ಇನ್ನಷ್ಟು ಕೈ ನಾಯಕರು ಬಿಜೆಪಿಗೆ : ಬಿಎಸ್ವೈ
Team Udayavani, Aug 30, 2018, 6:00 AM IST
ಬೆಂಗಳೂರು:ಲೋಕಸಭೆ ಚುನಾವಣೆಗೆ ವೇಳೆಗೆ ಹಲವು ಕಾಂಗ್ರೆಸ್ ನಾಯಕರು ಬಿಜೆಪಿ ಸೇರಲಿದ್ದಾರೆ ಎಂದು ಪ್ರತಿಪಕ್ಷ ನಾಯಕ ಬಿ.ಎಸ್.ಯಡಿಯೂರಪ್ಪ ಹೊಸ ಬಾಂಬ್ ಸಿಡಿಸಿದ್ದಾರೆ.
ಬಿಜೆಪಿ ಕಚೇರಿಯಲ್ಲಿ ಬುಧವಾರ ಕೇಂದ್ರ ಸಚಿವೆ ಸಾದ್ವಿ ನಿರಂಜನ್ ಸಮ್ಮುಖದಲ್ಲಿ ಮಾಜಿ ಸಚಿವ ಬಾಬೂರಾವ್ ಚಿಂಚನಸೂರ್ ಅವರನ್ನು ಪಕ್ಷಕ್ಕೆ ಸೇರ್ಪಡೆಗೊಂಡು ಮಾತನಾಡಿದ ಅವರು, ಇನ್ನೂ ಹಲವು ಕಾಂಗ್ರೆಸ್ ನಾಯಕರು ನಮ್ಮ ಸಂಪರ್ಕದಲ್ಲಿದ್ದು ಮುಂದಿನ ದಿನಗಳಲ್ಲಿ ಪಕ್ಷ ಸೇರಲಿದ್ದಾರೆ ಎಂದು ಹೇಳಿದರು.
ಬಾಬೂರಾವ್ ಚಿಂಚನಸೂರ್ ಹಾಗೂ ಮಾಲೀಕಯ್ಯ ಗುತ್ತೇದಾರ್ ಅವರು ನಮ್ಮ ಪಕ್ಷದಲ್ಲಿದ್ದು ನಮಗೆ ಆ ಭಾಗದಲ್ಲಿ ಆನೆಬಲ ಬಂದಿದೆ. ಕಲಬುರಗಿ ಕ್ಷೇತ್ರದಲ್ಲಿ ಮಲ್ಲಿಕಾರ್ಜುನ ಖರ್ಗೆ ಅವರ ವಿರುದ್ಧ ಈ ಬಾರಿ ಪ್ರಬಲ ಅಭ್ಯರ್ಥಿ ಕಣಕ್ಕಿಳಿಸಲಿದ್ದೇವೆ ಎಂದು ತಿಳಿಸಿದರು.
ಪ್ರಧಾನಿ ನರೇಂದ್ರಮೋದಿ ಹಾಗೂ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಅವರ ನಾಯಕತ್ವ ಮೆಚ್ಚಿ ಹಲವಾರು ನಾಯಕರು ಬಿಜೆಪಿಗೆ ಬರಲು ಒಲವು ವ್ಯಕ್ತಪಡಿಸಿದ್ದಾರೆ. ಮುಂದಿನ ಲೋಕಸಭೆ ಚುನಾವಣೆಯಲ್ಲಿ ಇಡೀ ದೇಶದಲ್ಲಿ ಬಿಜೆಪಿ ಮತ್ತೂಮ್ಮೆ ಭರ್ಜರಿ ಜಯ ದಾಖಲಿಸಲಿದೆ ಎಂದು ಹೇಳಿದರು.
ಚಿಂಚನಸೂರ್ ಅವರಿಗೆ ಪಕ್ಷದಲ್ಲಿ ಉನ್ನತ ಸ್ಥಾನಮಾನ ನೀಡುವ ಬಗ್ಗೆ ಕೋರ್ ಕಮಿಟಿಯಲ್ಲಿ ಚರ್ಚಿಸಿ ತೀರ್ಮಾನಿಸಲಾಗುವುದು ಎಂದು ತಿಳಿಸಿದರು.
ಇದೇ ಸಂದರ್ಭದಲ್ಲಿ ಚಿಂಚನಸೂರ್ ಪತ್ನಿ ಅಮರೇಶ್ವರಿ ಸಹ ಬಿಜೆಪಿ ಸೇರ್ಪಡೆಗೊಂಡರು. ಮಾಜಿ ಸಚಿವ ಮಾಲೀಕಯ್ಯ ಗುತ್ತೇದಾರ್ ಮತ್ತಿತರರು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು
Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ
ಮೂಲಭೂತ ಸೌಕರ್ಯ ಕೊಡಿ ಎಂದಿದ್ದೇನೆ ಹೊರತು, ಒಕ್ಕಲೆಬ್ಬಿಸಿ ಎಂದಿಲ್ಲ; ಬೇಳೂರು ಸ್ಪಷ್ಟನೆ
90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ
LS Polls: ರಾಜ್ಯದ ಜನರಿಗೆ ಈಶ್ವರಪ್ಪ ಸ್ಪರ್ಧೆ ವಿಷಯ ಈಗ ಖಚಿತ: ಈಶ್ವರಪ್ಪ
MUST WATCH
ಹೊಸ ಸೇರ್ಪಡೆ
Jayaprakash Hegde “ಉತ್ತಮ ಕೆಲಸ ಮಾಡಿಸಿಕೊಳ್ಳಬೇಕಾದ ಅವಶ್ಯಕತೆ ಮತದಾರರಿಗಿದೆ’
Kundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್ ಹೆಗ್ಡೆ
Malpe ಮೀನುಗಾರಿಕೆ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ: ಜೆ.ಪಿ. ಹೆಗ್ಡೆ
Subramanya ಏನೆಕಲ್ಲು: ಕಾರಿಗೆ ಗೂಡ್ಸ್ ಆಟೋ ಢಿಕ್ಕಿ
Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್ ಗಾಂಧಿ