ಇಂದು ಕುಮಾರಸ್ವಾಮಿ-ರಾಹುಲ್ ಭೇಟಿ
Team Udayavani, Aug 30, 2018, 6:00 AM IST
ಬೆಂಗಳೂರು:ಕೊಡಗು ಜಿಲ್ಲೆಯಲ್ಲಿ ಉಂಟಾದ ಪ್ರವಾಹಕ್ಕೆ ಸೂಕ್ತ ಪರಿಹಾರ ನೀಡುವಂತೆ ಪ್ರಧಾನಿಗೆ ಮನವಿ ಸಲ್ಲಿಸಲು ಮುಖ್ಯಮಂತ್ರಿ ಕುಮಾರಸ್ವಾಮಿ ಹಾಗೂ ಉಪ ಮುಖ್ಯಮಂತ್ರಿ ಡಾ.ಜಿ. ಪರಮೇಶ್ವರ್ ದೆಹಲಿಗೆ ತೆರಳಿದ್ದಾರೆ. ಇದೇ ಸಂದರ್ಭದಲ್ಲಿ ಮುಖ್ಯಮಂತ್ರಿ ಕುಮಾರಸ್ವಾಮಿ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿಯನ್ನೂ ಭೇಟಿ ಮಾಡಿ ರಾಜ್ಯದ ಸಮ್ಮಿಶ್ರ ಸರ್ಕಾರದ ಪ್ರಸಕ್ತ ವಿದ್ಯಮಾನಗಳ ಬಗ್ಗೆ ಮಾಹಿತಿ ನೀಡಲಿದ್ದಾರೆ.
ರಾಜ್ಯದ ಕೊಡಗು ಸೇರಿದಂತೆ ಕರಾವಳಿ ಭಾಗದಲ್ಲಿ ಅತಿವೃಷ್ಠಿಯಿಂದ ಸುಮಾರು 3 ಸಾವಿರ ಕೋಟಿ ರೂಪಾಯಿ ನಷ್ಟ ಉಂಟಾಗಿದ್ದು, ಮಧ್ಯಂತರ ಪರಿಹಾರವಾಗಿ ಕೇಂದ್ರ ಸರ್ಕಾರ ಕನಿಷ್ಠ 2 ಸಾವಿರ ಕೋಟಿ ರೂ.ಬಿಡುಗಡೆ ಮಾಡುವಂತೆ ಕೇಂದ್ರ ಸರ್ಕಾರಕ್ಕೆ ಮನವಿ ಸಲ್ಲಿಸಲಿದ್ದಾರೆ.
ಇದೇ ವೇಳೆ, ರಾಜ್ಯ ಸರ್ಕಾರ ರೈತರ ಖಾಸಗಿ ಸಾಲ ಮನ್ನಾ ಮಾಡಲು ಋಣ ಮುಕ್ತ ಕಾಯ್ದೆಗೆ ಸುಗ್ರೀವಾಜ್ಞೆ ಹೊರಡಿಸಿದ್ದು, ಅಂಕಿತ ಹಾಕುವಂತೆ ರಾಷ್ಟ್ರಪತಿ ರಾಮನಾಥ ಕೋವಿಂದ್ ಅವರನ್ನೂ ಭೇಟಿ ಮಾಡಿ ಮನವಿ ಮಾಡಲಿದ್ದಾರೆ.
ನಂತರ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿಯನ್ನು ಭೇಟಿ ಮಾಡಿ ಸಮ್ಮಿಶ್ರ ಸರ್ಕಾರಕ್ಕೆ ನೂರು ದಿನ ತುಂಬಿದ ಹಿನ್ನೆಲೆಯಲ್ಲಿ ಅಭಿನಂದನೆ ಸಲ್ಲಿಸಿ, ಸದ್ಯ ರಾಜ್ಯದಲ್ಲಿ ಸಮ್ಮಿಶ್ರ ಸರ್ಕಾರದ ಬಗ್ಗೆ ಇರುವ ಗೊಂದಲಗಳು, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಹೇಳಿಕೆಗಳಿಂದ ಸರ್ಕಾರದ ಮೇಲೆ ಆಗುತ್ತಿರುವ ವ್ಯತಿರಿಕ್ತ ಪರಿಣಾಮಗಳ ಬಗ್ಗೆ ರಾಹುಲ್ ಗಾಂಧಿ ಗಮನಕ್ಕೆ ತರುವ ಸಾಧ್ಯತೆ ಇದೆ ಎಂದು ತಿಳಿದು ಬಂದಿದೆ. ಇದೇ ವೇಳೆ, ಸಂಪುಟ ವಿಸ್ತರಣೆ ಹಾಗೂ ನಿಗಮ ಮಂಡಳಿ ಅಧ್ಯಕ್ಷರ ನೇಮಕದ ಕುರಿತಂತೆಯೂ ಉಪ ಮುಖ್ಯಮಂತ್ರಿ ಪರಮೇಶ್ವರ್ ರಾಹುಲ್ ಗಾಂಧಿ ಜೊತೆಗೆ ಚರ್ಚಿಸುವ ಸಾಧ್ಯತೆ ಇದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Missing Case: ನಾಪತ್ತೆಯಾಗಿದ್ದ ವಿದ್ಯಾರ್ಥಿನಿ ಸುಳ್ಯದ ಅರಂತೋಡಿನಲ್ಲಿ ಪತ್ತೆ
ಭಾರತಕ್ಕೆ ರಾಜತಾಂತ್ರಿಕ ಗೆಲುವು: ಇಸ್ರೇಲಿ ಹಡಗಿನಿಂದ 5 ಭಾರತೀಯರನ್ನು ಬಿಡುಗಡೆ ಮಾಡಿದ ಇರಾನ್
Tragedy: ಪೈಪ್ ಲೈನ್ ತಪಾಸಣೆ ವೇಳೆ ದುರಂತ… ನೀರಿನ ಹೊಂಡಕ್ಕೆ ಬಿದ್ದು ಮೂವರ ದುರ್ಮರಣ
SSLC ಪರೀಕ್ಷೆ-2 ಜೂನ್ 7ರಿಂದ ; ನೋಂದಣಿಗೆ ಮೇ 16ರ ವರೆಗೆ ಅವಕಾಶ
GT Vs CSK: ನಿರ್ಗಮನ ಬಾಗಿಲಲ್ಲಿ ಗುಜರಾತ್ ಪ್ಲೇ ಆಫ್ ಜಪದಲ್ಲಿ ಚೆನ್ನೈ