ಬೆಳಗಾವಿಯಲ್ಲಿ ಪಕ್ಷೇತರರದ್ದೇ ಮೇಲುಗೈ


Team Udayavani, Sep 4, 2018, 6:20 AM IST

ramesh.jpg

ಬೆಳಗಾವಿ: ಜಿಲ್ಲೆಯಲ್ಲಿ ಎರಡು ನಗರಸಭೆ, 10 ಪುರಸಭೆ ಮತ್ತು 2 ಪ.ಪಂ.ಗಳಿಗೆ ನಡೆದ ಚುನಾವಣೆಯಲ್ಲಿ ಪಕ್ಷೇತರರು ಅಧಿಕ ಸ್ಥಾನಗಳಲ್ಲಿ ಜಯಗಳಿಸಿ ಗಮನ ಸೆಳೆದಿದ್ದು, ಬಿಜೆಪಿ ಮತ್ತು ಕಾಂಗ್ರೆಸ್‌ ತಲಾ ನಾಲ್ಕು ಕಡೆ ಸ್ಪಷ್ಟ ಬಹುಮತದೊಂದಿಗೆ ಅಧಿಕಾರದ ಗದ್ದುಗೆ ಹಿಡಿದಿವೆ.

14 ನಗರ ಸ್ಥಳೀಯ ಸಂಸ್ಥೆಗಳ 343 ವಾರ್ಡುಗಳ ಪೈಕಿ 14 ಕಡೆಗಳಲ್ಲಿ ಅವಿರೋಧ ಆಯ್ಕೆ ನಡೆದಿತ್ತು. ಒಟ್ಟಾರೆ
ಫಲಿತಾಂಶದಲ್ಲಿ ಪಕ್ಷೇತರ ಅಭ್ಯರ್ಥಿಗಳು 144 ಸ್ಥಾನಗಳಲ್ಲಿ ಜಯಗಳಿಸಿದ್ದಾರೆ.

ಬಿಜೆಪಿಯ 104 ಅಭ್ಯರ್ಥಿಗಳು ಜಯಗಳಿಸಿ 2ನೇ ಸ್ಥಾನದಲ್ಲಿದ್ದರೆ, ಕಾಂಗ್ರೆಸ್‌ 85 ಸ್ಥಾನಗಳಿಸಿ 3ನೇ ಸ್ಥಾನಕ್ಕೆ
ತೃಪ್ತಿಪಟ್ಟಿದೆ. ಜೆಡಿಎಸ್‌ ಅಭ್ಯರ್ಥಿಗಳು ಕೇವಲ 10 ಕಡೆ ಮಾತ್ರ ಜಯಗಳಿಸಿ ಮುಖಭಂಗ ಅನುಭವಿಸಿದ್ದಾರೆ.

ಸಂಕೇಶ್ವರ ಪುರಸಭೆ ಹಾಗೂ ನಿಪ್ಪಾಣಿ ನಗರಸಭೆಯಲ್ಲಿ ಅತಂತ್ರ ಸ್ಥಿತಿ ನಿರ್ಮಾಣ ಆಗಿದೆ. ನಾಲ್ಕು ಕಡೆ ಪಕ್ಷೇತರರು ಅಧಿಕ ಸಂಖ್ಯೆಯಲ್ಲಿ ಜಯಗಳಿಸಿ ಅಧಿಕಾರ ಹಿಡಿಯುತ್ತಿದ್ದಾರೆ. ಗೋಕಾಕ ನಗರಸಭೆಯಲ್ಲಿ ಸಚಿವ ರಮೇಶ ಜಾರಕಿಹೊಳಿ ಬೆಂಬಲಿತ ಗುಂಪು ಮೇಲುಗೈ ಸಾಧಿಸಿದೆ. ಅದೇ ಕೊಣ್ಣೂರ ಪುರಸಭೆಯಲ್ಲಿ ಸಹ ರಮೇಶ ಜಾರಕಿಹೊಳಿ ಗುಂಪು ಮತ್ತೆ ಅಧಿಕಾರಕ್ಕೆ ಬಂದಿದೆ.

ಚಿಕ್ಕೋಡಿ ಪುರಸಭೆಯಲ್ಲಿ ಬಿಜೆಪಿ ಬೆಂಬಲಿತ ಗುಂಪು ಅಧಿಕಾರ ಹಿಡಿದಿದೆ. ಕಳೆದ ಬಾರಿ ಇಲ್ಲಿ ಕಾಂಗ್ರೆಸ್‌ ಗುಂಪು ಅಧಿಕಾರ ನಡೆಸಿತ್ತು. ಖಾನಾಪುರದಲ್ಲಿ ಸಹ ಪಕ್ಷೇತರರ ಗುಂಪು ಮರಳಿ ಅಧಿಕಾರ ಹಿಡಿಯಲಿದೆ. ಇಲ್ಲಿ ಕಾಂಗ್ರೆಸ್‌ ಹೆಸರಿನಲ್ಲಿ ಸ್ಪರ್ಧೆ ಮಾಡಿರಲಿಲ್ಲ. ಬಿಜೆಪಿ ಕೇವಲ ಮೂರು ಕಡೆ ಮಾತ್ರ ಸ್ಪರ್ಧೆ ಮಾಡಿದ್ದು, ಎಲ್ಲರಲ್ಲೂ ಸೋತಿದೆ.

ನಿಪ್ಪಾಣಿ ನಗರಸಭೆಯಲ್ಲಿ ಯಾರಿಗೂ ಸ್ಪಷ್ಟಬಹುಮತ ಬರದೇ ಅತಂತ್ರ ಸ್ಥಿತಿ ನಿರ್ಮಾಣ ಆಗಿದೆ. ಒಟ್ಟು 31 ಸ್ಥಾನಗಳ
ಪೈಕಿ 13 ಸ್ಥಾನಗಳಿಸಿ ಅತಿ ದೊಡ್ಡ ಪಕ್ಷವಾಗಿರುವ ಬಿಜೆಪಿ ಆರು ಸ್ಥಾನಗಳಿಸಿರುವ ಪಕ್ಷೇತರರ ಮೇಲೆ ಅವಲಂಬಿಸುವಂತಾಗಿದೆ. ಪಕ್ಷೇತರರಲ್ಲಿ ಕೆಲವರು ಬಿಜೆಪಿ ಬೆಂಬಲಿತರಾಗಿರುವುದರಿಂದ ಅಧಿಕಾರ ರಚನೆಗೆ ಯಾವುದೇ ಸಮಸ್ಯೆ ಕಾಣುತ್ತಿಲ್ಲ. ಸಂಕೇಶ್ವರ ಪುರಸಭೆಯಲ್ಲೂ ಅತಂತ್ರ ಸ್ಥಿತಿ ನಿರ್ಮಾಣ ಆಗಿದೆ. ಒಟ್ಟು 23 ಸದಸ್ಯರ ಪೈಕಿ ಕಾಂಗ್ರೆಸ್‌ ಹಾಗೂ ಬಿಜೆಪಿ ತಲಾ 11 ಸ್ಥಾನ ಗಳಿಸಿದ್ದು, ಒಂದು ಕಡೆ ಜಯಗಳಿಸಿರುವ ಪಕ್ಷೇತರ ಅಭ್ಯರ್ಥಿನಿರ್ಣಾಯಕರಾಗಿದ್ದಾರೆ.

ಕಳೆದ ಚುನಾವಣೆಯಲ್ಲಿ ಸಹ ಪಕ್ಷೇತರರೇ ಮೇಲುಗೈ ಸಾಧಿಸಿದ್ದು, ಏಳು ಸ್ಥಳೀಯ ಸಂಸ್ಥೆಗಳಲ್ಲಿ ಕಾಂಗ್ರೆಸ್‌ ಹಾಗೂ ಬಿಜೆಪಿ ಬೆಂಬಲಿತರಾಗಿ ಅಧಿಕಾರ ರಚನೆ ಮಾಡಿದ್ದರು. ಬಿಜೆಪಿ ಐದು ಕಡೆ ಬಹುಮತ ಪಡೆದು ಅಧಿಕಾರ ಮಾಡಿದ್ದರೆ ಕಾಂಗ್ರೆಸ್‌ ಎರಡು ಕಡೆ ಬಹುಮತ ಗಳಿಸಿತ್ತು.

ಟಾಪ್ ನ್ಯೂಸ್

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

yaksh

Kundapura: ಕಳಚಿದ ಕೊಂಡಿ: ಭಾಗವತ ಸುಬ್ರಹ್ಮಣ್ಯ ಧಾರೇಶ್ವರ ಇನ್ನಿಲ್ಲ

Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ

Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ

Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ

Modi ಹಸಿ ಸುಳ್ಳು: ಸಿಎಂ ಸಿದ್ದರಾಮಯ್ಯ ಕೆಂಡ; ಒಬಿಸಿ, ಎಸ್‌ಸಿ ಮೀಸಲಾತಿ ಹೇಳಿಕೆಗೆ ವಿರೋಧ

Modi ಹಸಿ ಸುಳ್ಳು: ಸಿಎಂ ಸಿದ್ದರಾಮಯ್ಯ ಕೆಂಡ; ಒಬಿಸಿ, ಎಸ್‌ಸಿ ಮೀಸಲಾತಿ ಹೇಳಿಕೆಗೆ ವಿರೋಧ

ಹಂತ 1: 14 ಕ್ಷೇತ್ರಗಳ ಬಹಿರಂಗ ಪ್ರಚಾರ ಅಂತ್ಯ: ನಾಳೆ ಮತದಾನ

Lok Sabha Election; ಹಂತ 1: 14 ಕ್ಷೇತ್ರಗಳ ಬಹಿರಂಗ ಪ್ರಚಾರ ಅಂತ್ಯ: ನಾಳೆ ಮತದಾನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.