ನಾಳೆ PLD ಎಲೆಕ್ಷನ್; ಲಕ್ಷ್ಮಿ ಗೆದ್ರೆ ಜಾರಕಿಹೊಳಿ ಉಗ್ರ ತೀರ್ಮಾನ!!
Team Udayavani, Sep 6, 2018, 4:28 PM IST
ಬೆಳಗಾವಿ : ರಾಜ್ಯ ರಾಜಕಾರಣದಲ್ಲಿ ತೀವ್ರ ತಲ್ಲಣ ಮೂಡಿಸಿರುವ ಬೆಳಗಾವಿ ಪಿಎಲ್ಡಿ ಬ್ಯಾಂಕ್ ಚುನಾವಣೆ ನಾಳೆ ಶುಕ್ರವಾರ ನಡೆಯಲಿದ್ದು ಕಾಂಗ್ರೆಸ್ಗೆ ಆತಂಕ ತಂದಿಟ್ಟಿದೆ.
ಚುನಾವಣೆ ಸಚಿವ ರಮೇಶ್ ಜಾರಕಿಹೊಳಿ,ಸಹೋದರ ಸತೀಶ್ ಜಾರಕಿಹೊಳಿ ಮತ್ತು ಲಕ್ಷ್ಮಿ ಹೆಬ್ಬಾಳ್ಕರ್ ನಡುವಿನ ಜಿದ್ದಾಜಿದ್ದಿನ ಕದನವಾಗಿದೆ.
ಗುರುವಾರ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ರಮೇಶ್ ಜಾರಕಿಹೋಳಿ ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್ ವಿರುದ್ಧ ತೀವ್ರ ಕಿಡಿ ಕಾರಿದ್ದು , ಆಕೆಯ ಬಣ ಚುನಾವಣೆಯಲ್ಲಿ ಗೆದ್ದರೆ ನಾವು ಉಗ್ರ ನಿರ್ಣಯ ಕೈಗೊಳ್ಳುವುದಾಗಿ ಕಾಂಗ್ರೆಸ್ ಪಕ್ಷಕ್ಕೇ ಎಚ್ಚರಿಕೆ ನೀಡಿದ್ದಾರೆ.
ಆಕೆ ಜಿಲ್ಲಾಧ್ಯಕ್ಷೆ ಆಗಲು ಸತೀಶ್ ಜಾರಕಿಹೊಳಿ ಕಾರಣ. ಅವರ ರಾಜಕೀಯ ಜೀವನ ಆರಂಭವಾಗಿದ್ದು ಅಲ್ಲಿಂದ. ಆಕೆಗೆ ಜಾರಕಿಹೊಳಿ ಕುಟುಂಬಕ್ಕೆ 90 ಕೋಟಿ ರೂಪಾಯಿ ಸಾಲ ಕೊಡುವ ಶಕ್ತಿ ಇದೆ ಎನ್ನುವುದು ಗೊತ್ತಿರಲಿಲ್ಲ. ಇಷ್ಟು ಕೀಳು ಮಟ್ಟಕ್ಕೆ ಇಳಿಯಬಾರದು ಎಂದು ಕಿಡಿ ಕಾರಿದರು.
ಆಕೆ ನಮ್ಮ ಬಳಿ ಅಳುತ್ತಾ ಬಂದಿದ್ದಳು. ಶಾಸಕಿಯಾದ ಕೂಡಲೆ ಸಚಿವ ಸ್ಥಾನ ಕೇಳುತ್ತಾಳೆ. ಮುಂದಿನ ದಿನಗಳಲ್ಲಿ ಆಕೆಗೆ ರಾಜಕೀಯ ಭವಿಷ್ಯವಿಲ್ಲ ಎಂದರು.
ಹಣದಿಂದಲೇ ಎಲ್ಲಾ ಆಗುತ್ತದೆ ಎಂದು ಆಕೆಯ ಪಿತ್ತ ನೆತ್ತಿಗೇರಿದೆ. 4 ಬಾರಿ ಶಾಸಕನಾದ ಬಳಿಕ ನಾನು ಸಚಿವನಾದೆ. ಆಕೆಯ ಗಾಡ್ಫಾದರ್ ಬೆಂಗಳೂರಿನಲ್ಲಿ ಯಾರಿದ್ದಾರೆ ಎಂದು ಗೊತ್ತಿಲ್ಲ ಎಂದು ಕಿಡಿಕಾರಿದರು.
ಶುಕ್ರವಾರ ಮಧ್ಯಾಹ್ನ ಪಿಎಲ್ಡಿ ಬ್ಯಾಂಕ್ ಚುನಾವಣೆ ನಿಗದಿಯಾಗಿದ್ದು ಮಧ್ಯಾಹ್ನವೇ ಫಲಿತಾಂಶ ಹೊರ ಬೀಳಲಿದೆ.
ಮುಂದೂಡಿಕೆಯಾಗಿದ್ದ ಚುನಾವಣೆಯನ್ನು ಧಾರವಾಡ ಹೈಕೋರ್ಟ್ ತಕ್ಷಣ ನಡೆಸುವಂತೆ ಆದೇಶ ನೀಡಿದ್ದು ರಮೇಶ್ ಜಾರಕಿಹೊಳಿಗೆ ಶಾಕ್ ನೀಡಿತ್ತು. ಲಕ್ಷ್ಮಿ ಹೆಬ್ಬಾಳ್ಕರ್ ಅವರಿಗೆ ಚುನಾವಣೆ ಗೆದ್ದಷ್ಟು ಸಂಭ್ರಮ ತಂದಿಟ್ಟಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Election: ಕಾಂಗ್ರೆಸ್ನಿಂದ ಜನರಿಗೆ ಸುಳ್ಳಿನ ಗ್ಯಾರಂಟಿ: ಗಾಯಿತ್ರಿ ಸಿದ್ದೇಶ್ವರ
BJP ಯಿಂದ ನಿರ್ಲಕ್ಷ್ಯ… ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ ಕೆ.ಪಿ.ನಂಜುಂಡಿ
Road mishap: ಬೆಳ್ಳಂಬೆಳಗ್ಗೆ ಪಿಕಪ್ ಢಿಕ್ಕಿ; ಮೂವರ ದುರ್ಮರಣ
ಲೋಕಸಭಾ ಕಣದಲ್ಲಿ ನಾರಿಶಕ್ತಿ ಪ್ರದರ್ಶನ: ಕಾಂಗ್ರೆಸ್ನಿಂದ 6, ಬಿಜೆಪಿಯಿಂದ 2 ಮಹಿಳೆಯರು
Lok Sabha Polls; ರಾಜ್ಯದ ಕಣ ಅಂತಿಮ: 474 ಅಭ್ಯರ್ಥಿಗಳು
MUST WATCH
ಹೊಸ ಸೇರ್ಪಡೆ
ಅಡಕೆ-ಕಾಫಿ ಬೆಳೆಗಾರರ ಸಂಕಷ್ಟಕ್ಕೆ ಬಿಜೆಪಿ ಏಕೆ ಸ್ಪಂದಿಸಿಲ್ಲ: ಜಯಪ್ರಕಾಶ್ ಹೆಗ್ಡೆ
Lok Sabha Election: ಕಾಂಗ್ರೆಸ್ನಿಂದ ಜನರಿಗೆ ಸುಳ್ಳಿನ ಗ್ಯಾರಂಟಿ: ಗಾಯಿತ್ರಿ ಸಿದ್ದೇಶ್ವರ
Udupiಗೆ ಸರಕಾರಿ ವೈದ್ಯಕೀಯ ಕಾಲೇಜು, ಎಂಜಿನಿಯರಿಂಗ್ ಕಾಲೇಜು: ಜಯಪ್ರಕಾಶ್ ಹೆಗ್ಡೆ
Malaysia ನೌಕಾಪಡೆಯ 2 ಹೆಲಿಕಾಪ್ಟರ್ ಪತನ; 10 ಮಂದಿ ಮೃತ್ಯು, ಭಯಾನಕ ವಿಡಿಯೋ ಸೆರೆ
BJP ಯಿಂದ ನಿರ್ಲಕ್ಷ್ಯ… ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ ಕೆ.ಪಿ.ನಂಜುಂಡಿ