ಕೊಡಗಿನಲ್ಲಿ ಭೂಕಂಪ ದಾಖಲಿಸುವ ಸಿಸ್ಮೋಮೀಟರ್‌ ಮಾಪಕ ಅಳವಡಿಕೆ


Team Udayavani, Aug 30, 2018, 6:00 AM IST

z-bhukampana-seismo-meeter-4.jpg

ಮಡಿಕೇರಿ: ಕೊಡಗಿನಲ್ಲಿ ಸಂಭವಿಸಿದ ಪ್ರಕೃತಿ ವಿಕೋಪಗಳ ಅಧ್ಯಯನ ನಡೆಸಲು ಮಡಿಕೇರಿಗೆ ಆಗಮಿಸಿರುವ ಹಿರಿಯ ಭೂ ವಿಜ್ಞಾನಿಗಳ ತಂಡ, ಗಾಳಿಬೀಡು ನವೋದಯ ಕೇಂದ್ರೀಯ ವಿದ್ಯಾಲಯದಲ್ಲಿ ಭೂಕಂಪನವನ್ನು ದಾಖಲಿಸುವ ಸಿಸ್ಮೋಮೀಟರ್‌ ಮಾಪಕವನ್ನು ಅಳವಡಿಸಿದೆ.

ಹೈದರಾಬಾದ್‌ನಲ್ಲಿರುವ ರಾಷ್ಟ್ರೀಯ ಭೂಗರ್ಭಶಾಸ್ತ್ರ ಅಧ್ಯಯನ ಸಂಸ್ಥೆಯ ಹಿರಿಯ ವಿಜ್ಞಾನಿ ಡಾ|ರಾಘವನ್‌ ಮತ್ತು ಅಧಿಕಾರಿಗಳು ಭೂಕುಸಿತಕ್ಕೊಳಗಾದ ಸ್ಥಳಗಳ ಪರಿಶೀಲನೆ ನಡೆಸಿದ್ದು, ಕೆಲವು ಭಾಗಗಳಲ್ಲಿ ಬೆಟ್ಟ ಕುಸಿದಿರುವ ಮಣ್ಣನ್ನು ಪರೀಕ್ಷೆಗೆ ಒಳಪಡಿಸಲು ಹೈದರಾಬಾದ್‌ಗೆ ಕೊಂಡೊಯ್ದಿದ್ದಾರೆ. ವಿದ್ಯಾಲಯದ ಕೊಠಡಿಯಲ್ಲಿ 3 ಅಡಿ ಆಳದಲ್ಲಿ ಗುಂಡಿ ತೋಡಿ, ಸಿಸ್ಮೋಮೀಟರ್‌ ಮಾಪಕ ಅಳವಡಿಸಲಾಗಿದೆ. ಈ ಮಾಪಕಕ್ಕೆ ದಿನವಿಡೀ ಕಾರ್ಯ ನಿರ್ವಹಿಸಲು ಸಾಧ್ಯವಾಗುವಂತೆ ಸೋಲಾರ್‌, ಬ್ಯಾಟರಿ ಮತ್ತು ವಿದ್ಯುತ್‌ ಪೂರೈಕೆ ವ್ಯವಸ್ಥೆಯನ್ನು ಮಾಡಲಾಗಿದೆ. ಈ ಮಾಪಕ ದಾಖಲಿಸುವ ಕಂಪನಗಳನ್ನು ಹೈದರಾಬಾದ್‌ನಲ್ಲಿರುವ ಭೂಗರ್ಭಶಾಸ್ತ್ರ ಅಧ್ಯಯನ ಸಂಸ್ಥೆಗೆ ಸಂಪರ್ಕಿಸಲು ವಿಶೇಷವಾದ ಅಂತರ್ಜಾಲ ವ್ಯವಸ್ಥೆಯನ್ನು ಕೂಡ ಕಲ್ಪಿಸಲಾಗಿದ್ದು, ಪ್ರತಿ ಕ್ಷಣದ ನಿಖರ ಮಾಹಿತಿಯನ್ನು ಪರೀಕ್ಷೆಗೆ ಒಳಪಡಿಸಲಾಗುತ್ತದೆ.

ಈ ಯಂತ್ರವನ್ನು ಅಮೆರಿಕದಿಂದ ಖರೀದಿಸಿ ತರಲಾಗಿದ್ದು, ಇದರ ಬೆಲೆ 6 ಲಕ್ಷ ರೂ. ಇದು ರಾಜ್ಯದಲ್ಲಿ ಅಳವಡಿಸಲಾಗಿರುವ 2ನೇ ಮಾಪಕವಾಗಿದ್ದು, ಮೊದಲ ಮಾಪಕ ಧಾರವಾಡದಲ್ಲಿದೆ. ಈ ಮಾಪಕ ಭೂ ಪದರದ ಕಂಪನವನ್ನು ದಾಖಲಿಸಿ, ಹೈದರಾಬಾದ್‌ನ ರಿಸೀವ್‌ ಸೆಂಟರ್‌ಗೆ ದತ್ತಾಂಶ ಸಹಿತ ವರದಿ ಮಾಡುತ್ತದೆ. ಜಗತ್ತಿನ ಯಾವುದೇ ಭಾಗದಲ್ಲಿ 5 ಮತ್ತು ಮೇಲ್ಪಟ್ಟ ತೀವ್ರತೆಯ ಪ್ರಮಾಣದಲ್ಲಿ ಭೂಮಿ ಕಂಪಿಸಿದರೆ ಇದರಲ್ಲಿ ವಿವರ ದಾಖಲಾಗುತ್ತದೆ. 3 ರಿಂದ 5ರಷ್ಟು ಪ್ರಮಾಣದ ಕಂಪನ ಭಾರತದ ಯಾವುದೇ ಭಾಗದಲ್ಲಿ ಸಂಭವಿಸಿದರೂ ಅದನ್ನು ದಾಖಲಿಸಿ ಹೈದರಾಬಾದ್‌ನಲ್ಲಿರುವ ತರಂಗಾಂತರ ಸ್ವೀಕೃತಿ ಕೇಂದ್ರಕ್ಕೆ ರವಾನಿಸುತ್ತದೆ.

ಈ ಮಧ್ಯೆ, ಎರಡು ದಿನಗಳಿಂದ ಕಾಲೂರು, ಗಾಳಿಬೀಡು, ಮೊಣ್ಣಂಗೇರಿ ಹಾಗೂ ಸಂಪಾಜೆ ಭೂ ಭಾಗದಲ್ಲಿ ಸಣ್ಣ ಪ್ರಮಾಣದಲ್ಲಿ ಕಂಪನವಾಗಿರುವುದು ಕಂಡು ಬಂದಿದೆ. ಆದರೆ, ಯಾವುದೇ ಅಪಾಯವಿಲ್ಲವೆಂದು ಅಧಿಕಾರಿಗಳು ತಿಳಿಸಿದ್ದಾರೆ.

ಟಾಪ್ ನ್ಯೂಸ್

gayi

Davanagere; ಗಾಯಿತ್ರಿ ಸಿದ್ದೇಶ್ವರ್‌ ಅಂತಿಮ ನಾಮಪತ್ರ ಸಲ್ಲಿಕೆ; ಭರ್ಜರಿ ಮೆರವಣಿಗೆ

4-shirva

Rain: ಕಟಪಾಡಿ-ಶಿರ್ವ ರಾಜ್ಯ ಹೆದ್ದಾರಿ; ಮೊದಲ ಮಳೆಯ ಅವಾಂತರ; ರಸ್ತೆ ಕೆಸರುಮಯ

Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ

Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ

Boat Capsizes In Odisha’s Mahanadi River

Mahanadi River Tragedy: ಮಗುಚಿದ 50 ಜನರಿದ್ದ ದೋಣಿ; ಇಬ್ಬರು ಸಾವು; ಎಂಟು ಮಂದಿ ನಾಪತ್ತೆ

Tamil Nadu BJP chief Annamalai demands re-poll due to missing voter names

Loksabha Election; ತಮಿಳುನಾಡಿನಲ್ಲಿ ಮರು ಮತದಾನಕ್ಕೆ ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಆಗ್ರಹ

3-blthngady

ತಾಲೂಕಿನೆಲ್ಲೆಡೆ ಮುಂಜಾನೆ ಭಾರಿ ಮಳೆ;ಕೆಸರುಮಯ ರಾಷ್ಟ್ರೀಯ ಹೆದ್ದಾರಿಯಾಗಿಸಿದ ಗುತ್ತಿಗೆದಾರರು

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

ರಾಜ್ಯ 2ನೇ ಹಂತ: 337 ಮಂದಿ ಕಣಕ್ಕೆ: ನಾಮಪತ್ರ ಸಲ್ಲಿಕೆ ಮುಕ್ತಾಯ, ಇಂದು ಪರಿಶೀಲನೆ

ರಾಜ್ಯ 2ನೇ ಹಂತ: 337 ಮಂದಿ ಕಣಕ್ಕೆ: ನಾಮಪತ್ರ ಸಲ್ಲಿಕೆ ಮುಕ್ತಾಯ, ಇಂದು ಪರಿಶೀಲನೆ

aaa

ನೇಹಾ ಕಗ್ಗೊಲೆ ಆಕಸ್ಮಿಕ, ವೈಯಕ್ತಿಕ ಸರಕಾರದ ಹೇಳಿಕೆ ವಿವಾದ, ಆಕ್ರೋಶ

1-weweqwe

Globant; ಮನೆಯಿಂದಲೇ 30,000 ಮಂದಿ ಕೆಲಸ

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

gayi

Davanagere; ಗಾಯಿತ್ರಿ ಸಿದ್ದೇಶ್ವರ್‌ ಅಂತಿಮ ನಾಮಪತ್ರ ಸಲ್ಲಿಕೆ; ಭರ್ಜರಿ ಮೆರವಣಿಗೆ

4-shirva

Rain: ಕಟಪಾಡಿ-ಶಿರ್ವ ರಾಜ್ಯ ಹೆದ್ದಾರಿ; ಮೊದಲ ಮಳೆಯ ಅವಾಂತರ; ರಸ್ತೆ ಕೆಸರುಮಯ

Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ

Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ

Boat Capsizes In Odisha’s Mahanadi River

Mahanadi River Tragedy: ಮಗುಚಿದ 50 ಜನರಿದ್ದ ದೋಣಿ; ಇಬ್ಬರು ಸಾವು; ಎಂಟು ಮಂದಿ ನಾಪತ್ತೆ

Tamil Nadu BJP chief Annamalai demands re-poll due to missing voter names

Loksabha Election; ತಮಿಳುನಾಡಿನಲ್ಲಿ ಮರು ಮತದಾನಕ್ಕೆ ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಆಗ್ರಹ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.