ನಾಳೆಯೊಳಗೆ ಚುನಾವಣೆ ನಡೆಸಿ: ಕೋರ್ಟ್
Team Udayavani, Sep 6, 2018, 6:35 AM IST
ಧಾರವಾಡ: ಬೆಳಗಾವಿ ಕಾಂಗ್ರೆಸ್ ನಾಯಕರಾದ ಜಾರಕಿಹೊಳಿ ಕುಟುಂಬ ಮತ್ತು ಲಕ್ಷ್ಮಿ ಹೆಬ್ಟಾಳ್ಕರ್ ನಡುವೆ ಪ್ರತಿಷ್ಠೆಯ ಪ್ರಶ್ನೆಯಾಗಿದ್ದ ಬೆಳಗಾವಿ ತಾಲೂಕು ಪಿಎಲ್ಡಿ ಬ್ಯಾಂಕ್ ಅಧ್ಯಕ್ಷ, ಉಪಾಧ್ಯಕ್ಷ ಸ್ಥಾನಗಳಿಗೆ ಸೆ.7ರೊಳಗೆ ಚುನಾವಣೆ ನಡೆಸುವಂತೆ ಧಾರವಾಡದ ಹೈಕೋರ್ಟ್ ಚುನಾವಣಾಧಿಕಾರಿಗೆ ಸೂಚಿಸಿದೆ.
ಈ ತೀರ್ಪಿ ನಿಂದ ಜಾರಕಿಹೊಳಿ ಕುಟುಂಬಕ್ಕೆ ಹಿನ್ನಡೆ ಉಂಟಾಗಿದೆ. ಚುನಾವಣಾಧಿಕಾರಿಗಳು ಚುನಾವಣೆಯನ್ನು ಮುಂದೂಡಿದ್ದನ್ನು ಪ್ರಶ್ನಿಸಿ ಲಕ್ಷ್ಮಿ ಬೆಂಬಲಿಗರು ಕೋರ್ಟ್ ಮೆಟ್ಟಿ ಲೇರಿದ್ದರು. ನ್ಯಾ|ಸುನೀಲ ದತ್ತ ಯಾದವ ಅವರಿದ್ದ ಏಕಸದಸ್ಯ ಪೀಠ, ಸಂಘದ ಪ್ರಸ್ತುತ ಅಧ್ಯಕ್ಷ, ಉಪಾಧ್ಯಕ್ಷರ ಅಧಿಕಾರ ಅವಧಿ ಮುಕ್ತಾಯದೊಳಗೆ ಚುನಾವಣೆ ಜರುಗಿಸುವುದು ಸೂಕ್ತ ಎಂಬುದಾಗಿ ಅಭಿಪ್ರಾಯಪಟ್ಟು, ಸೆ.7ರೊಳಗೆ ಚುನಾವಣೆ ನಡೆಸುವಂತೆ ಚುನಾವಣಾಧಿಕಾರಿಗೆ ಸೂಚನೆ ನೀಡಿದೆ.
ಬೆಳಗಾವಿ ತಾಲೂಕು ಪಿಎಲ್ಡಿ ಬ್ಯಾಂಕ್ ಅಧ್ಯಕ್ಷ ಮತ್ತು ಉಪಾಧ್ಯಕ್ಷ ಸ್ಥಾನಗಳಿಗೆ ಆ.28ರಂದು ಚುನಾವಣೆ ನಡೆಸಲು ಚುನಾವಣಾಧಿಕಾರಿಗಳು ನಿಗದಿಪಡಿಸಿದ್ದರು. ನಂತರ ಸಂಘದ ಸದಸ್ಯರೊಬ್ಬರ ಕಾಣೆ ಮತ್ತು ಇತರ ಕಾರಣ ನೀಡಿ ಚುನಾವಣಾಧಿಕಾರಿಗಳು ಚುನಾವಣೆಯನ್ನು ತಾತ್ಕಾಲಿಕ ಮುಂದೂಡಿದ್ದರು. ಚುನಾವಣಾಧಿಕಾರಿಗಳ ಈ ಕ್ರಮ ಪ್ರಶ್ನಿಸಿ ಸದಸ್ಯರಾದ ಮಹಾಂತೇಶ ಪಾಟೀಲ ಮತ್ತು ಇತರರು ಹೈಕೋರ್ಟ್ನಲ್ಲಿ ರಿಟ್ ಅರ್ಜಿ ಸಲ್ಲಿಸಿದ್ದರು. ಈ ಅರ್ಜಿ ವಿಚಾರಣೆ ನಡೆಸಿದ ಪೀಠವು, ಸೆ.7ರೊಳಗೆ ಚುನಾವಣೆ ನಡೆಸುವಂತೆ ಚುನಾವಣಾಧಿಕಾರಿಗೆ ಸೂಚನೆ ನೀಡಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Thirthahalli: ರಾಜ್ಯದ 28 ಕ್ಷೇತ್ರವನ್ನೂ ಗೆಲ್ಲಿಸಬೇಕೆಂದು ಜೆಡಿಎಸ್ ಪಕ್ಷದೊಂದಿಗೆ ಮೈತ್ರಿ
Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್
ದಿಂಗಾಲೇಶ್ವರ ಸ್ವಾಮೀಜಿಗೆ ತಪ್ಪು ತಿಳಿವಳಿಕೆಯಾಗಿದ್ದರೆ ಸರಿಪಡಿಸುವೆ: ಸಚಿವ ಪ್ರಹ್ಲಾದ ಜೋಶಿ
ಲೋಕಸಭಾ ಚುನಾವಣೆ: ಈ ಬಾರಿ ತೆಲಂಗಾಣದಲ್ಲಿ 10ಕ್ಕೂ ಅಧಿಕ ಕ್ಷೇತ್ರಗಳಲ್ಲಿ ಗೆಲುವು; ಅಭಯ ಪಾಟೀಲ
ಕಾಂಗ್ರೆಸ್ ನವರು ಕೇಸರಿ ಶಾಲು ಹಾಕಿದಾಕ್ಷಣ ಮನಸ್ಥಿತಿ ಬದಲಾಗಲ್ಲ… ಶೆಟ್ಟರ್ ಆರೋಪ
MUST WATCH
ಹೊಸ ಸೇರ್ಪಡೆ
ʼAadujeevithamʼ Twitter review: ಪೃಥ್ವಿರಾಜ್ ಅಭಿನಯಕ್ಕೆ ಬಹುಪರಾಕ್; ಹೇಗಿದೆ ಸಿನಿಮಾ?
Fire; ಬೈಕಂಪಾಡಿ ಕೈಗಾರಿಕಾ ಪ್ರದೇಶದಲ್ಲಿ ಅಗ್ನಿ ಅವಘಡ
ಮೈಸೂರು:ಶೃಂಗೇರಿ ಶಂಕರ ಮಠ-ಮಾ. 30ರಿಂದ ಅಭಿನವ ಶಂಕರಾಲಯದ ಶತಮಾನೋತ್ಸವ ಆಚರಣೆ
Delhi: ದುಬಾರಿ ಮರ್ಸಿಡೆಸ್ ಕಾರಿನಲ್ಲಿ ಡ್ರಗ್ಸ್ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!
Thirthahalli: ರಾಜ್ಯದ 28 ಕ್ಷೇತ್ರವನ್ನೂ ಗೆಲ್ಲಿಸಬೇಕೆಂದು ಜೆಡಿಎಸ್ ಪಕ್ಷದೊಂದಿಗೆ ಮೈತ್ರಿ