ಅಂ.ರಾಷ್ಟ್ರೀಯ ಗುಣಮಟ್ಟದ ವಿವಿ ಸ್ಥಾಪನೆಗೆ ಚಿಂತನೆ


Team Udayavani, Sep 6, 2018, 6:00 AM IST

180905kpn85.jpg

ಬೆಂಗಳೂರು : ಅಂತಾರಾಷ್ಟ್ರೀಯ ಗುಣಮಟ್ಟದ ವಿಶ್ವವಿದ್ಯಾಲಯವೊಂದನ್ನು ರಾಜ್ಯದಲ್ಲಿ ನಿರ್ಮಿಸುವ ಸಂಬಂಧ ವಿಶ್ವವಿದ್ಯಾಲಯಗಳ ಕುಲಪತಿಗಳಿಗೆ ನೀಲನಕ್ಷೆ ಸಿದ್ಧಪಡಿಸಲು ಸಲಹೆ ನೀಡಿದ್ದೇನೆ ಎಂದು ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಹೇಳಿದ್ದಾರೆ.

ಸೆಂಟ್ರಲ್‌ ಕಾಲೇಜು ಆವರಣದಲ್ಲಿ ಬುಧವಾರ ಬೆಂಗಳೂರು ಕೇಂದ್ರ ವಿಶ್ವವಿದ್ಯಾಲಯದ ಸ್ನಾತಕೋತ್ತರ ಕಲಾ ವಿಭಾಗ ಉದ್ಘಾಟಿಸಿ ಮಾತನಾಡಿದ ಅವರು, ಇಸ್ರೇಲ್‌ನಲ್ಲಿ 17 ಎಕರೆ ಪ್ರದೇಶದಲ್ಲಿರುವ ವಿಶ್ವವಿದ್ಯಾಲಯವೊಂದರಲ್ಲಿ ಸಂಶೋಧನೆ ಸಹಿತವಾಗಿ ಎಲ್ಲ ವ್ಯವಸ್ಥೆಯೂ ಅಚ್ಚುಕಟ್ಟಾಗಿದೆ ಮತ್ತು ಶಿಕ್ಷಣ ಗುಣಮಟ್ಟವೂ ಉತ್ಕೃಷ್ಟವಾಗಿದೆ. ರಾಜ್ಯದಲ್ಲೂ ಒಂದು ಅಂತಾರಾಷ್ಟ್ರೀಯ ಗುಣಮಟ್ಟದ ವಿಶ್ವವಿದ್ಯಾಲಯದ ಸ್ಥಾಪಿಸಬೇಕೆಂಬ ಯೋಚನೆ ಇದೆ. ಇದಕ್ಕಾಗಿ ಕೆಲವು ವಿಶ್ವವಿದ್ಯಾಲಯದ ಕುಲಪತಿಗಳಿಂದ ನೀಲನಕ್ಷೆ ಸಿದ್ಧಪಡಿಸಲು ಸಲಹೆ ನೀಡಿದ್ದೇನೆ ಎಂದು ತಿಳಿಸಿದರು.

ಬೆಂಗಳೂರು ಕೇಂದ್ರ ವಿವಿಗೆ ಬೇಕಾದ ಎಲ್ಲ ರೀತಿಯ ಆರ್ಥಿಕ ನೆರವು ನೀಡಲು ರಾಜ್ಯ ಸರ್ಕಾರ ಬದ್ಧವಾಗಿದೆ. 43 ಎಕರೆ ಪ್ರದೇಶದಲ್ಲಿ ನಗರ ಕೇಂದ್ರೀತ ವಿಶ್ವವಿದ್ಯಾಲಯ ಮಾಡಬೇಕೆಂಬ ಕುಲಪತಿಗಳ ಆಶಯ ಈಡೇರಿಸಲು ಸರ್ಕಾರ ಅಗತ್ಯ ನೆರವು ಒದಗಿಸಲಿದೆ ಎಂದು ಹೇಳಿದರು.

ಬೆಂಗಳೂರು ಕೇಂದ್ರ ವಿವಿಯನ್ನು ಜಾಗತಿಕ ಮಟ್ಟಕ್ಕೆ ಏರಿಸಲು 600 ಕೋಟಿ ರೂ.ಗಳ ಅನುದಾನ ಕೋರಿದ್ದಾರೆ. ರಾಜ್ಯ ಸರ್ಕಾರದಲ್ಲಿ ಹಣದ ಕೊರತೆ ಇಲ್ಲ. ಆದರೆ ಕೆಲಸ ನಿರ್ವಹಣೆ ಮಾಡುವವರ ಕಲ್ಪನೆ ಮತ್ತು ಅನುಷ್ಠಾನದಲ್ಲಿ ಬದ್ಧತೆ ಇರಬೇಕಾಗುತ್ತದೆ. 12 ವರ್ಷಗಳ ಹಿಂದೆ ಮುಖ್ಯಮಂತ್ರಿಯಾಗಿದ್ದಾಗ 181 ಪ್ರಥಮ ದರ್ಜೆ ಕಾಲೇಜು ಸ್ಥಾಪಿಸಿದ್ದೇವು. ಸರ್ಕಾರಿ ಕಾಲೇಜುಗಳಲ್ಲಿ ವಿಜ್ಞಾನ ಮತ್ತು ಕಂಪ್ಯೂಟರ್‌ ಸೈನ್ಸ್‌ ವಿಭಾಗಕ್ಕೆ ಆದ್ಯತೆ ನೀಡಿ, ಉಪನ್ಯಾಸಕರ ನೇಮಕವೂ ಮಾಡಿದ್ದೇವು ಎಂದು ವಿವರಿಸಿದರು.

ಶಿಕ್ಷಣಕ್ಕೆ ಆದ್ಯತೆ:
ಶಿಕ್ಷಣಕ್ಕೆ ಹೆಚ್ಚಿನ ಆದ್ಯತೆ ನೀಡುತ್ತಿದ್ದೇವೆ. ರಾಜ್ಯದ ಬಡ ಕುಟುಂಬದ ಪ್ರತಿಭಾವಂತ ವಿದ್ಯಾರ್ಥಿಗಳು ಶೇ.90-95ರಷ್ಟು ಅಂಕ ಪಡೆದು ಉನ್ನತ ಶಿಕ್ಷಣ ಪಡೆಯಲು ಸಾಧ್ಯವಾಗುತ್ತಿಲ್ಲ. ಬಡ ಕುಟುಂಬದ ವಿದ್ಯಾರ್ಥಿಗಳಿಗೆ ಆರ್ಥಿಕ ಬಲ ತುಂಬಲು ಕಾರ್ಯಕ್ರಮವೊಂದನ್ನು ಸರ್ಕಾರದಿಂದಲೇ ರೂಪಿಸುವ ಬಗ್ಗೆಯೂ ಯೋಚನೆ ಮಾಡುತ್ತಿದ್ದೇವೆ ಎಂದರು.

ಉನ್ನತ ಶಿಕ್ಷಣ ಸಚಿವ ಜಿ.ಟಿ.ದೇವೇಗೌಡ, ಶಾಸಕ ಆರ್‌.ರೋಷನ್‌ ಬೇಗ್‌, ಬೆಂಗಳೂರು ಕೇಂದ್ರ ವಿವಿ ಕುಲಪತಿ ಪ್ರೊ.ಎಸ್‌.ಜಾಫೆಟ್‌, ಬೆಂಗಳೂರು ವಿವಿ ಕುಲಪತಿ ಪ್ರೊ.ಕೆ.ಆರ್‌.ವೇಣುಗೋಪಾಲ್‌, ಉನ್ನತ ಶಿಕ್ಷಣ ಇಲಾಖೆ ಪ್ರಧಾನ ಕಾರ್ಯದರ್ಶಿ ಡಾ.ಎನ್‌.ನಾಗಾಂಬಿಕಾ ದೇವಿ ಮೊದಲಾದವರು ಇದ್ದರು.

ಇತ್ತೀಚಿನ ವರ್ಷಗಳಲ್ಲಿ ವಿಶ್ವವಿದ್ಯಾಲಯದ ಕುಲಪತಿಗಳ ನೇಮಕಾತಿಯಲ್ಲಿ ರಾಜಕಾರಣ ಹೆಚ್ಚಾಗುತ್ತಿದೆ. ಈ ಪರಿಸ್ಥಿತಿ ಎಲ್ಲರಿಗೂ ತಿಳಿದಿದೆ. ಕುಲಪತಿ ನೇಮಕದಲ್ಲಿ ಗುಣಮಟ್ಟ ಇರಬೇಕು. ಸಿಂಡಿಕೇಟ್‌ ಹಾಗೂ ಸೆನೆಟ್‌ ನೇಮಕಾತಿಯಲ್ಲಿ ಸರ್ಕಾರದ ಹಸ್ತಕ್ಷೇಪ ಇರಬಾರದು ಹಾಗೂ ರಾಜಕಾರಣವೂ ನಡೆಯಬಾರದು. ಈಗ ಇರುವ ಪದ್ಧತಿ ಬದಲಿಸಬೇಕು. ಶಿಕ್ಷಣ ತಜ್ಞರ ಸಮಿತಿ ಮಾಡಿ ಆ ಮೂಲಕ ಕುಲಪತಿಗಳ ನೇಮಕಾತಿ ನಡೆಯುವಂತಾಗಬೇಕು. ಸಮ್ಮಿಶ್ರ ಸರ್ಕಾರದ ಇತಿ ಮಿತಿಯೊಳಗೆ ಎಷ್ಟು ಸಾಧ್ಯವೋ ಅಷ್ಟು ಬದಲಾವಣೆ ತರುತ್ತೇವೆ.
– ಎಚ್‌.ಡಿ. ಕುಮಾರಸ್ವಾಮಿ

ಟಾಪ್ ನ್ಯೂಸ್

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-weweqwe

Globant; ಮನೆಯಿಂದಲೇ 30,000 ಮಂದಿ ಕೆಲಸ

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

Siddaramaiah ಸರಕಾರದಲ್ಲಿ ಹಿಂದೂಗಳ ರಕ್ತಕ್ಕೆ ಬೆಲೆ ಇಲ್ಲ: ಅಶೋಕ್‌

Siddaramaiah ಸರಕಾರದಲ್ಲಿ ಹಿಂದೂಗಳ ರಕ್ತಕ್ಕೆ ಬೆಲೆ ಇಲ್ಲ: ಅಶೋಕ್‌

ಚೊಂಬಿನ ಮೂಲಕ ಮೋದಿ ಸ್ವಾಗತಕ್ಕೆ ಕಾಂಗ್ರೆಸ್‌ ಸಿದ್ಧತೆ

ಚೊಂಬಿನ ಮೂಲಕ ಮೋದಿ ಸ್ವಾಗತಕ್ಕೆ ಕಾಂಗ್ರೆಸ್‌ ಸಿದ್ಧತೆ

Congresss ಚೊಂಬು ಜಾಹೀರಾತು ವಿರುದ್ಧ ಬಿಜೆಪಿ ಚಾರ್ಜ್‌ಶೀಟ್‌

Congresss ಚೊಂಬು ಜಾಹೀರಾತು ವಿರುದ್ಧ ಬಿಜೆಪಿ ಚಾರ್ಜ್‌ಶೀಟ್‌

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

1-wqeqweqweeqweqe

Brahmos; ಫಿಲಿಪ್ಪೀನ್ಸ್‌ಗೆ ಬ್ರಹ್ಮೋಸ್‌: ಭಾರತದ ಮೊದಲ ರಫ್ತು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.