ಆಪರೇಷನ್‌ ಕಮಲಕ್ಕೂ ಸಿದ್ಧತೆ


Team Udayavani, Sep 5, 2018, 6:00 AM IST

31.jpg

ಬೆಂಗಳೂರು: ಸಮ್ಮಿಶ್ರ ಸರ್ಕಾರದ ಪಾಲುದಾರ ಪಕ್ಷಗಳಾದ ಕಾಂಗ್ರೆಸ್‌-ಜೆಡಿಎಸ್‌ ದೂರ ಇಡಲು ಸ್ಥಳೀಯ ಮಟ್ಟದಲ್ಲಿ ಆಪರೇಷನ್‌ ಕಮಲ ಕಾರ್ಯಾಚರಣೆಗೆ ಬಿಜೆಪಿ ಮುಂದಾಗಿದೆ. 30 ಅತಂತ್ರ ಸ್ಥಳೀಯ ಸಂಸ್ಥೆಗಳಲ್ಲಿ 11 ಕಡೆಯಾದರೂ ಅಧಿಕಾರ ಹಿಡಿಯುವಂತಾಗಬೇಕು ಎಂಬುದು ಬಿಜೆಪಿ ಗುರಿಯಾಗಿದ್ದು, ಪಕ್ಷೇತರರ ಸೆಳೆಯಲು ಈಗಾಗಲೇ ಜಿಲ್ಲಾ ನಾಯ ಕರಿಗೆ ಸೂಚನೆ ನೀಡಲಾಗಿದೆ. ಶ್ರೀರಾಮುಲು, ಕಟ್ಟಾ ಸುಬ್ರಹ್ಮಣ್ಯ ನಾಯ್ಡು, ಬಸವರಾಜ ಬೊಮ್ಮಾಯಿ, ಮುರುಗೇಶ್‌ ನಿರಾಣಿ, ಉಮೇಶ್‌ ಕತ್ತಿ ಅವರಿಗೆ ಇದರ ಉಸ್ತುವಾರಿ ನೀಡಲಾಗಿದೆ. ಚಾಮರಾಜನಗರ, ಚಿತ್ರದುರ್ಗ ನಗರಸಭೆ, ಮೂಡಲಗಿ, ಕಾರ್ಕಳ ಪುರಸಭೆ ಹಾಗೂ ಕೇರೂರು ಪಟ್ಟಣ ಪಂಚಾಯಿತಿಯಲ್ಲಿ ಅಧಿಕಾರ ಹಿಡಿಯಲು ಬಿಜೆಪಿಗೆ ಪಕ್ಷೇತರರ ಬೆಂಬಲ ಅಗತ್ಯವಾಗಿದ್ದು, ಸ್ಥಳೀಯ ಶಾಸಕರು, ಸಂಸದರ ಮತದಾನ ಹಾಕುವ ಅವಕಾಶ ಇರುವುದರಿಂದ ಪರಿಸ್ಥಿತಿ ನೋಡಿಕೊಂಡು ಆಪರೇಷನ್‌ ಕಮಲ ಕಾರ್ಯಾಚರಣೆಗೆ ಗ್ರೀನ್‌ ಸಿಗ್ನಲ್‌ ನೀಡಲಾಗಿದೆ ಎಂದು ಮೂಲಗಳು ತಿಳಿಸಿವೆ. 

ಜತೆಗೆ, ನಿಪ್ಪಾಣಿ ನಗರಸಭೆ, ಚಿಕ್ಕೋಡಿ ಪುರಸಭೆಯಲ್ಲೂ ಸ್ಥಳೀಯವಾಗಿ ಮಾಡಿಕೊಂಡಿದ್ದ ಸಂಯುಕ್ತ ಮೈತ್ರಿ ಕೂಟ ಹೆಚ್ಚು ಸ್ಥಾನ ಗಳಿಸಿದ್ದರೂ ಅದರಲ್ಲಿ ಬಿಜೆಪಿ ಬೆಂಬಲಿತರು ಹೆಚ್ಚಾಗಿರುವುದರಿಂದ ಅಲ್ಲಿ ಅಧಿಕಾರ ಹಿಡಿಯಬಹುದು ಎಂಬ ಲೆಕ್ಕಾಚಾರ ಹಾಕಲಾಗಿದೆ. ಹೀಗಾಗಿ, ಯಾವುದೇ ಕಾರಣಕ್ಕೂ ಕಾಂಗ್ರೆಸ್‌-ಜೆಡಿಎಸ್‌ ಕಡೆ ಪಕ್ಷೇತರರು ವಾಲದಂತೆ ನೋಡಿಕೊಳ್ಳಲು ಸೂಚನೆ ನೀಡಲಾಗಿದೆ. ಒಂದೊಮ್ಮೆ ಪಕ್ಷೇತರರ ಒಕ್ಕೂಟಕ್ಕೆ ಅಧಿಕಾರ ಹಿಡಿಯಲು ಕೆಲವೆಡೆ ಒಂದೆರಡು ಸ್ಥಾನ ಕಡಿಮೆ ಬಿದ್ದರೆ ಬಿಜೆಪಿ ಬಾಹ್ಯ ಬೆಂಬಲಕ್ಕೆ ನಿರ್ದೇಶನ ನೀಡಲಾಗಿದೆ ಎನ್ನಲಾಗುತ್ತಿದೆ.

ಇದೇ ರೀತಿ, ಸಂಕೇಶ್ವರ ಮತ್ತು ತೇರದಾಳ ಪುರಸಭೆಯಲ್ಲಿ ಬಿಜೆಪಿ ಅಧಿಕಾರ ಪಡೆಯಲು ಒಂದು ಸ್ಥಾನ ಮಾತ್ರ ಬೇಕು. ರಾಯಚೂರು ನಗರಸಭೆಯಲ್ಲಿ ಕಾಂಗ್ರೆಸ್‌-ಜೆಡಿಎಸ್‌ ಸೇರಿ 14 ಸ್ಥಾನ ಗಳಿಸಿದ್ದು ಬಿಜೆಪಿ 12 ಸ್ಥಾನ ಪಡೆದಿದೆ. ಪಕ್ಷೇತರರು 9 ಸ್ಥಾನಗಳಲ್ಲಿ ಗೆದ್ದಿದ್ದಾರೆ. ಮುದ್ದೇಬಿಹಾಳ ಪುರಸಭೆಯಲ್ಲಿ ಕಾಂಗ್ರೆಸ್‌ ಮತ್ತು ಬಿಜೆಪಿ ತಲಾ 8 ಸ್ಥಾನ ಗಳಿಸಿದ್ದು, ಪಕ್ಷೇತರರು 5 ಸ್ಥಾನಗಳಲ್ಲಿ ಗೆದ್ದಿದ್ದಾರೆ. ಕಾರವಾರ ನಗರಸಭೆಯಲ್ಲಿ ಕಾಂಗ್ರೆಸ್‌-ಜೆಡಿಎಸ್‌ ಸೇರಿ 15 ಸ್ಥಾನ ಗೆದ್ದಿವೆ. ಬಿಜೆಪಿ 11 ಸ್ಥಾನ ಗೆದ್ದಿದೆ. ಐವರು ಪಕ್ಷೇತರರು ಗೆಲುವು ಸಾಧಿಸಿದ್ದಾರೆ. ಇಲ್ಲೂ ಆಪರೇಷನ್‌ ಕಮಲ ಕಾರ್ಯಾಚರಣೆ ಆಗುವ ಸಾಧ್ಯತೆಯಿದೆ. ಅಧ್ಯಕ್ಷ-ಉಪಾಧ್ಯಕ್ಷ ಮೀಸಲಾತಿ ನಿಗದಿ ಹಿನ್ನಲೆಯಲ್ಲಿ ಕೆಲವೆಡೆ ಕಾಂಗ್ರೆಸ್‌-ಜೆಡಿಎಸ್‌ ಮೈತ್ರಿಕೂಟ ಸೇರಿದರೂ ಸ್ಥಳೀಯ ರಾಜಕಾರಣದ ಹಿನ್ನೆಲೆಯಲಿಲ್ಲ ಅಧಿಕಾರ ಹಿಡಿಯುವುದು ಕಷ್ಟವಾಗಬಹುದು ಎಂಬ ಮಾಹಿತಿಯೂ ಇದ್ದು ಅಂತಹ ಕಡೆ ಬಿಜೆಪಿ ಪರಿಸ್ಥಿತಿ ನೋಡಿಕೊಂಡು ಕಾಂಗ್ರೆಸ್‌ ಮತ್ತು ಬಿಜೆಪಿಯಿಂದ ಹೊರಬಂದು ಪ್ರತ್ಯೇಕ ಬಣ ಮಾಡಿಕೊಂಡರೆ ಬಿಜೆಪಿ ಬೆಂಬಲ ಕೊಡುವ
ಬಗ್ಗೆಯೂ ರಹಸ್ಯ ಮಾತುಕತೆ ನಡೆಸಲಾಗಿದೆ ಎಂದು ಹೇಳಲಾಗಿದೆ.

ಬಿಎಸ್‌ವೈ ಸೂಚನೆ
ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್‌.ಯಡಿಯೂರಪ್ಪ ಅವರು ಈಗಾಗಲೇ ಜಿಲ್ಲಾಧ್ಯಕ್ಷರು ಹಾಗೂ ಬಿಜೆಪಿ ಶಾಸಕರಿಗೆ ಈ ಕುರಿತು ಸೂಚನೆ ನೀಡಿದ್ದು, ಬಿಜೆಪಿ ಶಾಸಕರು ಇಲ್ಲದ ಕಡೆ ಮಾಜಿ ಶಾಸಕರಿಗೆ ಹೊಣೆಗಾರಿಕೆ ನೀಡಲಾಗಿದೆ. ಬಿಜೆಪಿ ಸ್ವಂತ ಬಲದ ಮೇಲೆ 27 ಕಡೆ ಅಧಿಕಾರಕ್ಕೆ ಬಂದಿದ್ದು, ಇನ್ನೂ 11 ಕಡೆ ಅಧಿಕಾರ ಹಿಡಿಯುವ ಅವಕಾಶ ಇರುವುದರಿಂದ ಒಟ್ಟು 38 ಕಡೆ ಅಧಿಕಾರ ಹಿಡಿದಂತಾಗುತ್ತದೆ.

ಟಾಪ್ ನ್ಯೂಸ್

1-rerwer

IPL; ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ

MONEY (2)

Mysuru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89 ಲಕ್ಷ ರೂ. ವಶಕ್ಕೆ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

accident

Gangavathi: ಎರಡು ಪ್ರತ್ಯೇಕ ಅಪಘಾತದಲ್ಲಿ ಮೂರು ಜನ ಸಾವು

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

State government: ರಾಜ್ಯ ಸರಕಾರಕ್ಕೆ ಎನ್‌ಸಿಬಿ ನೋಟಿಸ್‌? 

State government: ರಾಜ್ಯ ಸರಕಾರಕ್ಕೆ ಎನ್‌ಸಿಬಿ ನೋಟಿಸ್‌? 

MONEY (2)

Mysuru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89 ಲಕ್ಷ ರೂ. ವಶಕ್ಕೆ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

12

B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್‌ವೈ ಗರಂ

Transfer order: ರಾಜ್ಯದ 388 ನ್ಯಾಯಾಧೀಶರ ವರ್ಗಾವಣೆ ಮಾಡಿ ಆದೇಶ

Transfer order: ರಾಜ್ಯದ 388 ನ್ಯಾಯಾಧೀಶರ ವರ್ಗಾವಣೆ ಮಾಡಿ ಆದೇಶ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-rerwer

IPL; ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ

State government: ರಾಜ್ಯ ಸರಕಾರಕ್ಕೆ ಎನ್‌ಸಿಬಿ ನೋಟಿಸ್‌? 

State government: ರಾಜ್ಯ ಸರಕಾರಕ್ಕೆ ಎನ್‌ಸಿಬಿ ನೋಟಿಸ್‌? 

MONEY (2)

Mysuru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89 ಲಕ್ಷ ರೂ. ವಶಕ್ಕೆ

28

Athletics: ಕಿರಿಯರ ಏಷ್ಯನ್‌ ಆ್ಯತ್ಲೆಟಿಕ್ಸ್‌  ಜಾವೆಲಿನ್‌ನಲ್ಲಿ ದೀಪಾಂಶುಗೆ ಬಂಗಾರ

Gukesh: ಚಾಂಪಿಯನ್‌ ಗುಕೇಶ್‌ಗೆ ಭವ್ಯ ಸ್ವಾಗತ

Gukesh: ಚಾಂಪಿಯನ್‌ ಗುಕೇಶ್‌ಗೆ ಭವ್ಯ ಸ್ವಾಗತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.