ಶಿರಾಡಿಘಾಟ್‌ನಲ್ಲಿ ವಾಹನ ಸಂಚಾರ ಸದ್ಯಕ್ಕಿಲ್ಲ: ಸಚಿವ ರೇವಣ್ಣ 


Team Udayavani, Aug 30, 2018, 6:00 AM IST

h-d-revanna-800.jpg

ಹಾಸನ: ರಾಷ್ಟ್ರೀಯ ಹೆದ್ದಾರಿ -75 ರ ಶಿರಾಡಿಘಾಟ್‌ನಲ್ಲಿ ಪದೇ ಪದೆ ಭೂ ಕುಸಿತವುಂಟಾಗುತ್ತಿದೆ. ಆದ್ದರಿಂದ ಸದ್ಯಕ್ಕೆ ಶಿರಾಡಿಘಾಟ್‌ ರಸ್ತೆಯಲ್ಲಿ ವಾಹನ ಸಂಚಾರಕ್ಕೆ ಅವಕಾಶ ಕೊಡುವುದಿಲ್ಲ ಎಂದು ಲೋಕೋಪಯೋಗಿ ಸಚಿವ ಎಚ್‌.ಡಿ.ರೇವಣ್ಣ ಸ್ಪಷ್ಟಡಿಸಿದರು.

ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಶಿರಾಡಿಘಾಟ್‌ನಲ್ಲಿ ರಸ್ತೆ ಮೇಲೆ 15 ರಿಂದ 20 ಕಡೆ ಭೂ ಕುಸಿತವಾಗಿದೆ. ಇಂಜಿನಿಯರ್‌ ಮಣ್ಣು  ತೆರವುಗೊಳಿಸಲು ಕ್ರಮ ಕೈಗೊಂಡಿದ್ದಾರೆ. ರಸ್ತೆ ಪಕ್ಕದಲ್ಲಿಯೇ ಹರಿಯುತ್ತಿರುವ ಕೆಂಪುಹೊಳೆ ದಂಡೆ ಕಡೆ ಭೂ ಕುಸಿತ ತಡೆಯಲು ಒಂದು ಲಕ್ಷ ಮರಳು ಚೀಲ ಹಾಕಿದ್ದಾರೆ. ಈಗಲೂ ಭಾರೀ ಪ್ರಮಾಣದಲ್ಲಿ ಮಳೆ ಸುರಿಯುತ್ತಿದ್ದು, ಪರಿಹಾರ ಕಾರ್ಯಾಚರಣೆಗೆ ಅಡ್ಡಿಯಾಗಿದೆ. ಭೂ ಕುಸಿತದ ಕಾರಣಗಳನ್ನು ಅಧ್ಯಯನ ಮಾಡಲು ಬಂದಿದ್ದ ವಿಜ್ಞಾನಿಗಳು, ಮಣ್ಣು ತೆರವುಗೊಳಿಸಲು ಕಾರ್ಮಿಕರು ಶಿರಾಡಿಘಾಟ್‌ಗೆ ಹೋಗಲು ಹೆದರುತ್ತಿದ್ದಾರೆ. ಆ ಪ್ರಮಾಣದಲ್ಲಿ ಭೂ ಕುಸಿತವಾಗುತ್ತಿದೆ ಎಂದು ವಿವರ ನೀಡಿದರು.

6 ತಿಂಗಳು ಘನ ವಾಹನ ಬಂದ್‌: ಮಳೆ ನಿಲ್ಲುವವರೆಗೂ ರಸ್ತೆ ಮೇಲೆ ಕುಸಿದಿರುವ ಮಣ್ಣು ತೆರವುಗೊಳಸಲು ಸಾಧ್ಯವಾಗುವುದಿಲ್ಲ. ಮಳೆ ನಿಂತ ನಂತರ ತಜ್ಞರು ವಾಹನಗಳು ಸಂಚರಿಸಬಹುದು ಎಂದು ಖಾತರಿಪಡಿಸಿದ ನಂತರವಷ್ಟೇ  ವಾಹನ ಸಂಚಾರಕ್ಕೆ ಅವಕಾಶ ನೀಡಲಾಗುವುದು. ಮಳೆ ನಿಂತ ನಂತರವೂ ಶಿರಾಡಿಘಾಟ್‌ ರಸ್ತೆಯನ್ನು ಮೊದಲ ಸ್ಥಿತಿಗೆ ತರಲು ಅಂದರೆ ಸರಕು ಸಾಗಾಣೆಯ ಭಾರೀ ವಾಹನಗಳು ಸಂಚರಿಸಲು 6 ತಿಂಗಳು ಬೇಕಾಗಬಹುದು ಎಂದು ತಿಳಿಸಿದರು.

ತಾತ್ಕಾಲಿಕ ರಸ್ತೆ ನಿರ್ಮಾಣಕ್ಕೆ ಪರಿಶೀಲನೆ: ಮಂಗಳೂರು – ಮಡಿಕೇರಿ ಮಾರ್ಗದಲ್ಲಿಯೂ ರಸ್ತೆಯ ಕೆಲ ಭಾಗಗಳಲ್ಲಿ ಕುಸಿತವುಂಟಾಗಿದೆ. ಮಳೆ ನಿಂತರೆ ಒಂದೆರಡು ವಾರಗಳಲ್ಲಿ ರಸ್ತೆ ದುರಸ್ತಿಪಡಿಸಿ ಲಘುವಾಹನಗಳ ಸಂಚಾರಕ್ಕೆ ಆ ರಸ್ತೆಯನ್ನು ಮುಕ್ತಗೊಳಸಿಬಹುದು. ಆದರೆ ಸಕಲೇಶಪುರ -ಸೋಮವಾರಪೇಟೆ, ಬಿಸಿಲೆ – ಸುಬ್ರಹ್ಮಣ್ಯ ರಸ್ತೆ ದುರಸ್ತಿಗೆ ಎರಡು ವರ್ಷಗಳು ಬೇಕಾಗಬಹುದು. ಈಗ ರಸ್ತೆ ಕುಸಿದಿರುವ ಮಾರ್ಗ ಬಿಟ್ಟು ಪರ್ಯಾಯ ರಸ್ತೆ ನಿರ್ಮಾಣಕ್ಕೆ ಸರ್ಕಾರಿ ಜಾಗವಿದೆ. ಅಲ್ಲಿ ತಾತ್ಕಾಲಿಕ ರಸ್ತೆ ನಿರ್ಮಾಣಕ್ಕೆ ಪರಿಶೀಲನೆ ನಡೆಸಲಾಗುತ್ತಿದೆ ಎಂದರು.

ಆರೋಪ: ಮಲೆನಾಡು ಮತ್ತು ಕರಾವಳಿ ಜಿಲ್ಲೆಗಳಲ್ಲಿ ಅತಿವೃಷ್ಟಿ ಮತ್ತು ಪ್ರವಾಹದಿಂದ ರಸ್ತೆ, ಸೇತುವೆ, ಸರ್ಕಾರಿ ಕಟ್ಟಡಗಳು ಸೇರಿದಂತೆ ಲೋಕೋಪಯೋಗಿ ಇಲಾಖೆಯ ಸುಮಾರು 300 ಕೋಟಿ ರೂ. ಆಸ್ತಿ ನಾಶವಾಗಿದೆ. ಮಳೆ ಮುಂದುವರಿದರೆ ನಷ್ಟ ಇನ್ನೂ ಹೆಚ್ಚಾಗಬಹುದು. ಕೊಡಗು ಮತ್ತು ಹಾಸನ ಜಿಲ್ಲೆಯ ಸಕಲೇಶಪುರ, ಬೇಲೂರು ತಾಲೂಕುಗಳಲ್ಲಿ ಕಾಫಿ ಬೆಳೆ ಶೇ.80 ರಷ್ಟು ನಾಶವಾಗಿದೆ. ಅರಕಲಗೂಡು ತಾಲೂಕಿನಲ್ಲಿ ಭತ್ತ, ತಂಬಾಕು ಬೆಳೆಯೂ ನಾಶವಾಗಿದೆ. ಪ್ರಕೃತಿ ವಿಕೋಪದ ಹಾನಿಯಿಂದಾದ  ಪರಿಹಾರ ಕಾಮಗಾರಿಗಳಿಗೆ  ಕೇಂದ್ರ ಸರ್ಕಾರ ಇಷ್ಟು ವೇಳೆಗಾಗಲೇ ಶೇ.50 ರಷ್ಟು ಆರ್ಥಿಕ ನೆರವು ನೀಡಬೇಕಾಗಿತ್ತು. ಆದರೆ ಇದುವರೆಗೂ ಪರಿಹಾರ ನೀಡದೆ ಮಲತಾಯಿ ಧೋರಣೆ ಅನುಸರಿಸುತ್ತಿದೆ ಎಂದು ಆರೋಪಿಸಿದರು.

ರಾಜಕೀಯ ಮಾಡೋದು ಬಿಡಿ: ಕೇಂದ್ರ ಸಚಿವ ಸಂಪುಟದಲ್ಲಿ ರಾಜ್ಯವನ್ನು ಪ್ರತಿನಿಧಿಸುತ್ತಿರುವ ನಾಲ್ವರು ಈ ವೇಳೆಗಾಗಲೇ ಕೇಂದ್ರ ಸಚಿವರ ಮೇಲೆ ಒತ್ತಡ ತಂದು ರಾಜ್ಯದ ಅತಿವೃಷ್ಟಿ ಪರಿಹಾರ ಕಾರ್ಯಗಳಿಗೆ ನೆರವು ಕೊಡಿಸಬೇಕಾಗಿತ್ತು. ಈಗಲಾದರೂ ರಾಜಕಾರಣ ಬಿಟ್ಟು ಕೇಂದ್ರ ಸಚಿವರು, ರಾಜ್ಯದ ಬಿಜೆಪಿ ನಾಯಕರು ಅತಿವೃಷ್ಟಿ ಹಾಗೂ ಪ್ರವಾಹ ಪರಿಹಾರ ಕಾರ್ಯಗಳಿಗೆ ಕೇಂದ್ರದ ನೆರವು ಕೊಡಿಸಲಿ ಎಂದು ಒತ್ತಾಯಿಸಿದರು.

ಟಾಪ್ ನ್ಯೂಸ್

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

pralhad joshi

Hubli; ದ್ವಂದ್ವತೆ, ತುಷ್ಟೀಕರಣ ಕಾಂಗ್ರೆಸ್ ರಕ್ತದ ಕಣಕಣದಲ್ಲಿದೆ: ಪ್ರಹ್ಲಾದ ಜೋಶಿ

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

BJP Minority Morcha Leader Expelled

Usman Ghani: ಮೋದಿ ಹೇಳಿಕೆ ಟೀಕೆ ಮಾಡಿದ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷ ಉಚ್ಛಾಟನೆ

Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ

ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್

5-harikrishna

LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Polls: “ಮೋದಿ ಮತ್ತೂಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ

Lok Sabha Polls: “ಮೋದಿ ಮತ್ತೂಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ

Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

pralhad joshi

Hubli; ದ್ವಂದ್ವತೆ, ತುಷ್ಟೀಕರಣ ಕಾಂಗ್ರೆಸ್ ರಕ್ತದ ಕಣಕಣದಲ್ಲಿದೆ: ಪ್ರಹ್ಲಾದ ಜೋಶಿ

7-uv-fusion

UV Fusion: ಚುಕ್ಕಿ ತಾರೆ ನಾಚುವಂತೆ ಒಮ್ಮೆ ನೀ ನಗು

6-fusion

Yugadi: ಯುಗಾದಿ

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.