ನಮಗೆ ಮನ್ ಕೀ ಬಾತ್ ಬೇಕಿಲ್ಲ,ಕಾಮ್ ಕೀ ಬಾತ್ ಬೇಕಿದೆ: ಜಮೀರ್
Team Udayavani, Sep 6, 2018, 6:10 AM IST
ಹುಬ್ಬಳ್ಳಿ: “ದೇಶದಲ್ಲಿ ಪೆಟ್ರೋಲ್, ಡೀಸೆಲ್ ದರ ಗಗನಕ್ಕೇರುತ್ತಿದೆ. ಆದರೂ ಕೇಂದ್ರ ಸರಕಾರ ಅದನ್ನು ನಿಯಂತ್ರಿಸುವ ಗೋಜಿಗೆ ಹೋಗಿಲ್ಲ. ಪ್ರಧಾನಿ ಮೋದಿ ಅಚ್ಛೇ ದಿನ್ ಆಯೇಗಾ ಅಂದಿದ್ದರು. ಇದೇನಾ ಅವರ ಅಚ್ಛೇ ದಿನ್’ ಎಂದು ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಸಚಿವ ಜಮೀರ್ ಅಹ್ಮದ್ ಖಾನ್ ಪ್ರಶ್ನಿಸಿದರು.
ನಗರದಲ್ಲಿ ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿ, ಮೋದಿ ಮನ್ ಕೀ ಬಾತ್ ಅಂತಿದ್ದಾರೆ. ನಮಗೆ ಮನ್ ಕೀ ಬಾತ್ ಬೇಕಿಲ್ಲ. ಕಾಮ್ ಕೀ ಬಾತ್ ಬೇಕಿದೆ. ತೈಲ ಬೆಲೆ ಏರಿಸುತ್ತಿರುವ ಬಗ್ಗೆ ನಾವು ಹಿಂದಿನಿಂದಲೂ ಪ್ರತಿಭಟಿಸುತ್ತಿದ್ದೇವೆ.
ಕೇಂದ್ರ ಸರಕಾರ ಪೆಟ್ರೋಲ್, ಡೀಸೆಲ್ ಬೆಲೆ ಏರಿಸುತ್ತಿರುವ ಬಗ್ಗೆ ಜನರಿಗೆ ಅರ್ಥವಾಗಬೇಕು. ಇವರ ದುರಾಡಳಿತ ಜನರಿಗೆ ಗೊತ್ತಾಗಲಿ ಎಂದು ಸುಮ್ಮನಿದ್ದೇವೆ ಎಂದರು. ಬಿಜೆಪಿಯವರು ಮಾತೆತ್ತಿದರೆ ಸಮ್ಮಿಶ್ರ ಸರಕಾರ ಬೀಳುತ್ತೆ ಅಂತಿದ್ದಾರೆ. ಈ ಮೈತ್ರಿ ಸರಕಾರ ಬೀಳುವುದು ಕನಸಿನ ಮಾತು. ಸರಕಾರ ಯಶಸ್ವಿಯಾಗಿ ಐದು ವರ್ಷ ಪೂರ್ಣ ಆಡಳಿತ ನಡೆಸಲಿದೆ ಅದರಲ್ಲಿ ಯಾವುದೇ ಸಂಶಯವಿಲ್ಲ. ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಬಜೆಟ್ನಲ್ಲಿ ಮಂಡಿಸಿದ ಎಲ್ಲಾ ಯೋಜನೆಗಳನ್ನು ಸಮ್ಮಿಶ್ರ ಸರಕಾರ ಮುಂದುವರಿಸುತ್ತದೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದ್ರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ
Hubballi: ಮೂವರು ನಕಲಿ ಸಿಐಡಿ ಅಧಿಕಾರಿಗಳ ಬಂಧನ… ಮೊಬೈಲ್, ಬೈಕ್ ವಶ
ತಾಳಿಭಾಗ್ಯ ಯೋಜನೆ ತಂದ ‘ಕಾಂಗ್ರೆಸ್’ ಕಿತ್ತುಕೊಳ್ಳುವ ಕೆಲಸ ಎಂದೂ ಮಾಡಲ್ಲ: H.K. Patil
ಮಗಳ ಪ್ರಕರಣ ದಿಕ್ಕು ತಪ್ಪುತ್ತಿದೆ ಎಂದಿದ್ದ ನೇಹಾಳ ತಂದೆ ರಾಜ್ಯ ಸರಕಾರದ ಕ್ಷಮೆ ಕೇಳಿದ್ದೇಕೆ?
ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ
MUST WATCH
ಹೊಸ ಸೇರ್ಪಡೆ
ಬಿಜೆಪಿ ದಲಿತರ ಪರ ಮೊಸಳೆ ಕಣ್ಣೀರು: ಬಿ.ಕೆ. ಹರಿಪ್ರಸಾದ
Haveri Lok Sabha constituency: “ಮೇ 7 ರಂದು ತಪ್ಪದೇ ಮತದಾನ ಮಾಡಿ’
Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದ್ರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ
ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸುವಂತಹ ನೀಚತನಕ್ಕೆ ಬಿಜೆಪಿ ಇಳಿದಿದೆ-ಚನ್ನರಾಜ ಹಟ್ಟಿಹೊಳಿ
Belagavi Lok sabha: ಧರ್ಮಯುದ್ಧಕ್ಕಿಂತ ಮೊದಲೇ ದಿಂಗಾಲೇಶ್ವರ ಶ್ರೀ ಶಸ್ತ್ರತ್ಯಾಗ!