ನೋಟಿಸ್ ನೀಡದಂತೆ ಬ್ಯಾಂಕ್ಗಳಿಗೆ ಸೂಚನೆ
Team Udayavani, Sep 2, 2018, 6:45 AM IST
ಕೊಪ್ಪಳ: ಸಾಲ ಪಡೆದ ರೈತರಿಗೆ ಬ್ಯಾಂಕ್ಗಳು ನೋಟಿಸ್ ನೀಡದಂತೆ ಸೂಚಿಸಲು ಸಚಿವ ಸಂಪುಟದಲ್ಲಿ ಚರ್ಚೆ
ನಡೆಸಿದ್ದು, ಶೀಘ್ರದಲ್ಲೇ ಬ್ಯಾಂಕ್ಗಳಿಗೆ ಮಾಹಿತಿ ರವಾನೆಯಾಗಲಿದೆ ಎಂದು ಅರಣ್ಯ ಸಚಿವ ಆರ್. ಶಂಕರ್ ಹೇಳಿದರು.
ತಾಲೂಕಿನ ವಣ ಬಳ್ಳಾರಿಯಲ್ಲಿ ಬೆಳೆ ಹಾನಿ ವೀಕ್ಷಣೆ ಮಾಡಿದ ಬಳಿಕ ಸುದ್ದಿಗಾರರ ಜತೆ ಅವರು ಮಾತನಾಡಿದರು. ಸರ್ಕಾರ ಈಗಾಗಲೇ ರೈತರ ರಾಷ್ಟ್ರೀಕೃತ ಬ್ಯಾಂಕ್ಗಳ ಸಾಲಮನ್ನಾ ಮಾಡುವ ಘೋಷಣೆ ಮಾಡಿದೆ.
ಶುಕ್ರವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ಸಾಲ ಮನ್ನಾ ವಿಚಾರದ ಕುರಿತು ಚರ್ಚೆ ನಡೆಸಿದ್ದು, ಯಾವುದೇ ಬ್ಯಾಂಕ್ ರೈತರಿಗೆ ನೊಟೀಸ್ ನೀಡುವಂತಿಲ್ಲ ಎಂದು ತೀರ್ಮಾನಿಸಲಾಗಿದೆ. ಈ ಮಾಹಿತಿ ಶೀಘ್ರದಲ್ಲೇ ಬ್ಯಾಂಕ್ಗಳಿಗೆ ರವಾನೆಯಾಗಲಿದೆ ಎಂದರು.