ಸರಕಾರ ಉರುಳಿಸಲು ಯತ್ನಿಸಿಲ್ಲ: ಈಶ್ವರಪ್ಪ
Team Udayavani, Sep 1, 2018, 6:35 AM IST
ಶಿವಮೊಗ್ಗ: “ಸಮ್ಮಿಶ್ರ ಸರಕಾರ ಬೀಳಿಸಲು ಬಿಜೆಪಿ ಮುಂದಾಗಿಲ್ಲ. ಆ ನಿಟ್ಟಿನಲ್ಲಿ ಪ್ರಯತ್ನಿಸುವುದೂ ಇಲ್ಲ. ಸರಕಾರ ಅದಾಗಿಯೇ ಉರುಳಿಬೀಳಲಿದೆ’ ಎಂದು ಶಾಸಕ ಕೆ.ಎಸ್. ಈಶ್ವರಪ್ಪ ತಿಳಿಸಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ದಿನೇಶ್ ಗುಂಡೂರಾವ್ ಅವರು ಮೈತ್ರಿ ಸರಕಾರ ಬೀಳಿಸಲು ಬಿಜೆಪಿ ಪ್ರಯತ್ನಿಸುತ್ತಿದೆ ಎಂದು ಹೇಳಿದ್ದಾರೆ.
ಆದರೆ ಇದು ಶುದ್ಧ ಸುಳ್ಳು. ದಿನೇಶ್ ಗುಂಡೂರಾವ್ ಮಾತನ್ನು ಕೇಳಿದ್ರೆ ಅವರಿಗೆ ಕಾಂಗ್ರೆಸ್ ಶಾಸಕರ ಬಗ್ಗೆ ನಂಬಿಕೆ ಇಲ್ಲ ಎಂಬುದು ತಿಳಿಯುತ್ತದೆ. ಕುಮಾರಸ್ವಾಮಿ ಮತ್ತು ಸಿದ್ದರಾಮಯ್ಯ ಒಬ್ಬರಿಗೊಬ್ಬರು ಮುಖ ನೋಡಿಕೊಳ್ಳದ ಸ್ಥಿತಿಯಲ್ಲಿದ್ದಾರೆ. ಕಾಂಗ್ರೆಸ್ -ಜೆಡಿಎಸ್ ನಡುವೆಯೇ ಸಮನ್ವಯತೆ ಇಲ್ಲ. ಹೀಗಿರುವಾಗ ಸಭೆ ನಡೆಸಿದರೆ ಏನು ಪ್ರಯೋಜನ. ಇಬ್ಬರಿಗೂ ಈ ಕೂಸು ಬೇಕಾಗಿಲ್ಲ ಎಂದರು.
ಫೋನ್ ಕದ್ದಾಲಿಕೆ ಆರೋಪ ಬಂದಿದೆ. ಕೇಂದ್ರ ಸರಕಾರ ಈ ಬಗ್ಗೆ ತನಿಖೆ ನಡೆಸಲಿ ಎಂದು ಸಿಎಂ ಪತ್ರ ಬರೆಯಲಿ. ಇಲ್ಲವೇ ರಾಜ್ಯ ಸರಕಾರವೇ ಒಂದು ಸಮಿತಿ ರಚಿಸಿ ತನಿಖೆ ನಡೆಸಲಿ ಎಂದರು.
ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್, ಜೆಡಿಎಸ್ ಅನ್ನು ಜನ ತಿರಸ್ಕರಿಸಿದ್ದಾರೆ. ಸ್ಥಳೀಯ ಸಂಸ್ಥೆ ಚುನಾವಣೆಯಲ್ಲೂ ಬಿಜೆಪಿ ಮೇಲುಗೈ ಸಾಧಿಸಿ ಅಧಿಕಾರಕ್ಕೆ ಬರಲಿದೆ ಎಂದು ಈಶ್ವರಪ್ಪ ವಿಶ್ವಾಸ ವ್ಯಕ್ತಪಡಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…
LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…
Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…
ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸೀಮರು: ಸಚಿವ ಪ್ರಹ್ಲಾದ್ ಜೋಶಿ
Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್
MUST WATCH
ಹೊಸ ಸೇರ್ಪಡೆ
Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…
Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ
Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ
EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…
Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು