ಚುನಾವಣೆಯಲ್ಲಿ ಮತ್ತೆ ಸ್ಪರ್ಧಿಸಲ್ಲ: ಆನಂದ್ಸಿಂಗ್
Team Udayavani, Sep 6, 2018, 6:00 AM IST
ಬಳ್ಳಾರಿ: ವಿಧಾನಸಭಾ ಚುನಾವಣೆ ನಡೆದು ಇನ್ನೂ ನಾಲ್ಕೂವರೆ ವರ್ಷ ಅಧಿಕಾರ ಇರುವಾಗಲೇ ಹೊಸಪೇಟೆ ಶಾಸಕ ಬಿ.ಎಸ್. ಆನಂದ್ ಸಿಂಗ್ ತಾವು ಮುಂದಿನ ಚುನಾವಣೆಯಲ್ಲಿ ಸ್ಪರ್ಧಿಸೋದಿಲ್ಲ ಎಂದು ಘೋಷಿಸಿದ್ದಾರೆ. ಹೊಸಪೇಟೆ ನಗರದ ಸಹಕಾರಿ ಕಲ್ಯಾಣ ಮಂಟಪದಲ್ಲಿ ನಗರಸಭೆ ಅಧ್ಯಕ್ಷ ಗುಜ್ಜಲನಿಂಗಪ್ಪ ನೇತೃತ್ವದಲ್ಲಿ ನೂತನ ಶಾಸಕರಿಗೆ ಅಭಿನಂದನಾ ಕಾರ್ಯಕ್ರಮದಲ್ಲಿ ಅಭಿನಂದನೆ ಸ್ವೀಕರಿಸಿದ ಅವರು ತಮ್ಮ ನಿರ್ಧಾರ ಪ್ರಕಟಿಸಿದರು.
ಕಳೆದ 2018ರ ವಿಧಾನಸಭೆ ಚುನಾವಣೆಯಲ್ಲಿ ಆಯ್ಕೆಯಾಗಿರುವ ನಾನು ಮುಂದಿನ ನಾಲ್ಕೂವರೆ ವರ್ಷಗಳ ಕಾಲ ಮಾತ್ರ ಶಾಸಕನಾಗಿ ಮುಂದುವರಿಯಲಿದ್ದು, ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧಿಸದೆ, ಸಕ್ರಿಯ ರಾಜಕಾರಣಿಯಾಗಿ ಮುಂದುವರಿಯುತ್ತೇನೆ. ಯಾರೂ ಅನ್ಯಥಾ ಭಾವಿಸಬಾರದು. ನಾನು ಮೂರನೇ ಬಾರಿಗೆ ಶಾಸಕನಾಗಿ ಆಯ್ಕೆಯಾಗಿ ಹ್ಯಾಟ್ರಿಕ್ ಸಾಧಿಸಬೇಕೆಂದು ಪಣತೊಟ್ಟಿದ್ದೆ. ಅದನ್ನು ಮತದಾರರು ಈಡೇರಿಸಿದ್ದಾರೆ. ಅದಕ್ಕೆ ನಾನು ಚಿರಋಣಿಯಾಗಿದ್ದೇನೆ ಎಂದು ಕೃತಜ್ಞತೆ ಸಲ್ಲಿಸಿದರು. ಆದರೆ ಮುಂಬರುವ ಚುನಾವಣೆಯಲ್ಲಿ ಸ್ಪರ್ಧಿಸದಂತೆ ಇರಲು ನಿರ್ಧರಿಸಿದ್ದೇನೆ. ಹೊಸಬರಿಗೆ ಅವಕಾಶ ಕಲ್ಪಿಸುವ ಸಲುವಾಗಿ ಈ ನಿರ್ಣಯ ಕೈಗೊಂಡಿದ್ದೇನೆ. ಇದರಲ್ಲಿ ಯಾವುದೇ ಸ್ವಹಿತಾಸಕ್ತಿ ಇಲ್ಲ. ಹೊಸ ಮುಖಗಳನ್ನು ರಾಜಕಾರಣಕ್ಕೆ ಪರಿಚಯಿಸುವ ತವಕ ನನ್ನಲ್ಲಿದೆ. ಹೀಗಾಗಿ ಈ ನಿರ್ಧಾರ ತೆಗೆದುಕೊಂಡಿರುವೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್
Vijaypura:ರಾಹುಲ್ ಗಾಂಧಿ ನಿರ್ಗಮಿಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್
Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್
LS Polls: ರಾಜ್ಯದಲ್ಲಿ ಕಾಂಗ್ರೆಸ್ ವಿರೋಧಿ ಅಲೆ: ರಾಘವೇಂದ್ರ
MUST WATCH
ಹೊಸ ಸೇರ್ಪಡೆ
Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್
Davanagere; ಪ್ರಧಾನಿ ಮೋದಿ ರ್ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ
2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್ಯಾಂಕ್ ಪಡೆದ ತೀರ್ಥಹಳ್ಳಿಯ ಸುಚಿಂತ್
Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ
Vijaypura:ರಾಹುಲ್ ಗಾಂಧಿ ನಿರ್ಗಮಿಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ