ಭೂಗಳ್ಳರ ಬಲಿ ಹಾಕದೆ ಬಿಡಲ್ಲ: ಸಚಿವ ರೇವಣ್ಣ
Team Udayavani, Sep 2, 2018, 6:55 AM IST
ಹಾಸನ: “ಮಂತ್ರಿಸ್ಥಾನ ಹೋದ್ರೂ ಪರವಾಗಿಲ್ಲ. ಕೈಗಾರಿಕೆಗಳ ಸ್ಥಾಪನೆ ಹೆಸರಿನಲ್ಲಿ ನೂರಾರು ಎಕರೆ ಭೂಮಿ ಪಡೆದುಕೊಂಡು ಅವ್ಯವಹಾರ ನಡೆಸುತ್ತಿರುವವರನ್ನು ಬಲಿ ಹಾಕದೆ ಬಿಡುವುದಿಲ್ಲ. ಒಂದು ವಾರ ಟೈಂ ಕೊಡಿ, ಏನೇನು ಮಾಡುತ್ತೇನೆ ನೋಡ್ತಾ ಇರಿ’ ಎಂದು ಜಿಲ್ಲಾ ಉಸ್ತುವಾರಿ ಸಚಿವ ಎಚ್.ಡಿ.ರೇವಣ್ಣ ಹೇಳಿದರು.
ರೈತರಿಗೆ ಪ್ರತಿ ಎಕರೆಗೆ ಒಂದೆರಡು ಲಕ್ಷ ರೂ. ನೀಡಿ ಭೂ ಸ್ವಾಧೀನಪಡಿಸಿಕೊಂಡು ಕೈಗಾರಿಕೋದ್ಯಮಿಗಳಿಗೆ ಭೂಮಿ ಮಂಜೂರು ಮಾಡಿ ಅವ್ಯವಹಾರಕ್ಕೆ ಕುಮ್ಮಕ್ಕು ನೀಡಿರುವ ಕೆಐಎಡಿಬಿ ಅಧಿಕಾರಿಗಳು, ಕೈಗಾರಿಕೆಗಾಗಿ ಭೂಮಿ ಪಡೆದುಕೊಂಡು ರಿಯಲ್ ಎಸ್ಟೇಟ್ ದಂಧೆ ನಡೆಸುತ್ತಿರುವವರ ಬಲಿ ಹಾಕದೆ ಬಿಡುವುದಿಲ್ಲ ಎಂದು ಹೇಳಿದರು.
ಕೆಐಎಡಿಬಿಯಷ್ಟೇ ಅಲ್ಲ, ಹೇಮಾವತಿ ಜಲಾಶಯ ಯೋಜನೆ ಭೂ ಸ್ವಾಧೀನಾಧಿಕಾರಿಯವರ ಕಚೇರಿ, ಎನ್ಎಚ್ಎಐ ಭೂ ಸ್ವಾಧೀನಾಧಿಕಾರಿಯವರ ಕಚೇರಿಗಳು ಭೂ ಗಳ್ಳರ ದಂಧೆಗೆ ಕೇಂದ್ರ ಸ್ಥಾನಗಳಾಗಿವೆ. ರೈತರಿಂದ ಸಾಕಷ್ಟು ದೂರುಗಳು ಬಂದಿವೆ. ಈ ಸಂಬಂಧ ಜಿಲ್ಲಾಧಿಕಾರಿ ಕಚೇರಿಯಲ್ಲಿ ಶೀಘ್ರವೇ ಮಾಹಿತಿ ಪಡೆದುಕೊಂಡು ಆನಂತರ ತನಿಖೆ ನಡೆಸಲಾಗುವುದು ಎಂದರು.
ಭೂ ಕುಸಿತದಿಂದ ವಾಹನ ಸಂಚಾರ ಬಂದ್ ಆಗಿರುವ ರಾಷ್ಟ್ರೀಯ ಹೆದ್ದಾರಿ- 75ರ ಶಿರಾಡಿಘಾಟ್ ಮತ್ತು ಮೈಸೂರು -ಮಡಿಕೇರಿ- ಮಂಗಳೂರು ರಸ್ತೆಯಲ್ಲಿ ಇನ್ನು 10 ದಿನಗಳೊಳಗೆ ಲಘು ವಾಹನ ಸಂಚಾರಕ್ಕೆ ಅನುವು ಮಾಡಿಕೊಡಲಾಗುವುದು.
– ಎಚ್.ಡಿ.ರೇವಣ್ಣ, ಲೋಕೋಪಯೋಗಿ ಸಚಿವ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ
B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್ವೈ ಗರಂ
Transfer order: ರಾಜ್ಯದ 388 ನ್ಯಾಯಾಧೀಶರ ವರ್ಗಾವಣೆ ಮಾಡಿ ಆದೇಶ
PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ
Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!
MUST WATCH
ಹೊಸ ಸೇರ್ಪಡೆ
Election Commission: ಮೋದಿ, ರಾಹುಲ್ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್
IPL: ಎಲ್ಲೆ ಮೀರಿ ವಿಕೆಟ್ ಸಂಭ್ರಮಾಚರಣೆಡೆಲ್ಲಿ ವೇಗಿ ರಸಿಕ್ ಸಲಾಂಗೆ ಛೀಮಾರಿ
IPL: ಇಂಪ್ಯಾಕ್ಟ್ ಪ್ಲೇಯರ್ ನಿಯಮಕ್ಕೆ ಅಕ್ಷರ್ ಪಟೇಲ್ ಕೂಡ ವಿರೋಧ
Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ
Sumalatha Ambareesh: ಟ್ವೀಟ್ನಲ್ಲಿ ಸಂಸದೆ ಸುಮಲತಾ ಅಂಬರೀಶ್ ವಿವೇಕದ ಪಾಠ