ರೈತರ ಸಾಲಮನ್ನಾ ಮಾಡಲು ತೆರಾಲು ಗ್ರಾಮಸ್ಥರು ಆಗ್ರಹ
Team Udayavani, Sep 1, 2018, 6:50 AM IST
ಮಡಿಕೇರಿ: ಅತಿವೃಷ್ಟಿಯಿಂದ ನಿರಾಶ್ರಿತರಾಗಿರುವ ಕೊಡಗಿನ ನೈಜ ಸಂತ್ರಸ್ತರನ್ನು ಗುರುತಿಸಿ ಪುನರ್ವಸತಿ ಕಲ್ಪಿಸುವುದರೊಂದಿಗೆ ಬೆಳೆ ನಾಶವಾಗಿ ಸಂಕಷ್ಟಕ್ಕೆ ಸಿಲುಕಿರುವ ಎಲ್ಲ ರೈತರ ಸಾಲ ಮನ್ನಾ ಮಾಡಬೇಕೆಂದು ದಕ್ಷಿಣ ಕೊಡಗಿನ ಗಡಿ ಗ್ರಾಮವಾದ ತೆರಾಲುವಿನ ಗ್ರಾಮಸ್ಥರು ಒತ್ತಾಯಿಸಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಬಿರುನಾಣಿ ಗ್ರಾಮ ಪಂಚಾಯತ್ ಸದಸ್ಯ ಬಿ.ಎಂ.ಗಿರೀಶ್ ಪೆಮ್ಮಯ್ಯ, ಕೇರಳದ ವಯನಾಡು ಜಿಲ್ಲೆಯ ಗಡಿಯಲ್ಲಿ, ಬೆಟ್ಟ ಗುಡ್ಡಗಳಿಂದ ಆವೃತ್ತವಾದ ಪ್ರದೇಶದಲ್ಲಿರುವ ತೆರಾಲು ಗ್ರಾಮದಲ್ಲಿ ಈ ಬಾರಿ 350 ಇಂಚಿಗೂ ಅಧಿಕ ಮಳೆಯಾಗಿ ಕೃಷಿ ಫಸಲು ಮತ್ತು ಕಾಫಿ ಬೆಳೆ ಸಂಪೂರ್ಣವಾಗಿ ನಾಶವಾಗಿದೆ ಎಂದು ಅಸಹಾಯಕತೆ ವ್ಯಕ್ತಪಡಿಸಿದರು.
ಹೆಚ್ಚುವರಿ ಅಕ್ಕಿ, ಸೀಮೆಎಣ್ಣೆಗೆ ಕುಡಿಯ ಜನಾಂಗ ಬೇಡಿಕೆ
ಮಡಿಕೇರಿ: ಮಡಿಕೇರಿ ತಾಲೂಕಿನ ಬ್ರಹ್ಮಗಿರಿ ಬೆಟ್ಟದ ತಪ್ಪಲಲ್ಲಿ ವಾಸಿಸುವ ಕುಡಿಯ ಜನಾಂಗದವರು ಕಳೆದ ಎರಡು ತಿಂಗಳಿಂದ ಕೂಲಿ ಕೆಲಸವಿಲ್ಲದೆ, ಪೌಷ್ಠಿಕ ಆಹಾರದ ಕೊರತೆಯಿಂದ ಬಳಲುತ್ತಿದ್ದಾರೆ. ಅತಿವೃಷ್ಟಿಯಿಂದ ಮುಂದಿನ ಎರಡು ತಿಂಗಳು ಕೂಲಿ ಕೆಲಸ ದೊರೆಯುವುದು ಕಷ್ಟವಾಗಿದೆ.
ಹೀಗಾಗಿ, ಸರಕಾರ ಕುಡಿಯ ಜನಾಂಗದ ಕುಟುಂಬಗಳಿಗೆ ಮಾಸಿಕ 25 ಕೆ.ಜಿ.ಅಕ್ಕಿ ಹಾಗೂ 5 ಲೀಟರ್ ಸೀಮೆ
ಎಣ್ಣೆಯನ್ನು ಒದಗಿಸಬೇಕು ಎಂದು ಬುಡಕಟ್ಟು ಕೃಷಿಕರ ಸಂಘದ ಮಡಿಕೇರಿ ತಾಲೂಕು ಅಧ್ಯಕ್ಷ ಕುಡಿಯರ ಎ.ಮುತ್ತಪ್ಪ ಒತ್ತಾಯಿಸಿದ್ದಾರೆ.
ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಅತಿವೃಷ್ಟಿಯಿಂದಾಗಿ ಕೊಡಗಿನ ಬೆಳೆಗಾರರು ಸೇರಿದಂತೆ ಜನಸಾಮಾನ್ಯರು ತೀವ್ರ ಸಂಕಷ್ಟಕ್ಕೆ ಸಿಲುಕಿದ್ದು, ಸಹಕಾರ ಸಂಸ್ಥೆ ಹಾಗೂ ರಾಷ್ಟ್ರೀಕೃತ ಬ್ಯಾಂಕ್ಗಳಲ್ಲಿ ಮಾಡಿರುವ ಎಲ್ಲ ವಿಧದ ಸಾಲಗಳನ್ನು ಸರಕಾರ ಮನ್ನಾ ಮಾಡಬೇಕು ಎಂದು ಆಗ್ರಹಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Thirthahalli: ರಾಜ್ಯದ 28 ಕ್ಷೇತ್ರವನ್ನೂ ಗೆಲ್ಲಿಸಬೇಕೆಂದು ಜೆಡಿಎಸ್ ಪಕ್ಷದೊಂದಿಗೆ ಮೈತ್ರಿ
Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್
ದಿಂಗಾಲೇಶ್ವರ ಸ್ವಾಮೀಜಿಗೆ ತಪ್ಪು ತಿಳಿವಳಿಕೆಯಾಗಿದ್ದರೆ ಸರಿಪಡಿಸುವೆ: ಸಚಿವ ಪ್ರಹ್ಲಾದ ಜೋಶಿ
ಲೋಕಸಭಾ ಚುನಾವಣೆ: ಈ ಬಾರಿ ತೆಲಂಗಾಣದಲ್ಲಿ 10ಕ್ಕೂ ಅಧಿಕ ಕ್ಷೇತ್ರಗಳಲ್ಲಿ ಗೆಲುವು; ಅಭಯ ಪಾಟೀಲ
ಕಾಂಗ್ರೆಸ್ ನವರು ಕೇಸರಿ ಶಾಲು ಹಾಕಿದಾಕ್ಷಣ ಮನಸ್ಥಿತಿ ಬದಲಾಗಲ್ಲ… ಶೆಟ್ಟರ್ ಆರೋಪ
MUST WATCH
ಹೊಸ ಸೇರ್ಪಡೆ
Delhi: ದುಬಾರಿ ಮರ್ಸಿಡೆಸ್ ಕಾರಿನಲ್ಲಿ ಡ್ರಗ್ಸ್ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!
Thirthahalli: ರಾಜ್ಯದ 28 ಕ್ಷೇತ್ರವನ್ನೂ ಗೆಲ್ಲಿಸಬೇಕೆಂದು ಜೆಡಿಎಸ್ ಪಕ್ಷದೊಂದಿಗೆ ಮೈತ್ರಿ
Tollywood: ಸಿದ್ಧಾರ್ಥ್ – ಅದಿತಿ ರಾವ್ ಮದುವೆ ಆಗಿಲ್ಲ: ಎಂಗೇಜ್ ಮೆಂಟ್ ಮಾಡಿಕೊಂಡ ಜೋಡಿ
RC 17: ಮತ್ತೆ ಒಂದಾದ ರಂಗಸ್ಥಳಂ ತಂಡ
Crime; ಹುಣಸಗಿ: ನೀರಿನ ವಿಚಾರಕ್ಕೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯ