ರೈತರ ಸಾಲಮನ್ನಾ ಮಾಡಲು ತೆರಾಲು ಗ್ರಾಮಸ್ಥರು ಆಗ್ರಹ
Team Udayavani, Sep 1, 2018, 6:50 AM IST
ಮಡಿಕೇರಿ: ಅತಿವೃಷ್ಟಿಯಿಂದ ನಿರಾಶ್ರಿತರಾಗಿರುವ ಕೊಡಗಿನ ನೈಜ ಸಂತ್ರಸ್ತರನ್ನು ಗುರುತಿಸಿ ಪುನರ್ವಸತಿ ಕಲ್ಪಿಸುವುದರೊಂದಿಗೆ ಬೆಳೆ ನಾಶವಾಗಿ ಸಂಕಷ್ಟಕ್ಕೆ ಸಿಲುಕಿರುವ ಎಲ್ಲ ರೈತರ ಸಾಲ ಮನ್ನಾ ಮಾಡಬೇಕೆಂದು ದಕ್ಷಿಣ ಕೊಡಗಿನ ಗಡಿ ಗ್ರಾಮವಾದ ತೆರಾಲುವಿನ ಗ್ರಾಮಸ್ಥರು ಒತ್ತಾಯಿಸಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಬಿರುನಾಣಿ ಗ್ರಾಮ ಪಂಚಾಯತ್ ಸದಸ್ಯ ಬಿ.ಎಂ.ಗಿರೀಶ್ ಪೆಮ್ಮಯ್ಯ, ಕೇರಳದ ವಯನಾಡು ಜಿಲ್ಲೆಯ ಗಡಿಯಲ್ಲಿ, ಬೆಟ್ಟ ಗುಡ್ಡಗಳಿಂದ ಆವೃತ್ತವಾದ ಪ್ರದೇಶದಲ್ಲಿರುವ ತೆರಾಲು ಗ್ರಾಮದಲ್ಲಿ ಈ ಬಾರಿ 350 ಇಂಚಿಗೂ ಅಧಿಕ ಮಳೆಯಾಗಿ ಕೃಷಿ ಫಸಲು ಮತ್ತು ಕಾಫಿ ಬೆಳೆ ಸಂಪೂರ್ಣವಾಗಿ ನಾಶವಾಗಿದೆ ಎಂದು ಅಸಹಾಯಕತೆ ವ್ಯಕ್ತಪಡಿಸಿದರು.
ಹೆಚ್ಚುವರಿ ಅಕ್ಕಿ, ಸೀಮೆಎಣ್ಣೆಗೆ ಕುಡಿಯ ಜನಾಂಗ ಬೇಡಿಕೆ
ಮಡಿಕೇರಿ: ಮಡಿಕೇರಿ ತಾಲೂಕಿನ ಬ್ರಹ್ಮಗಿರಿ ಬೆಟ್ಟದ ತಪ್ಪಲಲ್ಲಿ ವಾಸಿಸುವ ಕುಡಿಯ ಜನಾಂಗದವರು ಕಳೆದ ಎರಡು ತಿಂಗಳಿಂದ ಕೂಲಿ ಕೆಲಸವಿಲ್ಲದೆ, ಪೌಷ್ಠಿಕ ಆಹಾರದ ಕೊರತೆಯಿಂದ ಬಳಲುತ್ತಿದ್ದಾರೆ. ಅತಿವೃಷ್ಟಿಯಿಂದ ಮುಂದಿನ ಎರಡು ತಿಂಗಳು ಕೂಲಿ ಕೆಲಸ ದೊರೆಯುವುದು ಕಷ್ಟವಾಗಿದೆ.
ಹೀಗಾಗಿ, ಸರಕಾರ ಕುಡಿಯ ಜನಾಂಗದ ಕುಟುಂಬಗಳಿಗೆ ಮಾಸಿಕ 25 ಕೆ.ಜಿ.ಅಕ್ಕಿ ಹಾಗೂ 5 ಲೀಟರ್ ಸೀಮೆ
ಎಣ್ಣೆಯನ್ನು ಒದಗಿಸಬೇಕು ಎಂದು ಬುಡಕಟ್ಟು ಕೃಷಿಕರ ಸಂಘದ ಮಡಿಕೇರಿ ತಾಲೂಕು ಅಧ್ಯಕ್ಷ ಕುಡಿಯರ ಎ.ಮುತ್ತಪ್ಪ ಒತ್ತಾಯಿಸಿದ್ದಾರೆ.
ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಅತಿವೃಷ್ಟಿಯಿಂದಾಗಿ ಕೊಡಗಿನ ಬೆಳೆಗಾರರು ಸೇರಿದಂತೆ ಜನಸಾಮಾನ್ಯರು ತೀವ್ರ ಸಂಕಷ್ಟಕ್ಕೆ ಸಿಲುಕಿದ್ದು, ಸಹಕಾರ ಸಂಸ್ಥೆ ಹಾಗೂ ರಾಷ್ಟ್ರೀಕೃತ ಬ್ಯಾಂಕ್ಗಳಲ್ಲಿ ಮಾಡಿರುವ ಎಲ್ಲ ವಿಧದ ಸಾಲಗಳನ್ನು ಸರಕಾರ ಮನ್ನಾ ಮಾಡಬೇಕು ಎಂದು ಆಗ್ರಹಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ
Lok Sabha Polls: “ಮೋದಿ ಮತ್ತೊಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ
Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್
Lok Sabha Election: ಸೀನಿಯರ್ ಖೂಬಾಗೆ ಜ್ಯೂನಿಯರ್ ಖಂಡ್ರೆ ಸವಾಲು
Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…
MUST WATCH
ಹೊಸ ಸೇರ್ಪಡೆ
Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ
Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ
ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್ ಕುಮಾರ್ ಉದ್ಯಾವರ
Vote: ಬನ್ನಿ ಉತ್ತಮ ನಾಯಕನನ್ನು ಆಯ್ಕೆ ಮಾಡೋಣ
ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ