ಪೆಟ್ರೋಲ್, ಡೀಸೆಲ್ ವ್ಯಾಟ್ ಇಳಿಕೆ ಅಸಾಧ್ಯ: ಸಿಎಂ ಕುಮಾರಸ್ವಾಮಿ
Team Udayavani, Aug 31, 2018, 11:28 AM IST
ಬೆಂಗಳೂರು : ಪೆಟ್ರೋಲ್ ಮತ್ತು ಡೀಸೆಲ್ ದರಗಳು ಗಗನಮುಖೀಯಾಗುತ್ತಿರುವ ಹೊರತಾಗಿಯೂ ಅವಗಳ ಮೇಲಿನ ವ್ಯಾಟ್ ಇಳಿಸಲು ಸಾಧ್ಯವಿಲ್ಲ ಎಂದು ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಹೇಳಿದ್ದಾರೆ.
ಇದೇ ವೇಳೆ ಪೆಟ್ರೋಲ್ ಲೀಟರ್ ಬೆಲೆ 81 ರೂ. ಆಗಿದೆ; ಡೀಸೆಲ್ ಬೆಲೆ ಲೀಟರಿಗೆ 71 ಆಗಿದೆ. ಏರುತ್ತಿರುವ ಈ ಬೆಲೆಗಳನ್ನು ಇಳಿಸುವ ದಿಶೆಯಲ್ಲಿ ರಾಜ್ಯ ಮತ್ತು ಕೇಂದ್ರ ಸರಕಾರಗಳು ಏನನ್ನೂ ಮಾಡುತ್ತಿಲ್ಲ ಎಂಬ ಆಕ್ರೋಶವನ್ನು ಜನಸಾಮಾನ್ಯರು ತೋರ್ಪಡಿಸುತ್ತಿದ್ದಾರೆ.
ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ ಮಾರಾಟ ತೆರಿಗೆಯು ರಾಜ್ಯ ಸರಕಾರದ ಪ್ರಮುಖ ಆದಾಯ ಮೂಲವಾಗಿದ್ದು ಇದನ್ನು ಕಳೆದುಕೊಳ್ಳಲು ಅದು ಸುತರಾಂ ಬಯಸುವುದಿಲ್ಲ. ಜಿಎಸ್ಟಿ ಅಡಿ ಪೆಟ್ರೋಲ್, ಡೀಸೆಲ್ ತಂದರೂ ಅವುಗಳ ಮೇಲೆ ವ್ಯಾಟ್ ಹೇರುವ ಅಧಿಕಾರ ರಾಜ್ಯ ಸರಕಾರಗಳಿಗೆ ಇದೇ ಇರುವುದರಿಂದ ಜನರಿಗಂತೂ ಜಿಎಸ್ಟಿಯಿಂದ ಯಾವುದೇ ಲಾಭವಾಗುವುದಿಲ್ಲ ಎನ್ನಲಾಗುತ್ತಿದೆ.
ಡೀಸೆಲ್ ದರ ಹೆಚ್ಚುತ್ತಿರುವ ಹೊರತಾಗಿಯೂ ಕೆಎಸ್ಆರ್ಟಿಸಿ ಮತ್ತು ಬಿಎಂಟಿಸಿ ಈ ತನಕ ಪ್ರಯಾಣ ದರ ಹೆಚ್ಚಿಸದಿರುವದೊಂದೇ ಜನಸಾಮಾನ್ಯರಿಗೆ ಸಮಾಧಾನದ ವಿಷಯವಾಗಿದೆ. ಜನರು ಈ ದಿನಗಳಲ್ಲಿ ತಮ್ಮ ಸ್ವಂತ ವಾಹನವನ್ನು ಮನೆಯಲ್ಲೇ ಉಳಿಸಿಕೊಂಡು ಸಮೂಹ ಸಾರಿಗೆಯನ್ನೇ ಹೆಚ್ಚಾಗಿ ಬಳಸುತ್ತಿರುವದು ಕಂಡು ಬರುತ್ತಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vijaypura:ರಾಹುಲ್ ಗಾಂಧಿ ನಿರ್ಗಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್
Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್
LS Polls: ರಾಜ್ಯದಲ್ಲಿ ಕಾಂಗ್ರೆಸ್ ವಿರೋಧಿ ಅಲೆ: ರಾಘವೇಂದ್ರ
Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…
MUST WATCH
ಹೊಸ ಸೇರ್ಪಡೆ
2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್ಯಾಂಕ್ ಪಡೆದ ತೀರ್ಥಹಳ್ಳಿಯ ಸುಚಿಂತ್
Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ
Vijaypura:ರಾಹುಲ್ ಗಾಂಧಿ ನಿರ್ಗಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ
ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್.ವರಲಕ್ಷ್ಮೀ
CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ