ಆಪರೇಷನ್‌ ಕಮಲಕ್ಕೂ ಸಿದ್ಧತೆ


Team Udayavani, Sep 5, 2018, 6:00 AM IST

31.jpg

ಬೆಂಗಳೂರು: ಸಮ್ಮಿಶ್ರ ಸರ್ಕಾರದ ಪಾಲುದಾರ ಪಕ್ಷಗಳಾದ ಕಾಂಗ್ರೆಸ್‌-ಜೆಡಿಎಸ್‌ ದೂರ ಇಡಲು ಸ್ಥಳೀಯ ಮಟ್ಟದಲ್ಲಿ ಆಪರೇಷನ್‌ ಕಮಲ ಕಾರ್ಯಾಚರಣೆಗೆ ಬಿಜೆಪಿ ಮುಂದಾಗಿದೆ. 30 ಅತಂತ್ರ ಸ್ಥಳೀಯ ಸಂಸ್ಥೆಗಳಲ್ಲಿ 11 ಕಡೆಯಾದರೂ ಅಧಿಕಾರ ಹಿಡಿಯುವಂತಾಗಬೇಕು ಎಂಬುದು ಬಿಜೆಪಿ ಗುರಿಯಾಗಿದ್ದು, ಪಕ್ಷೇತರರ ಸೆಳೆಯಲು ಈಗಾಗಲೇ ಜಿಲ್ಲಾ ನಾಯ ಕರಿಗೆ ಸೂಚನೆ ನೀಡಲಾಗಿದೆ. ಶ್ರೀರಾಮುಲು, ಕಟ್ಟಾ ಸುಬ್ರಹ್ಮಣ್ಯ ನಾಯ್ಡು, ಬಸವರಾಜ ಬೊಮ್ಮಾಯಿ, ಮುರುಗೇಶ್‌ ನಿರಾಣಿ, ಉಮೇಶ್‌ ಕತ್ತಿ ಅವರಿಗೆ ಇದರ ಉಸ್ತುವಾರಿ ನೀಡಲಾಗಿದೆ. ಚಾಮರಾಜನಗರ, ಚಿತ್ರದುರ್ಗ ನಗರಸಭೆ, ಮೂಡಲಗಿ, ಕಾರ್ಕಳ ಪುರಸಭೆ ಹಾಗೂ ಕೇರೂರು ಪಟ್ಟಣ ಪಂಚಾಯಿತಿಯಲ್ಲಿ ಅಧಿಕಾರ ಹಿಡಿಯಲು ಬಿಜೆಪಿಗೆ ಪಕ್ಷೇತರರ ಬೆಂಬಲ ಅಗತ್ಯವಾಗಿದ್ದು, ಸ್ಥಳೀಯ ಶಾಸಕರು, ಸಂಸದರ ಮತದಾನ ಹಾಕುವ ಅವಕಾಶ ಇರುವುದರಿಂದ ಪರಿಸ್ಥಿತಿ ನೋಡಿಕೊಂಡು ಆಪರೇಷನ್‌ ಕಮಲ ಕಾರ್ಯಾಚರಣೆಗೆ ಗ್ರೀನ್‌ ಸಿಗ್ನಲ್‌ ನೀಡಲಾಗಿದೆ ಎಂದು ಮೂಲಗಳು ತಿಳಿಸಿವೆ. 

ಜತೆಗೆ, ನಿಪ್ಪಾಣಿ ನಗರಸಭೆ, ಚಿಕ್ಕೋಡಿ ಪುರಸಭೆಯಲ್ಲೂ ಸ್ಥಳೀಯವಾಗಿ ಮಾಡಿಕೊಂಡಿದ್ದ ಸಂಯುಕ್ತ ಮೈತ್ರಿ ಕೂಟ ಹೆಚ್ಚು ಸ್ಥಾನ ಗಳಿಸಿದ್ದರೂ ಅದರಲ್ಲಿ ಬಿಜೆಪಿ ಬೆಂಬಲಿತರು ಹೆಚ್ಚಾಗಿರುವುದರಿಂದ ಅಲ್ಲಿ ಅಧಿಕಾರ ಹಿಡಿಯಬಹುದು ಎಂಬ ಲೆಕ್ಕಾಚಾರ ಹಾಕಲಾಗಿದೆ. ಹೀಗಾಗಿ, ಯಾವುದೇ ಕಾರಣಕ್ಕೂ ಕಾಂಗ್ರೆಸ್‌-ಜೆಡಿಎಸ್‌ ಕಡೆ ಪಕ್ಷೇತರರು ವಾಲದಂತೆ ನೋಡಿಕೊಳ್ಳಲು ಸೂಚನೆ ನೀಡಲಾಗಿದೆ. ಒಂದೊಮ್ಮೆ ಪಕ್ಷೇತರರ ಒಕ್ಕೂಟಕ್ಕೆ ಅಧಿಕಾರ ಹಿಡಿಯಲು ಕೆಲವೆಡೆ ಒಂದೆರಡು ಸ್ಥಾನ ಕಡಿಮೆ ಬಿದ್ದರೆ ಬಿಜೆಪಿ ಬಾಹ್ಯ ಬೆಂಬಲಕ್ಕೆ ನಿರ್ದೇಶನ ನೀಡಲಾಗಿದೆ ಎನ್ನಲಾಗುತ್ತಿದೆ.

ಇದೇ ರೀತಿ, ಸಂಕೇಶ್ವರ ಮತ್ತು ತೇರದಾಳ ಪುರಸಭೆಯಲ್ಲಿ ಬಿಜೆಪಿ ಅಧಿಕಾರ ಪಡೆಯಲು ಒಂದು ಸ್ಥಾನ ಮಾತ್ರ ಬೇಕು. ರಾಯಚೂರು ನಗರಸಭೆಯಲ್ಲಿ ಕಾಂಗ್ರೆಸ್‌-ಜೆಡಿಎಸ್‌ ಸೇರಿ 14 ಸ್ಥಾನ ಗಳಿಸಿದ್ದು ಬಿಜೆಪಿ 12 ಸ್ಥಾನ ಪಡೆದಿದೆ. ಪಕ್ಷೇತರರು 9 ಸ್ಥಾನಗಳಲ್ಲಿ ಗೆದ್ದಿದ್ದಾರೆ. ಮುದ್ದೇಬಿಹಾಳ ಪುರಸಭೆಯಲ್ಲಿ ಕಾಂಗ್ರೆಸ್‌ ಮತ್ತು ಬಿಜೆಪಿ ತಲಾ 8 ಸ್ಥಾನ ಗಳಿಸಿದ್ದು, ಪಕ್ಷೇತರರು 5 ಸ್ಥಾನಗಳಲ್ಲಿ ಗೆದ್ದಿದ್ದಾರೆ. ಕಾರವಾರ ನಗರಸಭೆಯಲ್ಲಿ ಕಾಂಗ್ರೆಸ್‌-ಜೆಡಿಎಸ್‌ ಸೇರಿ 15 ಸ್ಥಾನ ಗೆದ್ದಿವೆ. ಬಿಜೆಪಿ 11 ಸ್ಥಾನ ಗೆದ್ದಿದೆ. ಐವರು ಪಕ್ಷೇತರರು ಗೆಲುವು ಸಾಧಿಸಿದ್ದಾರೆ. ಇಲ್ಲೂ ಆಪರೇಷನ್‌ ಕಮಲ ಕಾರ್ಯಾಚರಣೆ ಆಗುವ ಸಾಧ್ಯತೆಯಿದೆ. ಅಧ್ಯಕ್ಷ-ಉಪಾಧ್ಯಕ್ಷ ಮೀಸಲಾತಿ ನಿಗದಿ ಹಿನ್ನಲೆಯಲ್ಲಿ ಕೆಲವೆಡೆ ಕಾಂಗ್ರೆಸ್‌-ಜೆಡಿಎಸ್‌ ಮೈತ್ರಿಕೂಟ ಸೇರಿದರೂ ಸ್ಥಳೀಯ ರಾಜಕಾರಣದ ಹಿನ್ನೆಲೆಯಲಿಲ್ಲ ಅಧಿಕಾರ ಹಿಡಿಯುವುದು ಕಷ್ಟವಾಗಬಹುದು ಎಂಬ ಮಾಹಿತಿಯೂ ಇದ್ದು ಅಂತಹ ಕಡೆ ಬಿಜೆಪಿ ಪರಿಸ್ಥಿತಿ ನೋಡಿಕೊಂಡು ಕಾಂಗ್ರೆಸ್‌ ಮತ್ತು ಬಿಜೆಪಿಯಿಂದ ಹೊರಬಂದು ಪ್ರತ್ಯೇಕ ಬಣ ಮಾಡಿಕೊಂಡರೆ ಬಿಜೆಪಿ ಬೆಂಬಲ ಕೊಡುವ
ಬಗ್ಗೆಯೂ ರಹಸ್ಯ ಮಾತುಕತೆ ನಡೆಸಲಾಗಿದೆ ಎಂದು ಹೇಳಲಾಗಿದೆ.

ಬಿಎಸ್‌ವೈ ಸೂಚನೆ
ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್‌.ಯಡಿಯೂರಪ್ಪ ಅವರು ಈಗಾಗಲೇ ಜಿಲ್ಲಾಧ್ಯಕ್ಷರು ಹಾಗೂ ಬಿಜೆಪಿ ಶಾಸಕರಿಗೆ ಈ ಕುರಿತು ಸೂಚನೆ ನೀಡಿದ್ದು, ಬಿಜೆಪಿ ಶಾಸಕರು ಇಲ್ಲದ ಕಡೆ ಮಾಜಿ ಶಾಸಕರಿಗೆ ಹೊಣೆಗಾರಿಕೆ ನೀಡಲಾಗಿದೆ. ಬಿಜೆಪಿ ಸ್ವಂತ ಬಲದ ಮೇಲೆ 27 ಕಡೆ ಅಧಿಕಾರಕ್ಕೆ ಬಂದಿದ್ದು, ಇನ್ನೂ 11 ಕಡೆ ಅಧಿಕಾರ ಹಿಡಿಯುವ ಅವಕಾಶ ಇರುವುದರಿಂದ ಒಟ್ಟು 38 ಕಡೆ ಅಧಿಕಾರ ಹಿಡಿದಂತಾಗುತ್ತದೆ.

ಟಾಪ್ ನ್ಯೂಸ್

4-gadaga

Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್‌ಪಿ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

3-gadaga

Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

2-hunsur

Hunsur: ನಾಗರಹೊಳೆಯಲ್ಲಿ ದುಷ್ಕರ್ಮಿಗಳ ಗುಂಡೇಟಿಗೆ ಕಾಡುಕೋಣ ಬಲಿ

1-24-friday

Daily Horoscope: ಉದ್ಯೋಗದಲ್ಲಿ ಪ್ರತಿಭೆಗೆ ಗೌರವ, ದೇವತಾರಾಧನೆಯ ಮೂಲಕ ವಿಘ್ನ ನಿವಾರಣೆ

1-wewqwq

Loksabha Election; ದೇಶದಲ್ಲಿ ಹಂತ-1: ಮತ ಇಂದು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

4-gadaga

Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್‌ಪಿ

3-gadaga

Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ

Srirangapatna: ಐಸ್‌ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ

Srirangapatna: ಐಸ್‌ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ

Ls Polls: ಕಾಂಗ್ರೆಸ್‌ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್‌

Ls Polls: ಕಾಂಗ್ರೆಸ್‌ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್‌

Election Commission: ಪ್ರಿಯಾಂಕ್‌ ಖರ್ಗೆ, ಡಿಕೆಶಿ ವಿರುದ್ಧ ಚು.ಆಯೋಗಕ್ಕೆ ಬಿಜೆಪಿ ದೂರು

Election Commission: ಪ್ರಿಯಾಂಕ್‌ ಖರ್ಗೆ, ಡಿಕೆಶಿ ವಿರುದ್ಧ ಚು.ಆಯೋಗಕ್ಕೆ ಬಿಜೆಪಿ ದೂರು

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

4-gadaga

Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್‌ಪಿ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

3-gadaga

Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

2-hunsur

Hunsur: ನಾಗರಹೊಳೆಯಲ್ಲಿ ದುಷ್ಕರ್ಮಿಗಳ ಗುಂಡೇಟಿಗೆ ಕಾಡುಕೋಣ ಬಲಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.