ಮಂತ್ರಾಲಯದಲ್ಲಿ ಪ್ರಹ್ಲಾದರಾಜರ ಅದ್ಧೂರಿ ರಥೋತ್ಸವ


Team Udayavani, Aug 30, 2018, 6:00 AM IST

180829kpn54.jpg

ರಾಯಚೂರು: ಮಂತ್ರಾಲಯದಲ್ಲಿ ಶ್ರೀ ರಾಘವೇಂದ್ರ ಸ್ವಾಮಿಗಳ 347ನೇ ಆರಾಧನಾ ಮಹೋತ್ಸವದ ಉತ್ತರಾರಾಧನೆ ನಿಮಿತ್ತ ಬುಧವಾರ ಗುರು ಪ್ರಹ್ಲಾದರಾಜರ ರಥೋತ್ಸವ ಲಕ್ಷಾಂತರ ಭಕ್ತರ ಉದ್ಘೋಷಗಳ ಮಧ್ಯೆ ವಿಜೃಂಭಣೆಯಿಂದ ನೆರವೇರಿತು.

ಉತ್ತರಾರಾಧನೆ ನಿಮಿತ್ತ ಶ್ರೀಮಠದಲ್ಲಿ ಬೆಳಗ್ಗೆಯಿಂದ ಸಾಂಪ್ರದಾಯಿಕ ಪೂಜಾ ಕೈಂಕರ್ಯಗಳು ಜರುಗಿದವು. ಎಂದಿನಂತೆ ಬೆಳಗ್ಗೆ ನಿರ್ಮಾಲ್ಯ ವಿಸರ್ಜನೆ, ಗ್ರಂಥಗಳ ಪಾರಾಯಣ, ದಾಸವಾಣಿ, ಪ್ರವಚನಗಳು ಜರುಗಿದವು. ಶ್ರೀ ಗುರುರಾಯರ ಮೂಲಬೃಂದಾವನಕ್ಕೆ ಪಂಚಾಮೃತ ಅಭಿಷೇಕ, ವಿವಿಧ ಬಗೆಯ ಪುಷ್ಪಗಳಿಂದ ವಿಶೇಷ ಅಲಂಕಾರ ಪೂಜೆ ಮಾಡಲಾಯಿತು. ಶ್ರೀಮಠದ ಪೀಠಾಧಿ ಪತಿ ಸುಬುಧೇಂದ್ರ ತೀರ್ಥರಿಂದ ಶ್ರೀ ಮೂಲ ರಾಮದೇವರಿಗೆ ವಿಶೇಷ ಪೂಜೆ, ಹಸ್ತೋದಕ ಸಮರ್ಪಣೆ, ಮಹಾಮಂಗಳಾರತಿ ಸೇವೆಗಳು ಜರುಗಿದವು.

ನಂತರ ಪ್ರಹ್ಲಾದರಾಜರ ಉತ್ಸವಮೂರ್ತಿಯನ್ನು ಸುವರ್ಣ ಪಲ್ಲಕ್ಕಿಯಲ್ಲಿರಿಸಿ ಶ್ರೀಮಠದ ಪ್ರಾಕಾರೋತ್ಸವ ಮಾಡಲಾಯಿತು. ಈ ಬಾರಿ ನೂತನ ಶಿಲಾ ಮಂಟಪದಲ್ಲಿ ಪ್ರಹ್ಲಾದರಾಜರ ಉತ್ಸವಮೂರ್ತಿಗೆ ಪೀಠಾ ಧಿಪತಿ ಶ್ರೀ ಸುಬುಧೇಂದ್ರ ತೀರ್ಥರು ವಿಶೇಷ ಪೂಜೆ ನೆರವೇರಿಸಿದರು. ನಂತರ ವಸಂತ್ಯುತ್ಸವಕ್ಕೆ ಚಾಲನೆ ನೀಡಿದ ಶ್ರೀಗಳು ಮಠದ ಹಿರಿಯ, ಕಿರಿಯ ಪಂಡಿತ, ವಿದ್ವಾಂಸರು, ಆಡಳಿತ ವರ್ಗದ ಸಿಬ್ಬಂದಿ, ಆಪ್ತರಿಗೆ ಗುಲಾಲು ಎರಚುವ ಮೂಲಕ ಓಕುಳಿಯಾಡಿದರು. ಬಳಿಕ ಪ್ರಹ್ಲಾದರಾಜರ ಉತ್ಸವ ಮೂರ್ತಿಯನ್ನು ಮೆರವಣಿಗೆ ಮೂಲಕ ರಥದಲ್ಲಿ ಪ್ರತಿಷ್ಠಾಪಿಸಿ ಪೂಜೆ ಸಲ್ಲಿಸಲಾಯಿತು.

ಈ ವೇಳೆ ಭಕ್ತರನ್ನುದ್ದೇಶಿಸಿ ಅನುಗ್ರಹ ಸಂದೇಶ ನೀಡಿದ ಶ್ರೀ ಸುಬುಧೇಂದ್ರ ತೀರ್ಥರು, ರಾಯರ ಮಠ ಕೇವಲ ಧಾರ್ಮಿಕವಾಗಿ ಮಾತ್ರವಲ್ಲದೇ ಎಲ್ಲ ರಂಗಗಳಿಗೆ ಸೇವೆ ವಿಸ್ತರಿಸುತ್ತಿದೆ. ಈ ಬಾರಿ ಜನರ ಅನುಕೂಲಕ್ಕಾಗಿ ಅತ್ಯಾಧುನಿಕ ಆಸ್ಪತ್ರೆಯನ್ನು ಲೋಕಾರ್ಪಣೆಗೆ ಸಿದ್ಧಗೊಳಿಸಲಾಗಿದೆ. ಇದು ಭಕ್ತರೇ ಮುನ್ನಡೆಸುತ್ತಿರುವ ಮಠವಾಗಿದ್ದು, ಅವರ ಅಗತ್ಯತೆ ಅರಿತು ಕೆಲಸ ಮಾಡುತ್ತಿದೆ ಎಂದರು.

ಶ್ರೀಮಠವನ್ನು ಕೆಲವೇ ವರ್ಷಗಳಲ್ಲಿ ಸ್ವರ್ಣ ಮಠವನ್ನಾಗಿ ರೂಪಿಸಲಾಗುವುದು. ಬೃಂದಾವನ ಸುತ್ತಲಿನ ಮಂಟಪವನ್ನು ಸಂಪೂರ್ಣ ಸ್ವರ್ಣಮಯ ಮಾಡುವ ಯೋಜನೆ ರೂಪಿಸಲಾಗುತ್ತಿದೆ. ಆದರೆ, ಇದರ ಹಿಂದೆ ಯಾವುದೇ ಉದ್ದೇಶವಿಲ್ಲ. ಭಕ್ತರೇ ರಾಯರನ್ನು ಮತ್ತಷ್ಟು ವೈಭವದಿಂದ ಕಣ್ತುಂಬಿಕೊಳ್ಳಬೇಕು ಎಂದು ಹಂಬಲಿಸುತ್ತಿದ್ದಾರೆ. ಮಠದ ಸಿಬ್ಬಂದಿಗೆ ಸರ್ಕಾರಿ ಸಂಸ್ಥೆಯ ಮಾದರಿಯಲ್ಲಿಯೇ ವೇತನ ಪರಿಷ್ಕರಣೆ ಮಾಡಲಾಗಿದೆ. ಈ ಬಾರಿ ಶೇ.8.5ರಷ್ಟು ತುಟ್ಟಿಭತ್ಯೆ ಘೋಷಿಸಿದ್ದು, ಈಗಾಗಲೇ ಶೇ.5ರಷ್ಟು ನೀಡಲಾಗಿದೆ. ಕೇರಳ, ಕೊಡಗು ತಾಣಗಳಿಗೆ ತಾತ್ಕಾಲಿಕವಾಗಿ 15 ಲಕ್ಷ ರೂ. ಪರಿಹಾರ ನೀಡಲಾಗಿದೆ ಎಂದರು.

ನಂತರ ರಾಜಬೀದಿಯಲ್ಲಿ ಮಹಾರಥೋತ್ಸವ ಜರುಗಿತು. ದೇಶದ ನಾನಾ ರಾಜ್ಯಗಳಿಂದ ಆಗಮಿಸಿದ್ದ ಕಲಾ ತಂಡಗಳು, ಭಜನಾ ಮಂಡಳಿಗಳ ಸದಸ್ಯರು ರಥೋತ್ಸವದ ಮೆರುಗು ಹೆಚ್ಚಿಸಿದರು. ಶ್ರೀ ಸುಬುಧೇಂದ್ರ ತೀರ್ಥರು ಹೆಲಿಕಾಪ್ಟರ್‌ ಮೂಲಕ ರಥಕ್ಕೆ, ಮಠದ ಗೋಪುರಕ್ಕೆ ಪುಷ್ಪವೃಷ್ಟಿಗೈದರು. ಕರ್ನಾಟಕ, ಆಂಧ್ರ, ತೆಲಂಗಾಣ ಸೇರಿ ದೇಶ-ವಿದೇಶಗಳಿಂದ ಭಕ್ತರ ದಂಡೇ ಮಂತ್ರಾಲಯಕ್ಕೆ ಹರಿದು ಬಂದಿತ್ತು.

ಟಾಪ್ ನ್ಯೂಸ್

ಕರಾವಳಿಯ ವಿವಿಧೆಡೆ ಮಳೆ; ಮಾನ್ಯ: ಸಿಡಿಲು ಬಡಿದು ಗಾಯ

Vande Bharat ರೈಲು ಆರಂಭ: ಕಾಸರಗೋಡು ನಿಲ್ದಾಣದ ಆದಾಯದಲ್ಲಿ ಹೆಚ್ಚಳ

Vande Bharat ರೈಲು ಆರಂಭ: ಕಾಸರಗೋಡು ನಿಲ್ದಾಣದ ಆದಾಯದಲ್ಲಿ ಹೆಚ್ಚಳ

Foreign Cruise: ಕ್ರೂಸ್‌ ರಿವೇರಾ ಮಂಗಳೂರಿಗೆ

Foreign Cruise: ಕ್ರೂಸ್‌ ರಿವೇರಾ ಮಂಗಳೂರಿಗೆ

ತುಳು ಮಾನ್ಯತೆಗೆ ಶ್ರಮಿಸಿದ ಡಾ| ಆಚಾರ್‌

ತುಳು ಮಾನ್ಯತೆಗೆ ಶ್ರಮಿಸಿದ ಡಾ| ಆಚಾರ್‌

Lok Sabha ಚುನಾವಣೆ ಮುಗಿಯಿತು; ಇನ್ನು ಫ‌ಲಿತಾಂಶದ ಜಪ

Lok Sabha ಚುನಾವಣೆ ಮುಗಿಯಿತು; ಇನ್ನು ಫ‌ಲಿತಾಂಶದ ಜಪ

S. M. Krishna ಆರೋಗ್ಯದಲ್ಲಿ ಚೇತರಿಕೆ; ಖರ್ಗೆ, ವಿಜಯೇಂದ್ರ ಭೇಟಿ

S. M. Krishna ಆರೋಗ್ಯದಲ್ಲಿ ಚೇತರಿಕೆ; ಖರ್ಗೆ, ವಿಜಯೇಂದ್ರ ಭೇಟಿ

Eshwarappa ಕಣದಿಂದ ಹಿಂದೆ ಸರಿದ ನಕಲಿ ಸುದ್ದಿ ವೈರಲ್‌: ದೂರು

Eshwarappa ಕಣದಿಂದ ಹಿಂದೆ ಸರಿದ ನಕಲಿ ಸುದ್ದಿ ವೈರಲ್‌: ದೂರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

S. M. Krishna ಆರೋಗ್ಯದಲ್ಲಿ ಚೇತರಿಕೆ; ಖರ್ಗೆ, ವಿಜಯೇಂದ್ರ ಭೇಟಿ

S. M. Krishna ಆರೋಗ್ಯದಲ್ಲಿ ಚೇತರಿಕೆ; ಖರ್ಗೆ, ವಿಜಯೇಂದ್ರ ಭೇಟಿ

DCM ಡಿಕೆಶಿ, ಶಿವರಾಮೇಗೌಡ ವಿರುದ್ಧ ಜೆಡಿಎಸ್‌ ಆಕ್ರೋಶ: ಹಲವೆಡೆ ಪ್ರತಿಭಟನೆ

DCM ಡಿಕೆಶಿ, ಶಿವರಾಮೇಗೌಡ ವಿರುದ್ಧ ಜೆಡಿಎಸ್‌ ಆಕ್ರೋಶ: ಹಲವೆಡೆ ಪ್ರತಿಭಟನೆ

ಹಂತ-2: ಶೇ. 71.4 ಮತ: ಉತ್ತರ ಕರ್ನಾಟಕದ 14 ಕ್ಷೇತ್ರಗಳಲ್ಲಿ ಮತದಾನ ಸಂಪನ್ನ

ಹಂತ-2: ಶೇ. 71.4 ಮತ: ಉತ್ತರ ಕರ್ನಾಟಕದ 14 ಕ್ಷೇತ್ರಗಳಲ್ಲಿ ಮತದಾನ ಸಂಪನ್ನ

HD Kumaraswamy ಮೈತ್ರಿ ಮುಂದುವರಿಕೆ ಉದ್ದೇಶ

BJP-JDS ಮೈತ್ರಿ ಮುಂದುವರಿಕೆ ಉದ್ದೇಶ; ಎಚ್‌.ಡಿ. ಕುಮಾರಸ್ವಾಮಿ

Randeep Surjewala ಚಿತ್ರಕಥೆ, ಡಿಕೆಶಿ ನಿರ್ಮಾಪಕ: ಅಶೋಕ್‌

Randeep Surjewala ಚಿತ್ರಕಥೆ, ಡಿಕೆಶಿ ನಿರ್ಮಾಪಕ: ಆರ್‌. ಅಶೋಕ್‌

MUST WATCH

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

ಹೊಸ ಸೇರ್ಪಡೆ

ಕರಾವಳಿಯ ವಿವಿಧೆಡೆ ಮಳೆ; ಮಾನ್ಯ: ಸಿಡಿಲು ಬಡಿದು ಗಾಯ

Vande Bharat ರೈಲು ಆರಂಭ: ಕಾಸರಗೋಡು ನಿಲ್ದಾಣದ ಆದಾಯದಲ್ಲಿ ಹೆಚ್ಚಳ

Vande Bharat ರೈಲು ಆರಂಭ: ಕಾಸರಗೋಡು ನಿಲ್ದಾಣದ ಆದಾಯದಲ್ಲಿ ಹೆಚ್ಚಳ

Foreign Cruise: ಕ್ರೂಸ್‌ ರಿವೇರಾ ಮಂಗಳೂರಿಗೆ

Foreign Cruise: ಕ್ರೂಸ್‌ ರಿವೇರಾ ಮಂಗಳೂರಿಗೆ

ತುಳು ಮಾನ್ಯತೆಗೆ ಶ್ರಮಿಸಿದ ಡಾ| ಆಚಾರ್‌

ತುಳು ಮಾನ್ಯತೆಗೆ ಶ್ರಮಿಸಿದ ಡಾ| ಆಚಾರ್‌

Lok Sabha ಚುನಾವಣೆ ಮುಗಿಯಿತು; ಇನ್ನು ಫ‌ಲಿತಾಂಶದ ಜಪ

Lok Sabha ಚುನಾವಣೆ ಮುಗಿಯಿತು; ಇನ್ನು ಫ‌ಲಿತಾಂಶದ ಜಪ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.