ಭೂಗಳ್ಳರ ಬಲಿ ಹಾಕದೆ ಬಿಡಲ್ಲ: ಸಚಿವ ರೇವಣ್ಣ
Team Udayavani, Sep 2, 2018, 6:55 AM IST
ಹಾಸನ: “ಮಂತ್ರಿಸ್ಥಾನ ಹೋದ್ರೂ ಪರವಾಗಿಲ್ಲ. ಕೈಗಾರಿಕೆಗಳ ಸ್ಥಾಪನೆ ಹೆಸರಿನಲ್ಲಿ ನೂರಾರು ಎಕರೆ ಭೂಮಿ ಪಡೆದುಕೊಂಡು ಅವ್ಯವಹಾರ ನಡೆಸುತ್ತಿರುವವರನ್ನು ಬಲಿ ಹಾಕದೆ ಬಿಡುವುದಿಲ್ಲ. ಒಂದು ವಾರ ಟೈಂ ಕೊಡಿ, ಏನೇನು ಮಾಡುತ್ತೇನೆ ನೋಡ್ತಾ ಇರಿ’ ಎಂದು ಜಿಲ್ಲಾ ಉಸ್ತುವಾರಿ ಸಚಿವ ಎಚ್.ಡಿ.ರೇವಣ್ಣ ಹೇಳಿದರು.
ರೈತರಿಗೆ ಪ್ರತಿ ಎಕರೆಗೆ ಒಂದೆರಡು ಲಕ್ಷ ರೂ. ನೀಡಿ ಭೂ ಸ್ವಾಧೀನಪಡಿಸಿಕೊಂಡು ಕೈಗಾರಿಕೋದ್ಯಮಿಗಳಿಗೆ ಭೂಮಿ ಮಂಜೂರು ಮಾಡಿ ಅವ್ಯವಹಾರಕ್ಕೆ ಕುಮ್ಮಕ್ಕು ನೀಡಿರುವ ಕೆಐಎಡಿಬಿ ಅಧಿಕಾರಿಗಳು, ಕೈಗಾರಿಕೆಗಾಗಿ ಭೂಮಿ ಪಡೆದುಕೊಂಡು ರಿಯಲ್ ಎಸ್ಟೇಟ್ ದಂಧೆ ನಡೆಸುತ್ತಿರುವವರ ಬಲಿ ಹಾಕದೆ ಬಿಡುವುದಿಲ್ಲ ಎಂದು ಹೇಳಿದರು.
ಕೆಐಎಡಿಬಿಯಷ್ಟೇ ಅಲ್ಲ, ಹೇಮಾವತಿ ಜಲಾಶಯ ಯೋಜನೆ ಭೂ ಸ್ವಾಧೀನಾಧಿಕಾರಿಯವರ ಕಚೇರಿ, ಎನ್ಎಚ್ಎಐ ಭೂ ಸ್ವಾಧೀನಾಧಿಕಾರಿಯವರ ಕಚೇರಿಗಳು ಭೂ ಗಳ್ಳರ ದಂಧೆಗೆ ಕೇಂದ್ರ ಸ್ಥಾನಗಳಾಗಿವೆ. ರೈತರಿಂದ ಸಾಕಷ್ಟು ದೂರುಗಳು ಬಂದಿವೆ. ಈ ಸಂಬಂಧ ಜಿಲ್ಲಾಧಿಕಾರಿ ಕಚೇರಿಯಲ್ಲಿ ಶೀಘ್ರವೇ ಮಾಹಿತಿ ಪಡೆದುಕೊಂಡು ಆನಂತರ ತನಿಖೆ ನಡೆಸಲಾಗುವುದು ಎಂದರು.
ಭೂ ಕುಸಿತದಿಂದ ವಾಹನ ಸಂಚಾರ ಬಂದ್ ಆಗಿರುವ ರಾಷ್ಟ್ರೀಯ ಹೆದ್ದಾರಿ- 75ರ ಶಿರಾಡಿಘಾಟ್ ಮತ್ತು ಮೈಸೂರು -ಮಡಿಕೇರಿ- ಮಂಗಳೂರು ರಸ್ತೆಯಲ್ಲಿ ಇನ್ನು 10 ದಿನಗಳೊಳಗೆ ಲಘು ವಾಹನ ಸಂಚಾರಕ್ಕೆ ಅನುವು ಮಾಡಿಕೊಡಲಾಗುವುದು.
– ಎಚ್.ಡಿ.ರೇವಣ್ಣ, ಲೋಕೋಪಯೋಗಿ ಸಚಿವ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…
Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ
Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ
IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ; ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ
Paper leak case: ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣ; 15 ಮಂದಿ ಆರೋಪಿಗಳು ಖುಲಾಸೆ
MUST WATCH
ಹೊಸ ಸೇರ್ಪಡೆ
Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…
ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು
LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ
Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ
IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್