ಅಧಿಕಾರಿಗಳು, ಸಚಿವರ ವಿದೇಶ ಪ್ರವಾಸಕ್ಕೆ ಅಂಕುಶ
Team Udayavani, Sep 6, 2018, 6:00 AM IST
ಬೆಂಗಳೂರು: ಅಧಿಕಾರಿಗಳು ಮತ್ತು ಸಚಿವರ ವಿದೇಶ ಪ್ರವಾಸಕ್ಕೆ ರಾಜ್ಯ ಸರ್ಕಾರ ಲಗಾಮು ಹಾಕಿದ್ದು, ಕೆಲವೊಂದು ನಿಯಮಾವಳಿ ರೂಪಿಸಿದೆ.
ವಿದೇಶ ಪ್ರವಾಸಕ್ಕೆ ಅನುಮತಿ ಪಡೆಯಲು ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆ ಮೂಲಕ ಮುಖ್ಯಮಂತ್ರಿಯವರ ಅನುಮತಿ ಪಡೆಯುವ ಬದಲು ಕೆಲವು ಅಧಿಕಾರಿಗಳು ನೇರವಾಗಿ ಮುಖ್ಯಮಂತ್ರಿಯವರಿಗೆ ಪ್ರಸ್ತಾವನೆ ಸಲ್ಲಿಸಿ ಅನುಮತಿ ಪಡೆಯುತ್ತಿರುವ ಬಗ್ಗೆ ಪ್ರಸ್ತಾಪಿಸಿ ಇದನ್ನು ಗಂಭೀರವಾಗಿ ಪರಿಗಣಿಸಲಾಗುವುದು ಎಂದು ಎಚ್ಚರಿಕೆ ಸಹ ನೀಡಲಾಗಿದೆ.
ಈ ಕುರಿತು ಸುತ್ತೋಲೆ ಹೊರಡಿಸಿರುವ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಯ ಸರ್ಕಾರದ ಕಾರ್ಯದರ್ಶಿ ಅಂಜುಂ ಫರ್ವೇಜ್, ನಿಯಮಾವಳಿಗಳ ಪ್ರಕಾರ ಮನವಿ ಸಲ್ಲಿಸದೆ ನೇರವಾಗಿ ವಿದೇಶ ಪ್ರವಾಸ ಪ್ರಸ್ತಾವನೆ ಮಖ್ಯಮಂತ್ರಿಯವರ ಅನುಮೋದನೆಗೆ ಸಲ್ಲಿಸಿದರೆ ಅಂತಹ ಪ್ರಸ್ತಾವನೆ ಪರಿಗಣಿಸುವುದಿಲ್ಲ ಎಂದು ತಿಳಿಸಿದ್ದಾರೆ.
ವಿದೇಶ ಪ್ರವಾಸ ಸಂದರ್ಭದಲ್ಲಿ ಸಾರಿಗೆ, ವಸತಿ ವೆಚ್ಚ ಮತ್ತು ಇತರೆ ವಿದೇಶಿ ಆತಿಥ್ಯ ಸ್ವೀಕರಿಸುವ ಪ್ರಸ್ತಾವನೆ ಇದ್ದರೆ, ಆತಿಥ್ಯ ಪಡೆದುಕೊಳ್ಳಲು ಅನುಮತಿಗಾಗಿ ಕೇಂದ್ರ ಸರ್ಕಾರದ ಗೃಹ ಸಚಿವಾಲಯದ ಜತೆ ಸಮಾಲೋಚನೆ ನಡೆಸುವಂತೆಯೂ ಸೂಚಿಸಲಾಗಿದೆ.
ಸಂಬಂಧಿಸಿದ ವಿದೇಶ ಪ್ರವಾಸದ ಉದ್ದೇಶ ಹಾಗೂ ಆ ಪ್ರವಾಸದ ಪರಿಣಾಮವಾಗಿ ಸರ್ಕಾರಕ್ಕೆ, ಅಧಿಕಾರಿಗೆ ಆಗುವ ಅನುಕೂಲ, ಉದ್ದೇಶಿತ ಪ್ರವಾಸದ ಅನುಭವ ಬಳಕೆಯಿಂದ ರಾಜ್ಯ ಸರ್ಕಾರಕ್ಕೆ ಆಗುವ ಪ್ರತಿಫಲದ ವಿವರಣೆ ಒದಗಿಸಬೇಕು ಎಂದು ತಿಳಿಸಲಾಗಿದೆ.
ಸಚಿವರ ನೇತೃತ್ವದ ಅಧಿಕಾರಿಗಳ ನಿಯೋಗ ಹಾಗೂ ಅಧಿಕಾರಿಗಳ ಅಧಿಕೃತ ವಿದೇಶ ಪ್ರವಾಸದ ಪ್ರಸ್ತಾವನೆಗಳನ್ನು ನೇರವಾಗಿ ಮುಖ್ಯಮಂತ್ರಿಯವರ ಅನುಮೋದನೆಗೆ ಕಳುಹಿಸದೆ, ಕಡ್ಡಾಯವಾಗಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಯ ಮೂಲಕವೇ ಪ್ರಸ್ತಾವನೆಗಳನ್ನು ಮುಖ್ಯಮಂತ್ರಿಯವರಿಗೆ ಸಲ್ಲಿಸಬೇಕು ಎಂದು ಸೂಚಿಸಲಾಗಿದೆ.
ಐಎಎಸ್ ಅಧಿಕಾರಿಗಳ ವಿದೇಶಿ ಪ್ರವಾಸ ನಿಯೋಜನೆಗೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ಸಂಬಂಧಿಸಿದ ಇಲಾಖೆಗಳಿಂದ ವೃಂದ ನಿಯಂತ್ರಣ ಪ್ರಾಧಿಕಾರದ ಕೇಡರ್ ಕ್ಲಿಯರೆನ್ಸ್ ಪಡೆಯಬೇಕಾಗುತ್ತದೆ. ಈ ರೀತಿ ಆಡಳಿತಾತ್ಮಕವಾಗಿ ಪ್ರಸ್ತಾವನೆಗಳನ್ನು ಪರಿಶೀಲಿಸಿ ಸಂಬಂಧಿಸಿದ ಇಲಾಖೆ ಅನುಮತಿ ನೀಡಲಿದೆ ಎಂದು ಸುತ್ತೋಲೆಯಲ್ಲಿ ತಿಳಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vijaypura:ರಾಹುಲ್ ಗಾಂಧಿ ನಿರ್ಗಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್
Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್
LS Polls: ರಾಜ್ಯದಲ್ಲಿ ಕಾಂಗ್ರೆಸ್ ವಿರೋಧಿ ಅಲೆ: ರಾಘವೇಂದ್ರ
Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…
MUST WATCH
ಹೊಸ ಸೇರ್ಪಡೆ
2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್ಯಾಂಕ್ ಪಡೆದ ತೀರ್ಥಹಳ್ಳಿಯ ಸುಚಿಂತ್
Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ
Vijaypura:ರಾಹುಲ್ ಗಾಂಧಿ ನಿರ್ಗಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ
ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್.ವರಲಕ್ಷ್ಮೀ
CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ