ಸರಕಾರ ಉರುಳಿಸಲು ಯತ್ನಿಸಿಲ್ಲ: ಈಶ್ವರಪ್ಪ
Team Udayavani, Sep 1, 2018, 6:35 AM IST
ಶಿವಮೊಗ್ಗ: “ಸಮ್ಮಿಶ್ರ ಸರಕಾರ ಬೀಳಿಸಲು ಬಿಜೆಪಿ ಮುಂದಾಗಿಲ್ಲ. ಆ ನಿಟ್ಟಿನಲ್ಲಿ ಪ್ರಯತ್ನಿಸುವುದೂ ಇಲ್ಲ. ಸರಕಾರ ಅದಾಗಿಯೇ ಉರುಳಿಬೀಳಲಿದೆ’ ಎಂದು ಶಾಸಕ ಕೆ.ಎಸ್. ಈಶ್ವರಪ್ಪ ತಿಳಿಸಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ದಿನೇಶ್ ಗುಂಡೂರಾವ್ ಅವರು ಮೈತ್ರಿ ಸರಕಾರ ಬೀಳಿಸಲು ಬಿಜೆಪಿ ಪ್ರಯತ್ನಿಸುತ್ತಿದೆ ಎಂದು ಹೇಳಿದ್ದಾರೆ.
ಆದರೆ ಇದು ಶುದ್ಧ ಸುಳ್ಳು. ದಿನೇಶ್ ಗುಂಡೂರಾವ್ ಮಾತನ್ನು ಕೇಳಿದ್ರೆ ಅವರಿಗೆ ಕಾಂಗ್ರೆಸ್ ಶಾಸಕರ ಬಗ್ಗೆ ನಂಬಿಕೆ ಇಲ್ಲ ಎಂಬುದು ತಿಳಿಯುತ್ತದೆ. ಕುಮಾರಸ್ವಾಮಿ ಮತ್ತು ಸಿದ್ದರಾಮಯ್ಯ ಒಬ್ಬರಿಗೊಬ್ಬರು ಮುಖ ನೋಡಿಕೊಳ್ಳದ ಸ್ಥಿತಿಯಲ್ಲಿದ್ದಾರೆ. ಕಾಂಗ್ರೆಸ್ -ಜೆಡಿಎಸ್ ನಡುವೆಯೇ ಸಮನ್ವಯತೆ ಇಲ್ಲ. ಹೀಗಿರುವಾಗ ಸಭೆ ನಡೆಸಿದರೆ ಏನು ಪ್ರಯೋಜನ. ಇಬ್ಬರಿಗೂ ಈ ಕೂಸು ಬೇಕಾಗಿಲ್ಲ ಎಂದರು.
ಫೋನ್ ಕದ್ದಾಲಿಕೆ ಆರೋಪ ಬಂದಿದೆ. ಕೇಂದ್ರ ಸರಕಾರ ಈ ಬಗ್ಗೆ ತನಿಖೆ ನಡೆಸಲಿ ಎಂದು ಸಿಎಂ ಪತ್ರ ಬರೆಯಲಿ. ಇಲ್ಲವೇ ರಾಜ್ಯ ಸರಕಾರವೇ ಒಂದು ಸಮಿತಿ ರಚಿಸಿ ತನಿಖೆ ನಡೆಸಲಿ ಎಂದರು.
ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್, ಜೆಡಿಎಸ್ ಅನ್ನು ಜನ ತಿರಸ್ಕರಿಸಿದ್ದಾರೆ. ಸ್ಥಳೀಯ ಸಂಸ್ಥೆ ಚುನಾವಣೆಯಲ್ಲೂ ಬಿಜೆಪಿ ಮೇಲುಗೈ ಸಾಧಿಸಿ ಅಧಿಕಾರಕ್ಕೆ ಬರಲಿದೆ ಎಂದು ಈಶ್ವರಪ್ಪ ವಿಶ್ವಾಸ ವ್ಯಕ್ತಪಡಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Transfer order: ರಾಜ್ಯದ 388 ನ್ಯಾಯಾಧೀಶರ ವರ್ಗಾವಣೆ ಮಾಡಿ ಆದೇಶ
PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ
Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!
Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ
Lok Sabha Polls: “ಮೋದಿ ಮತ್ತೊಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ