ಪ್ರತಿ ಹೋಬಳಿಯಲ್ಲಿ ಇಂಟರ್ನ್ಯಾಷನಲ್ ಶಾಲೆ : ಖಾಶೆಂಪುರ
Team Udayavani, Sep 6, 2018, 6:00 AM IST
ಬೀದರ: ದೆಹಲಿ ಸರ್ಕಾರದ ಮಾದರಿಯಂತೆ ರಾಜ್ಯದ ಪ್ರತಿಯೊಂದು ಹೋಬಳಿ ವಲಯದಲ್ಲಿ ಇಂಟರ್ ನ್ಯಾಷನಲ್ ಶಾಲೆ ಸ್ಥಾಪಿಸುವ ಮೂಲಕ ಶಿಕ್ಷಣಕ್ಕೆ ಹೆಚ್ಚಿನ ಮಹತ್ವ ನೀಡುವ ಕುರಿತು ಮುಖ್ಯಮಂತ್ರಿಯವರ ಜತೆ ಚರ್ಚೆ ನಡೆಸಿರುವುದಾಗಿ ಸಹಕಾರ ಸಚಿವ ಬಂಡೆಪ್ಪ ಖಾಶೆಂಪುರ ಹೇಳಿದರು.
ನಗರದಲ್ಲಿ ಬುಧವಾರ ನಡೆದ ಶಿಕ್ಷಕರ ದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿ, ದೆಹಲಿಯಲ್ಲಿ ಕೇಜ್ರಿವಾಲ್ ನೇತೃತ್ವದ ಸರ್ಕಾರ ಶಿಕ್ಷಣಕ್ಕೆ ಹೆಚ್ಚಿನ ಮಹತ್ವ ನೀಡಿ ಅಲ್ಲಿನ 560 ಶಾಲೆಗಳನ್ನು ಇಂಟರ್ ನ್ಯಾಷನಲ್ ದರ್ಜೆಗೇರಿಸಿದೆ. ಅಲ್ಲದೆ, ಆ ಶಾಲೆಗಳ ಶಿಕ್ಷಕರಿಗೆ ವಿದೇಶದಲ್ಲಿ ವಿಶೇಷ ತರಬೇತಿ ಕೊಡಿಸಲಾಗುತ್ತಿದೆ. ಅದೇ ಮಾದರಿಯಲ್ಲಿ ರಾಜ್ಯದ ಶಾಲೆಗಳನ್ನು ಮೇಲ್ದರ್ಜೆಗೇರಿಸಿ ಇಂಟರ್ ನ್ಯಾಷನಲ್ ಶಾಲೆಗಳನ್ನಾಗಿಸುವ ಚಿಂತನೆ ನಡೆಯುತ್ತಿದೆ. ಸದ್ಯ ಬೀದರ ಜಿಲ್ಲೆಯ ಹೋಬಳಿ ಮಟ್ಟದ ಶಾಲೆಗಳನ್ನು ಮೇಲ್ದರ್ಜೆಗೇರಿಸುವ ನಿಟ್ಟಿನಲ್ಲಿ ಎಚ್ಕೆಆರ್ಡಿಬಿ ಯೋಜನೆ ಅಡಿ ಅನುದಾನ ಇದ್ದು, ಈ ಕುರಿತು ನಾವು ನೋಡಿಕೊಳ್ಳುತ್ತೇವೆ. ಶಿಕ್ಷಕರು ಪ್ರಾಮಾಣಿಕವಾಗಿ ಕೆಲಸ ಮಾಡಿ ಗುಣಮಟ್ಟದ ಶಿಕ್ಷಣ ನೀಡುವುದರ ಜತೆಗೆ ಉತ್ತಮ ಫಲಿತಾಂಶದ ಕಡೆಗೆ ಹೆಚ್ಚಿನ ಕಾಳಜಿ ವಹಿಸಬೇಕು ಎಂದು ಸಲಹೆ ನೀಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್
Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್
LS Polls: ರಾಜ್ಯದಲ್ಲಿ ಕಾಂಗ್ರೆಸ್ ವಿರೋಧಿ ಅಲೆ: ರಾಘವೇಂದ್ರ
Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…
LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…
MUST WATCH
ಹೊಸ ಸೇರ್ಪಡೆ
ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!
Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್
ಹೆಸ್ಕತ್ತೂರು ಕಟ್ಟಿನಬುಡ: ಕೃಷಿಗೆ ಆಸರೆಯಾಗದ ವಾರಾಹಿ ಕಾಲುವೆ ನೀರು!
Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ