ನಾಳೆಯೊಳಗೆ ಚುನಾವಣೆ ನಡೆಸಿ: ಕೋರ್ಟ್
Team Udayavani, Sep 6, 2018, 6:35 AM IST
ಧಾರವಾಡ: ಬೆಳಗಾವಿ ಕಾಂಗ್ರೆಸ್ ನಾಯಕರಾದ ಜಾರಕಿಹೊಳಿ ಕುಟುಂಬ ಮತ್ತು ಲಕ್ಷ್ಮಿ ಹೆಬ್ಟಾಳ್ಕರ್ ನಡುವೆ ಪ್ರತಿಷ್ಠೆಯ ಪ್ರಶ್ನೆಯಾಗಿದ್ದ ಬೆಳಗಾವಿ ತಾಲೂಕು ಪಿಎಲ್ಡಿ ಬ್ಯಾಂಕ್ ಅಧ್ಯಕ್ಷ, ಉಪಾಧ್ಯಕ್ಷ ಸ್ಥಾನಗಳಿಗೆ ಸೆ.7ರೊಳಗೆ ಚುನಾವಣೆ ನಡೆಸುವಂತೆ ಧಾರವಾಡದ ಹೈಕೋರ್ಟ್ ಚುನಾವಣಾಧಿಕಾರಿಗೆ ಸೂಚಿಸಿದೆ.
ಈ ತೀರ್ಪಿ ನಿಂದ ಜಾರಕಿಹೊಳಿ ಕುಟುಂಬಕ್ಕೆ ಹಿನ್ನಡೆ ಉಂಟಾಗಿದೆ. ಚುನಾವಣಾಧಿಕಾರಿಗಳು ಚುನಾವಣೆಯನ್ನು ಮುಂದೂಡಿದ್ದನ್ನು ಪ್ರಶ್ನಿಸಿ ಲಕ್ಷ್ಮಿ ಬೆಂಬಲಿಗರು ಕೋರ್ಟ್ ಮೆಟ್ಟಿ ಲೇರಿದ್ದರು. ನ್ಯಾ|ಸುನೀಲ ದತ್ತ ಯಾದವ ಅವರಿದ್ದ ಏಕಸದಸ್ಯ ಪೀಠ, ಸಂಘದ ಪ್ರಸ್ತುತ ಅಧ್ಯಕ್ಷ, ಉಪಾಧ್ಯಕ್ಷರ ಅಧಿಕಾರ ಅವಧಿ ಮುಕ್ತಾಯದೊಳಗೆ ಚುನಾವಣೆ ಜರುಗಿಸುವುದು ಸೂಕ್ತ ಎಂಬುದಾಗಿ ಅಭಿಪ್ರಾಯಪಟ್ಟು, ಸೆ.7ರೊಳಗೆ ಚುನಾವಣೆ ನಡೆಸುವಂತೆ ಚುನಾವಣಾಧಿಕಾರಿಗೆ ಸೂಚನೆ ನೀಡಿದೆ.
ಬೆಳಗಾವಿ ತಾಲೂಕು ಪಿಎಲ್ಡಿ ಬ್ಯಾಂಕ್ ಅಧ್ಯಕ್ಷ ಮತ್ತು ಉಪಾಧ್ಯಕ್ಷ ಸ್ಥಾನಗಳಿಗೆ ಆ.28ರಂದು ಚುನಾವಣೆ ನಡೆಸಲು ಚುನಾವಣಾಧಿಕಾರಿಗಳು ನಿಗದಿಪಡಿಸಿದ್ದರು. ನಂತರ ಸಂಘದ ಸದಸ್ಯರೊಬ್ಬರ ಕಾಣೆ ಮತ್ತು ಇತರ ಕಾರಣ ನೀಡಿ ಚುನಾವಣಾಧಿಕಾರಿಗಳು ಚುನಾವಣೆಯನ್ನು ತಾತ್ಕಾಲಿಕ ಮುಂದೂಡಿದ್ದರು. ಚುನಾವಣಾಧಿಕಾರಿಗಳ ಈ ಕ್ರಮ ಪ್ರಶ್ನಿಸಿ ಸದಸ್ಯರಾದ ಮಹಾಂತೇಶ ಪಾಟೀಲ ಮತ್ತು ಇತರರು ಹೈಕೋರ್ಟ್ನಲ್ಲಿ ರಿಟ್ ಅರ್ಜಿ ಸಲ್ಲಿಸಿದ್ದರು. ಈ ಅರ್ಜಿ ವಿಚಾರಣೆ ನಡೆಸಿದ ಪೀಠವು, ಸೆ.7ರೊಳಗೆ ಚುನಾವಣೆ ನಡೆಸುವಂತೆ ಚುನಾವಣಾಧಿಕಾರಿಗೆ ಸೂಚನೆ ನೀಡಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ
Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ
Tragedy: ಕುಂದಾಪುರದಿಂದ ನೆಂಟರ ಮನೆಗೆ ಬಂದಿದ್ದ ಇಬ್ಬರು ಬಾಲಕರು ನೀರು ಪಾಲು
Lok Sabha Election: ಕಾಂಗ್ರೆಸ್ನಿಂದ ಜನರಿಗೆ ಸುಳ್ಳಿನ ಗ್ಯಾರಂಟಿ: ಗಾಯಿತ್ರಿ ಸಿದ್ದೇಶ್ವರ
BJP ಯಿಂದ ನಿರ್ಲಕ್ಷ್ಯ… ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ ಕೆ.ಪಿ.ನಂಜುಂಡಿ
MUST WATCH
ಹೊಸ ಸೇರ್ಪಡೆ
Gadaga: ಸೈಕ್ಲಿಸ್ಟ್ ಪವಿತ್ರಾ ಕುರ್ತಕೋಟಿ ಸೈಕ್ಲಿಂಗ್ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಆಯ್ಕೆ
ಶರ್ಟ್ ಒಳಗೆ ಕಂತೆ ಕಂತೆ ನೋಟುಗಳನ್ನು ಬಚ್ಚಿಟ್ಟು ಅಧಿಕಾರಿಗಳ ಕೈಗೆ ಸಿಕ್ಕಿಬಿದ್ದ ವ್ಯಕ್ತಿ!
ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ
Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ
Editorial: ಗುಕೇಶ್ ಗೆಲುವು- ಭಾರತದ ಯುವಶಕ್ತಿಯ ಸಂಕೇತ