ಹಿರಿಯ ನಟ ದೊಡ್ಡಣ್ಣ ಆರೋಗ್ಯದಲ್ಲಿ ಏರುಪೇರು
Team Udayavani, Sep 5, 2018, 6:00 AM IST
ರಾಯಚೂರು: ಹಿರಿಯ ನಟ ದೊಡ್ಡಣ್ಣನವರು ತಮ್ಮ ಮನೆ ದೇವರಾದ ತಾಲೂಕಿನ ದೇವಸುಗೂರಿನ ಶ್ರೀ ಸುಗೂರೇಶ್ವರ ಸ್ವಾಮಿ ದರ್ಶನಕ್ಕೆ ಬಂದಾಗ ಕಡಿಮೆ ರಕ್ತದೊತ್ತಡದಿಂದ ಅವರ ಆರೋಗ್ಯ ಏರುಪೇರಾಗಿದೆ. ಪತ್ನಿ ಸಮೇತರಾಗಿ ಸೋಮವಾರ ದೇವಸುಗೂರಿಗೆ ಆಗಮಿಸಿದ್ದ ಚಿತ್ರನಟ ದೊಡ್ಡಣ್ಣ, ಸುಗೂರೇಶ್ವರ ದೇವರ ದರ್ಶನ ಪಡೆದಿದ್ದರು. ಮಂಗಳವಾರ ದೇವರಿಗೆ ಅಭಿಷೇಕ ಮಾಡಿಸಿ ಉರುಳು ಸೇವೆ ಮಾಡುವುದಾಗಿ ತಿಳಿಸಿದ್ದರು. ಆದರೆ, ವಸತಿಗೃಹದಲ್ಲಿ ತಂಗಿದ್ದ ಅವರು ಬಾತ್ರೂಮ್ನಲ್ಲಿ ಕಡಿಮೆ ರಕ್ತದೊತ್ತಡದಿಂದ ನಿಶಕ್ತರಾಗಿ ಕುಸಿದು ಬಿದ್ದರು. ತಕ್ಷಣ ಅವರನ್ನು ಶಕ್ತಿನಗರ ಕೆಪಿಸಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಅನಾರೋಗ್ಯದಿಂದಾಗಿ ದೇವರ ದರ್ಶನ ಪಡೆಯದೆ ವಸತಿಗೃಹದಲ್ಲಿಯೇ ವಿಶ್ರಾಂತಿ ಪಡೆಯುತ್ತಿದ್ದಾರೆ. ಪ್ರಾಥಮಿಕ ಚಿಕಿತ್ಸೆ ನೀಡಿರುವ ಡಾ.ರಮೇಶ ಜಗ್ಲಿ, ಆ್ಯಂಬುಲೆನ್ಸ್ ಮೂಲಕ ಬೆಂಗಳೂರಿಗೆ ತೆರಳುವಂತೆ ಸಲಹೆ ನೀಡಿದ್ದಾರೆ ಎಂದು ತಿಳಿದು ಬಂದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ
ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್ ಬೆಂಬಲಿಸಿ: ಪದ್ಮರಾಜ್ ಪೂಜಾರಿ
ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ
ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ
Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ