ಲಿ ಭೂಕಂಪ ದಾಖಲಿಸುವ ಸಿಸ್ಮೋಮೀಟರ್‌ ಮಾಪಕ ಅಳವಡಿಕೆ


Team Udayavani, Aug 30, 2018, 6:00 AM IST

z-bhukampana-seismo-meeter-4.jpg

ಮಡಿಕೇರಿ: ಕೊಡಗಿನಲ್ಲಿ ಸಂಭವಿಸಿದ ಪ್ರಕೃತಿ ವಿಕೋಪಗಳ ಅಧ್ಯಯನ ನಡೆಸಲು ಮಡಿಕೇರಿಗೆ ಆಗಮಿಸಿರುವ ಹಿರಿಯ ಭೂ ವಿಜ್ಞಾನಿಗಳ ತಂಡ, ಗಾಳಿಬೀಡು ನವೋದಯ ಕೇಂದ್ರೀಯ ವಿದ್ಯಾಲಯದಲ್ಲಿ ಭೂಕಂಪನವನ್ನು ದಾಖಲಿಸುವ ಸಿಸ್ಮೋಮೀಟರ್‌ ಮಾಪಕವನ್ನು ಅಳವಡಿಸಿದೆ.

ಹೈದರಾಬಾದ್‌ನಲ್ಲಿರುವ ರಾಷ್ಟ್ರೀಯ ಭೂಗರ್ಭಶಾಸ್ತ್ರ ಅಧ್ಯಯನ ಸಂಸ್ಥೆಯ ಹಿರಿಯ ವಿಜ್ಞಾನಿ ಡಾ|ರಾಘವನ್‌ ಮತ್ತು ಅಧಿಕಾರಿಗಳು ಭೂಕುಸಿತಕ್ಕೊಳಗಾದ ಸ್ಥಳಗಳ ಪರಿಶೀಲನೆ ನಡೆಸಿದ್ದು, ಕೆಲವು ಭಾಗಗಳಲ್ಲಿ ಬೆಟ್ಟ ಕುಸಿದಿರುವ ಮಣ್ಣನ್ನು ಪರೀಕ್ಷೆಗೆ ಒಳಪಡಿಸಲು ಹೈದರಾಬಾದ್‌ಗೆ ಕೊಂಡೊಯ್ದಿದ್ದಾರೆ. ವಿದ್ಯಾಲಯದ ಕೊಠಡಿಯಲ್ಲಿ 3 ಅಡಿ ಆಳದಲ್ಲಿ ಗುಂಡಿ ತೋಡಿ, ಸಿಸ್ಮೋಮೀಟರ್‌ ಮಾಪಕ ಅಳವಡಿಸಲಾಗಿದೆ. ಈ ಮಾಪಕಕ್ಕೆ ದಿನವಿಡೀ ಕಾರ್ಯ ನಿರ್ವಹಿಸಲು ಸಾಧ್ಯವಾಗುವಂತೆ ಸೋಲಾರ್‌, ಬ್ಯಾಟರಿ ಮತ್ತು ವಿದ್ಯುತ್‌ ಪೂರೈಕೆ ವ್ಯವಸ್ಥೆಯನ್ನು ಮಾಡಲಾಗಿದೆ. ಈ ಮಾಪಕ ದಾಖಲಿಸುವ ಕಂಪನಗಳನ್ನು ಹೈದರಾಬಾದ್‌ನಲ್ಲಿರುವ ಭೂಗರ್ಭಶಾಸ್ತ್ರ ಅಧ್ಯಯನ ಸಂಸ್ಥೆಗೆ ಸಂಪರ್ಕಿಸಲು ವಿಶೇಷವಾದ ಅಂತರ್ಜಾಲ ವ್ಯವಸ್ಥೆಯನ್ನು ಕೂಡ ಕಲ್ಪಿಸಲಾಗಿದ್ದು, ಪ್ರತಿ ಕ್ಷಣದ ನಿಖರ ಮಾಹಿತಿಯನ್ನು ಪರೀಕ್ಷೆಗೆ ಒಳಪಡಿಸಲಾಗುತ್ತದೆ.

ಈ ಯಂತ್ರವನ್ನು ಅಮೆರಿಕದಿಂದ ಖರೀದಿಸಿ ತರಲಾಗಿದ್ದು, ಇದರ ಬೆಲೆ 6 ಲಕ್ಷ ರೂ. ಇದು ರಾಜ್ಯದಲ್ಲಿ ಅಳವಡಿಸಲಾಗಿರುವ 2ನೇ ಮಾಪಕವಾಗಿದ್ದು, ಮೊದಲ ಮಾಪಕ ಧಾರವಾಡದಲ್ಲಿದೆ. ಈ ಮಾಪಕ ಭೂ ಪದರದ ಕಂಪನವನ್ನು ದಾಖಲಿಸಿ, ಹೈದರಾಬಾದ್‌ನ ರಿಸೀವ್‌ ಸೆಂಟರ್‌ಗೆ ದತ್ತಾಂಶ ಸಹಿತ ವರದಿ ಮಾಡುತ್ತದೆ. ಜಗತ್ತಿನ ಯಾವುದೇ ಭಾಗದಲ್ಲಿ 5 ಮತ್ತು ಮೇಲ್ಪಟ್ಟ ತೀವ್ರತೆಯ ಪ್ರಮಾಣದಲ್ಲಿ ಭೂಮಿ ಕಂಪಿಸಿದರೆ ಇದರಲ್ಲಿ ವಿವರ ದಾಖಲಾಗುತ್ತದೆ. 3 ರಿಂದ 5ರಷ್ಟು ಪ್ರಮಾಣದ ಕಂಪನ ಭಾರತದ ಯಾವುದೇ ಭಾಗದಲ್ಲಿ ಸಂಭವಿಸಿದರೂ ಅದನ್ನು ದಾಖಲಿಸಿ ಹೈದರಾಬಾದ್‌ನಲ್ಲಿರುವ ತರಂಗಾಂತರ ಸ್ವೀಕೃತಿ ಕೇಂದ್ರಕ್ಕೆ ರವಾನಿಸುತ್ತದೆ.

ಈ ಮಧ್ಯೆ, ಎರಡು ದಿನಗಳಿಂದ ಕಾಲೂರು, ಗಾಳಿಬೀಡು, ಮೊಣ್ಣಂಗೇರಿ ಹಾಗೂ ಸಂಪಾಜೆ ಭೂ ಭಾಗದಲ್ಲಿ ಸಣ್ಣ ಪ್ರಮಾಣದಲ್ಲಿ ಕಂಪನವಾಗಿರುವುದು ಕಂಡು ಬಂದಿದೆ. ಆದರೆ, ಯಾವುದೇ ಅಪಾಯವಿಲ್ಲವೆಂದು ಅಧಿಕಾರಿಗಳು ತಿಳಿಸಿದ್ದಾರೆ.

ಟಾಪ್ ನ್ಯೂಸ್

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Lok Sabha Election: ‘ಬಿವೈಆರ್‌ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’

Lok Sabha Election: ‘ಬಿವೈಆರ್‌ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ

ಕೊಪ್ಪಳ: ಮಗ ರಾಜಶೇಖರ ವಿರುದ್ಧ ತಂದೆ ನಾಮಪತ್ರ ಸಲ್ಲಿಕೆ!

ಕೊಪ್ಪಳ: ಮಗ ರಾಜಶೇಖರ ವಿರುದ್ಧ ತಂದೆ ನಾಮಪತ್ರ ಸಲ್ಲಿಕೆ!

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Usire Usire: ಕೈ ಕೊಟ್ಟ ನಿರ್ದೇಶಕ; ನಿರ್ಮಾಪಕ ಕಂಗಾಲು

Usire Usire: ಕೈ ಕೊಟ್ಟ ನಿರ್ದೇಶಕ; ನಿರ್ಮಾಪಕ ಕಂಗಾಲು

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.