ಸಾಲಬಾಧೆ: ಇಬ್ಬರು ರೈತರ ಆತ್ಮಹತ್ಯೆ
Team Udayavani, Sep 6, 2018, 6:25 AM IST
ಕಡೂರು/ಯಲಬುರ್ಗಾ: ಪ್ರತ್ಯೇಕ ಪ್ರಕರಣದಲ್ಲಿ ಸಾಲಬಾಧೆಯಿಂದ ಬೇಸತ್ತು ಇಬ್ಬರು ರೈತರು ಆತ್ಮಹತ್ಯೆಗೆ ಶರಣಾಗಿದ್ದಾರೆ.
ಕಡೂರು ತಾಲೂಕಿನ ಸಖರಾಯಪಟ್ಟಣ ಸಮೀಪದ ಬ್ಯಾಲದಾಳು ತಾಂಡ್ಯದಲ್ಲಿ ಗೋವಿಂದಸ್ವಾಮಿ (70) ಎಂಬ ರೈತ ನೇಣು ಬಿಗಿದುಕೊಂಡು ಸಾವನ್ನಪ್ಪಿದ್ದಾರೆ. ಇವರಿಗೆ ನಾಲ್ಕು ಎಕರೆ ಜಮೀನಿದ್ದು, ಕೃಷಿ ಕಾರ್ಯಕ್ಕಾಗಿ ಡಿಸಿಸಿ ಬ್ಯಾಂಕಿನಲ್ಲಿ 1.60 ಲಕ್ಷ ರೂ. ಸಾಲ ಮಾಡಿದ್ದರು. ಅಲ್ಲದೆ 6 ತಿಂಗಳ ಹಿಂದೆ ಬೋರ್ ವೆಲ್ ಕೊರೆಸಲು ಪುನಃ ಒಂದೂವರೆ ಲಕ್ಷ ರೂ.
ಸಾಲ ಮಾಡಿದ್ದು ಒಟ್ಟು 3.10 ಲಕ್ಷ ರೂ. ಸಾಲ ಮಾಡಿದ್ದರು ಎನ್ನಲಾಗಿದೆ.
ಇನ್ನು, ಯಲಬುರ್ಗಾ ತಾಲೂಕಿನ ಕುದ್ರಿಕೋಟಗಿ ಗ್ರಾಮದಲ್ಲಿ ರೈತ ನರಸಪ್ಪ ಹನುಮಪ್ಪ ಹೂಸೂರ(50) ವಿಷ ಸೇವಿಸಿ
ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಯಲಬುರ್ಗಾ ಪಟ್ಟಣದ ಪ್ರಗತಿ ಗ್ರಾಮೀಣ ಬ್ಯಾಂಕ್ನಲ್ಲಿ ಹಲವು ವರ್ಷಗಳ ಹಿಂದೆ 50 ಸಾವಿರ ರೂ. ಬೆಳೆಸಾಲ ಪಡೆದಿದ್ದು, ಇದೀಗ ಅದು ಬಡ್ಡಿ ಸೇರಿ 90 ಸಾವಿರ ರೂ. ಆಗಿದೆ. ಅಷ್ಟೇ ಅಲ್ಲದೇ ಹೊಲದಲ್ಲಿ ಬಿತ್ತನೆ ಮಾಡಿದ್ದ ಬೆಳೆಗಳು ಒಣಗಿ ಹೋಗಿರುವುದರಿಂದ ಮನನೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vijaypura:ರಾಹುಲ್ ಗಾಂಧಿ ನಿರ್ಗಮಿಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್
Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್
LS Polls: ರಾಜ್ಯದಲ್ಲಿ ಕಾಂಗ್ರೆಸ್ ವಿರೋಧಿ ಅಲೆ: ರಾಘವೇಂದ್ರ
Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…
MUST WATCH
ಹೊಸ ಸೇರ್ಪಡೆ
Davanagere; ಪ್ರಧಾನಿ ಮೋದಿ ರ್ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ
2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್ಯಾಂಕ್ ಪಡೆದ ತೀರ್ಥಹಳ್ಳಿಯ ಸುಚಿಂತ್
Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ
Vijaypura:ರಾಹುಲ್ ಗಾಂಧಿ ನಿರ್ಗಮಿಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ
ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್.ವರಲಕ್ಷ್ಮೀ