ಉತ್ತರ ಕನ್ನಡದಲ್ಲಿ ಕೈ-ಬಿಜೆಪಿ ಸಮಬಲ
Team Udayavani, Sep 4, 2018, 6:25 AM IST
ಕಾರವಾರ: ಉತ್ತರ ಕನ್ನಡ ಜಿಲ್ಲೆಯ 8 ಸ್ಥಳೀಯ ಸಂಸ್ಥೆಗಳಲ್ಲಿ ಕೈ-ಕಮಲ ತಲಾ ಮೂರು ಸ್ಥಾನ ಪಡೆದು ಸಮಬಲ ಹೊಂದಿದ್ದರೆ, ಎರಡು ಕಡೆ ಅತಂತ್ರ ಸ್ಥಿತಿಯಿದೆ.
ಹಳಿಯಾಳ ಪುರಸಭೆ, ದಾಂಡೇಲಿ ನಗರಸಭೆ, ಯಲ್ಲಾಪುರ ಪಟ್ಟಣ ಪಂಚಾಯತ್ ಕೈವಶವಾಗಿದ್ದರೆ, ಶಿರಸಿ ನಗರಸಭೆ, ಕುಮಟಾ ಪುರಸಭೆ, ಮುಂಡಗೋಡ ಪಟ್ಟಣ ಪಂಚಾಯತ್ಗಳಲ್ಲಿ ಕಮಲ ಅರಳಿದೆ. ಕಾರವಾರ ನಗರಸಭೆ ಹಾಗೂ ಅಂಕೋಲಾಗಳಲ್ಲಿ ಅತಂತ್ರ ಸ್ಥಿತಿ ನಿರ್ಮಾಣವಾಗಿದೆ. ಸಚಿವ ಆರ್.ವಿ. ದೇಶಪಾಂಡೆ ಸ್ವಕ್ಷೇತ್ರ ಹಳಿಯಾಳ, ದಾಂಡೇಲಿಗಳಲ್ಲಿ ಕಾಂಗ್ರೆಸ್ ಸ್ಪಷ್ಟ ಬಹುಮತ ಪಡೆದಿದೆ.
ಕಾರವಾರ ಅಂಕೋಲಾ ಕ್ಷೇತ್ರದಲ್ಲಿ ಬಿಜೆಪಿ ಶಾಸಕಿ ರೂಪಾಲಿ ನಾಯ್ಕ ಇದ್ದು, ಮೊದಲ ಬಾರಿಗೆ ಸ್ಥಳೀಯ ಆಡಳಿತವನ್ನು ಕಮಲಮಯ ಮಾಡಿಕೊಳ್ಳುವ ಯತ್ನದಲ್ಲಿ ಪ್ರಗತಿಯಾಗಿದೆ. ಆದರೆ ಸ್ಪಷ್ಟ ಬಹುಮತ ಪ್ರಾಪ್ತಿಯಾಗಿಲ್ಲ. ಬಿಜೆಪಿಯೊಳಗಿನ
ಬಂಡಾಯದಿಂದ ಹಲವು ಕಡೆ ಬಿಜೆಪಿ ಅಭ್ಯರ್ಥಿಗಳು ಸೋಲು ಕಾಣುವಂತಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Congress vs BJP; ಬ್ರಹ್ಮಾವರದಲ್ಲಿ ಶಕ್ತಿ ಪ್ರದರ್ಶನದ ವೇದಿಕೆ!
Shikaripur; ಸಂಭ್ರಮದ ಹುಚ್ಚರಾಯಸ್ವಾಮಿ ಬ್ರಹ್ಮ ರಥೋತ್ಸವ:ಯಡಿಯೂರಪ್ಪ ಕುಟುಂಬ ಭಾಗಿ
Patanjali ತಪ್ಪು ಜಾಹೀರಾತು; ಕ್ಷಮೆಯಾಚಿಸಿದ ಬಾಬಾ ರಾಮ್ ದೇವ್,ಬಾಲಕೃಷ್ಣ
Gayatri Siddeshwar: ಸಮಗ್ರ ನೀರಾವರಿ ಸೌಲಭ್ಯಕ್ಕೆ ಆದ್ಯತೆ; ಗಾಯಿತ್ರಿ
Dr Rajkumar: ಇಂದು ರಾಜ್ 96ನೇ ಹುಟ್ಟು ಹಬ್ಬ; ಅರ್ಥಪೂರ್ಣ ಆಚರಣೆಗೆ ಅಭಿಮಾನಿಗಳ ಸಿದ್ಧತೆ