ದೊಡ್ಡ ಲೀಡರ್ಗಳ ಬಗ್ಗೆ ಮಾತಾಡಲ್ಲ: ಹೆಬ್ಟಾಳಕರ
Team Udayavani, Sep 5, 2018, 6:00 AM IST
ಬೆಳಗಾವಿ: “ಜಾರಕಿಹೊಳಿ ಸಹೋದರರು ದೊಡ್ಡವರು. ಅವರು ಎಲ್ಲವನ್ನೂ ನಿಭಾಯಿಸಲು ಸಮರ್ಥರಿದ್ದಾರೆ. ದೊಡ್ಡ ಲೀಡರ್ಗಳ ಬಗ್ಗೆ ನಾನೇನೂ ಹೇಳುವುದಿಲ್ಲ’ ಎನ್ನುವ ಮೂಲಕ ಶಾಸಕಿ ಲಕ್ಷ್ಮೀ ಹೆಬ್ಟಾಳಕರ ವಿವಾದದಿಂದ ದೂರ ಉಳಿಯಲು ಯತ್ನಿಸಿದ್ದಾರೆ. ಮಂಗಳವಾರ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು. “ಮೊನ್ನೆ ಬೆಂಗಳೂರಿನಲ್ಲಿ ನಡೆದ ಸಭೆಯಲ್ಲಿ ನನ್ನ ಬಗ್ಗೆ ಚರ್ಚೆಯೇ ಆಗಿಲ್ಲ. ಆದರೆ, ಮಾಧ್ಯಮಗಳಲ್ಲಿ ಹೆಬ್ಟಾಳಕರ ಹಾಗೂ ಜಾರಕಿಹೊಳಿ ಸಹೋದರರ ನಡುವಿನ ಗೊಂದಲದ ಚರ್ಚೆ ಎಂಬ ಸುಳ್ಳು ಸುದ್ದಿ ಪ್ರಸಾರವಾಯಿತು.
ಸಭೆಯಲ್ಲಿ ಜಿಲ್ಲೆಯ ಲೋಕಸಭೆ ಚುನಾವಣೆ ಬಗ್ಗೆ ಮಾತ್ರ ಚರ್ಚೆ ನಡೆದಿದೆ. ಆದರೆ, ನನ್ನ ಹೆಸರಿಗೆ ತಳುಕು ಹಾಕಿ ಸುದ್ದಿ ಮಾಡಲಾಯಿತು’ ಎಂದು ಆರೋಪಿಸಿದರು. ಮುಂಬರುವ ಲೋಕಸಭೆ ಚುನಾವಣೆಗಾಗಿ ಜಿಲ್ಲೆಯ ಅಭ್ಯರ್ಥಿ ಆಯ್ಕೆ ವಿಚಾರದಲ್ಲಿ ಹೈಕಮಾಂಡ್ ನಿರ್ಧಾರ ತೆಗೆದುಕೊಳ್ಳಲಿದೆ.
ಸ್ಥಳೀಯ ಮಟ್ಟದಲ್ಲಿ ನಡೆದ ನಮ್ಮ ಜಗಳವನ್ನು ಇಲ್ಲಿಯೇ ಬಗೆಹರಿಸಿಕೊಳ್ಳುತ್ತೇವೆ. ಇದನ್ನು ಲೋಕಸಭೆ ಚುನಾವಣೆ ಹಾಗೂ ಪಕ್ಷದ ಸಂಘಟನೆ ಮೇಲೆ ಪರಿಣಾಮ ಬೀರಲು ಬಿಡುವುದಿಲ್ಲ ಎಂದರು. “ಲೋಕಸಭೆ ಚುನಾವಣೆಯಲ್ಲಿ ಜಾರಕಿಹೊಳಿಯವರು ಹೇಳಿದ ಅಭ್ಯರ್ಥಿಗೆ ನಾನು ಬೆಂಬಲಿಸುತ್ತೇನೆ. ನನ್ನ ಕ್ಷೇತ್ರದಲ್ಲಿ 53 ಸಾವಿರ ಮತಗಳ ಲೀಡ್ ಕೊಡಿಸುತ್ತೇನೆ. ಆದರೆ, ನನ್ನ ಕ್ಷೇತ್ರದ ವಿಚಾರ ಬಂದಾಗ ಜನರಿಗೆ ನ್ಯಾಯ ಒದಗಿಸುವುದನ್ನು ನಾನು
ಮರೆಯುವುದಿಲ್ಲ. ಪಕ್ಷದ ಒಳಿತಿಗೆ ತಗ್ಗಿ-ಬಗ್ಗಿ ನಡೆಯಲು ನಾನು ಸಿದ್ಧ ‘ ಎಂದು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ
Modi ಹಸಿ ಸುಳ್ಳು: ಸಿಎಂ ಸಿದ್ದರಾಮಯ್ಯ ಕೆಂಡ; ಒಬಿಸಿ, ಎಸ್ಸಿ ಮೀಸಲಾತಿ ಹೇಳಿಕೆಗೆ ವಿರೋಧ
Lok Sabha Election; ಹಂತ 1: 14 ಕ್ಷೇತ್ರಗಳ ಬಹಿರಂಗ ಪ್ರಚಾರ ಅಂತ್ಯ: ನಾಳೆ ಮತದಾನ
ಅನಂತಸ್ವಾಮಿ ಧಾಟಿಯಲ್ಲೇ ನಾಡಗೀತೆ; ರಾಜ್ಯ ಸರಕಾರದ ಆದೇಶ ಎತ್ತಿಹಿಡಿದ ಹೈಕೋರ್ಟ್
Exam; ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ-2ಕ್ಕೆ 1.49 ಲಕ್ಷ ವಿದ್ಯಾರ್ಥಿಗಳ ನೋಂದಣಿ
MUST WATCH
ಹೊಸ ಸೇರ್ಪಡೆ
Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ
Daily Horoscope: ಉದ್ಯೋಗದಲ್ಲಿ ಮೇಲಧಿಕಾರಿಗಳಿಗೆ ತೃಪ್ತಿ, ಅಪೇಕ್ಷಿತ ಆರ್ಥಿಕ ನೆರವು ಲಭ್ಯ
Modi ಹಸಿ ಸುಳ್ಳು: ಸಿಎಂ ಸಿದ್ದರಾಮಯ್ಯ ಕೆಂಡ; ಒಬಿಸಿ, ಎಸ್ಸಿ ಮೀಸಲಾತಿ ಹೇಳಿಕೆಗೆ ವಿರೋಧ
Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ
Lok Sabha Election; ಹಂತ 1: 14 ಕ್ಷೇತ್ರಗಳ ಬಹಿರಂಗ ಪ್ರಚಾರ ಅಂತ್ಯ: ನಾಳೆ ಮತದಾನ