ದುರಸ್ತಿ ಹಿನ್ನೆಲೆ:ಎರಡು ತಿಂಗಳು ಜಗನ್ಮೋಹನ ಅರಮನೆ ವೀಕ್ಷಣೆ ರದ್ದು


Team Udayavani, Sep 1, 2018, 6:50 AM IST

jaganmohan-palace-mysore.jpg

ಮೈಸೂರು: ಪ್ರವಾಸಿಗರ ಆಕರ್ಷಣೆಯ ಕೇಂದ್ರವಾಗಿರುವ ಜಗನ್ಮೋಹನ ಅರಮನೆಗೆ ಬೀಗ ಹಾಕಲಾಗಿದೆ. ಇದರಿಂದ
ಅರಮನೆ ವೀಕ್ಷಿಸಲು ಬರುವ ಪ್ರವಾಸಿಗರಿಗೆ ನಿರಾಸೆಯಾಗುತ್ತಿದೆ.

ಜಗನ್ಮೋಹನ ಅರಮನೆಗೆ ಹೊಂದಿಕೊಂಡಿರುವ ಆರ್ಟ್‌ ಗ್ಯಾಲರಿಯ ಮೇಲ್ಛಾವಣಿಯ ಒಂದು ಭಾಗ ಕುಸಿದಿರುವ ಹಿನ್ನೆಲೆಯಲ್ಲಿ ದುರಸ್ತಿ ಕಾಮಗಾರಿ ನಡೆಯುತ್ತಿದೆ. ಹೀಗಾಗಿ ಜಗನ್ಮೋಹನ ಅರಮನೆ ಹಾಗೂ ಆರ್ಟ್‌ಗ್ಯಾಲರಿ ಬಂದ್‌ ಮಾಡಲಾಗಿದ್ದು, ಈ ಬಗ್ಗೆ ಮುಖ್ಯ ದ್ವಾರದಲ್ಲಿ ಅರಮನೆ ದುರಸ್ತಿಯಲ್ಲಿದೆ ಎಂಬ ಫ‌ಲಕವನ್ನು ಹಾಕಲಾಗಿದೆ.ಆದ್ದರಿಂದ ಮುಂದಿನ 2 ತಿಂಗಳ ಕಾಲ ಅರಮನೆ ವೀಕ್ಷಿಸುವ ಭಾಗ್ಯ ಪ್ರವಾಸಿಗರಿಗೆ ಇಲ್ಲದಂತಾಗಿದೆ. ಅಲ್ಲದೆ ದಸರಾ ಸಂದರ್ಭದಲ್ಲಿ ನಡೆಯುವ ಕೆಲವು ಕಾರ್ಯಕ್ರಮಗಳಿಗೂ ಜಗನ್ಮೋಹನ ಅರಮನೆ ದೊರೆಯುವ ಅವಕಾಶಗಳು ತೀರಾ ಕಡಿಮೆ.

ನಗರದ ಹೃದಯಭಾಗದಲ್ಲಿರುವ ಜಗನ್ಮೋಹನ ಅರಮನೆಯ ಒಂದು ಭಾಗದಲ್ಲಿ ವೇದಿಕೆ ಸಭಾಂಗಣ ಮತ್ತೂಂದು ಭಾಗದಲ್ಲಿ ಆರ್ಟ್‌ ಗ್ಯಾಲರಿಯಿದೆ. ಮೈಸೂರು ಅರಸರ ಆಳ್ವಿಕೆಯನ್ನು ನೆನಪಿಸುವ ಶಸ್ತ್ರಾಸ್ತ್ರಗಳು, ತೈಲ ವರ್ಣದ ಚಿತ್ರಗಳು ಸೇರಿ ರಾಜಮಹಾರಾಜರ ಅನೇಕ ಚಿತ್ರಗಳು ನೋಡುಗರನ್ನು ಸೆಳೆಯುವಂತಿದೆ.

ಹೀಗಾಗಿ ಮೈಸೂರಿಗೆ ಬರುವ ಪ್ರವಾಸಿಗರು ಜಗನ್ಮೋಹನ ಅರಮನೆ ವೀಕ್ಷಿಸದೆ ವಾಪಸ್‌ ಹೋಗುತ್ತಿರಲಿಲ್ಲ. ಇನ್ನು ಅರಮನೆ ವೇದಿಕೆಯಲ್ಲಿ ತಿಂಗಳ ಬಹುತೇಕ ದಿನಗಳಲ್ಲಿವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯುತ್ತಿದ್ದವು. ಆದರೆ ಇದೀಗ ದುರಸ್ತಿ ಕಾಮಗಾರಿ ನಡೆಯುತ್ತಿರುವ ಕಾರಣ ಕೆಲವು ದಿನಗಳವರೆಗೆ ಎಲ್ಲಾ ಕಾರ್ಯಕ್ರಮಗಳಿಗೆ ಸೂಕ್ತ ವೇದಿಕೆ ಇಲ್ಲದಂತಾಗಿದೆ. ಪ್ರವೇಶ ನಿರ್ಬಂಧ ಕಾರಣ ಇಲ್ಲಿನ ವ್ಯಾಪಾರಿಗಳಿಗೂ ಸಮಸ್ಯೆಯಾಗಿದೆ. ಹೀಗಾಗಿ ಅರಮನೆ ದುರಸ್ತಿ ಕಾಮಗಾರಿಯನ್ನು ತ್ವರಿತವಾಗಿ ಮುಗಿಸಿ, ದಸರಾ ವೇಳೆಗೆ ಪ್ರವಾಸಿಗರ ವೀಕ್ಷಣೆಗೆ ಅನುಕೂಲ ಕಲ್ಪಿಸಬೇಕೆಂದು ಸ್ಥಳೀಯ ವ್ಯಾಪಾರಿಗಳು, ಪ್ರವಾಸಿಗರ ಒತ್ತಾಯವಾಗಿದೆ.

ಟಾಪ್ ನ್ಯೂಸ್

1-qeqqew

I.N.D.I.A;ಗಂಡೇ ವಿಧಾನಸಭೆ ಕ್ಷೇತ್ರದಿಂದ ಕಲ್ಪನಾ ಸೊರೇನ್‌ ಕಣಕ್ಕೆ?

Ashwin Vaishnav

Train ಪ್ರಯಾಣಿಕರಿಗೆ ಇನ್ನು 20 ರೂ.ಗಳಲ್ಲಿ ಊಟ!

1-sadguru

Sadhguru; ಕಾವೇರಿ ಕಾಲಿಂಗ್‌ ಮೂಲಕ 10.9 ಕೋಟಿ ಸಸಿಗಳ ನಾಟಿ

Ra

Congress; ಇಂದು ರಾಜ್ಯಕ್ಕೆ ರಾಹುಲ್‌ ಗಾಂಧಿ

Kharge (2)

Letter; ನ್ಯಾಯಪತ್ರ ಬಗ್ಗೆ ವಿವರಿಸಲು ಪಿಎಂ ಮೋದಿ ಸಮಯ ಕೇಳಿದ ಖರ್ಗೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Reservation: ಜನಸಂಖ್ಯೆ ಆಧಾರದಲ್ಲಿ ಮೀಸಲು ನೀಡಲು ಸಿದ್ಧರೇ?

Reservation: ಜನಸಂಖ್ಯೆ ಆಧಾರದಲ್ಲಿ ಮೀಸಲು ನೀಡಲು ಸಿದ್ಧರೇ?

Ra

Congress; ಇಂದು ರಾಜ್ಯಕ್ಕೆ ರಾಹುಲ್‌ ಗಾಂಧಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

State government: ರಾಜ್ಯ ಸರಕಾರಕ್ಕೆ ಎನ್‌ಸಿಬಿ ನೋಟಿಸ್‌? 

State government: ರಾಜ್ಯ ಸರಕಾರಕ್ಕೆ ಎನ್‌ಸಿಬಿ ನೋಟಿಸ್‌? 

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qeqqew

I.N.D.I.A;ಗಂಡೇ ವಿಧಾನಸಭೆ ಕ್ಷೇತ್ರದಿಂದ ಕಲ್ಪನಾ ಸೊರೇನ್‌ ಕಣಕ್ಕೆ?

Ashwin Vaishnav

Train ಪ್ರಯಾಣಿಕರಿಗೆ ಇನ್ನು 20 ರೂ.ಗಳಲ್ಲಿ ಊಟ!

Reservation: ಜನಸಂಖ್ಯೆ ಆಧಾರದಲ್ಲಿ ಮೀಸಲು ನೀಡಲು ಸಿದ್ಧರೇ?

Reservation: ಜನಸಂಖ್ಯೆ ಆಧಾರದಲ್ಲಿ ಮೀಸಲು ನೀಡಲು ಸಿದ್ಧರೇ?

Supreme Court

Supreme Court; ಖಾಸಗಿ ಆಸ್ತಿಯನ್ನು ಸ್ವಾಧೀನ ಮಾಡಬಹುದೇ? 

1-sadguru

Sadhguru; ಕಾವೇರಿ ಕಾಲಿಂಗ್‌ ಮೂಲಕ 10.9 ಕೋಟಿ ಸಸಿಗಳ ನಾಟಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.