ಚಾರ್ಮಾಡಿ ಘಾಟಿ: ಭಾರೀ ವಾಹನ ಸಂಚಾರ ನಿಷೇಧ
Team Udayavani, Sep 2, 2018, 6:30 AM IST
ಚಿಕ್ಕಮಗಳೂರು: ಚಾರ್ಮಾಡಿ ಘಾಟಿಯಲ್ಲಿ ಎಲ್ಲ ರೀತಿಯ ಭಾರೀ ವಾಹನಗಳ ಸಂಚಾರ ನಿಷೇಧಿಸಿ ಜಿಲ್ಲಾಧಿಕಾರಿ ಎಂ.ಕೆ. ಶ್ರೀರಂಗಯ್ಯ ಆದೇಶಿಸಿದ್ದಾರೆ.
ಶಿರಾಡಿಘಾಟಿಯಲ್ಲಿ ವಾಹನ ಸಂಚಾರ ಸಂಪೂರ್ಣ ನಿಷೇಧಿಸಲಾಗಿರುವುದರಿಂದ ಎಲ್ಲಾ ವಾಹನಗಳು ಚಾರ್ಮಾಡಿ ಘಾಟಿ ಮೂಲಕ ಸಂಚರಿಸುತ್ತಿದ್ದು ವಾಹನಗಳ ದಟ್ಟಣೆ ಹೆಚ್ಚಾಗಿದ್ದಲ್ಲದೆ ಅಲ್ಲಲ್ಲಿ ಭೂ ಕುಸಿತ ಉಂಟಾಗುತ್ತಿದೆ. ಈ ಭಾಗದಲ್ಲಿ ಭಾರೀ ಮಳೆಯಾಗುತ್ತಿ ರುವುದರಿಂದ ಅಪಾಯಕಾರಿ ಸ್ಥಿತಿಯಿಂದ ಸಾರ್ವಜನಿಕರಿಗೆ ಪ್ರಯಾಣ
ಕಷ್ಟಕರವಾಗುತ್ತಿದೆ.
ಹೀಗಾಗಿ ಸಾರ್ವಜನಿಕ ಹಾಗೂ ಪ್ರಯಾಣಿಕರ ಹಿತದೃಷ್ಟಿಯಿಂದ ಮತ್ತು ಅಪಘಾತಗಳನ್ನು ತಡೆಗಟ್ಟುವ ನಿಟ್ಟಿನಲ್ಲಿ ಮುಂಜಾಗೃತಾ ಕ್ರಮವಾಗಿ ರಾಷ್ಟ್ರೀಯ ಹೆದ್ದಾರಿ 234ರ ಮೂಡಿಗೆರೆ ತಾಲೂಕು ಕೊಟ್ಟಿಗೆಹಾರ- ಚಾರ್ಮಾಡಿ ಘಾಟ್ ಮಾರ್ಗದ ಮೂಲಕ ಎಲ್ಲಾ ರೀತಿಯ ಭಾರೀ ವಾಹನಗಳ ಸಂಚಾರ ನಿಷೇಧಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ
Lok Sabha Polls: “ಮೋದಿ ಮತ್ತೊಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ
Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್
Lok Sabha Election: ಸೀನಿಯರ್ ಖೂಬಾಗೆ ಜ್ಯೂನಿಯರ್ ಖಂಡ್ರೆ ಸವಾಲು
Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…