ಮಾನಪ್ಪಾಡಿ ವರದಿಗೆ ಮಾನ್ಯತೆಯೇ ಇಲ್ಲ: ಜಮೀರ್
Team Udayavani, Sep 7, 2018, 6:05 AM IST
ಕೊಪ್ಪಳ: “2013ರಲ್ಲಿ ಅಲ್ಪಸಂಖ್ಯಾತರ ಆಯೋಗದ ಅಧ್ಯಕ್ಷರಾಗಿದ್ದ ಅನ್ವರ್ ಮಾನಪ್ಪಾಡಿ ಅವರು ತಮ್ಮ ಅಧಿಕಾರಾವಧಿ ಮುಗಿದ ಒಂದು ತಿಂಗಳ ಬಳಿಕ ಸರ್ಕಾರಕ್ಕೆ ವಕ್ಫ್ ಆಸ್ತಿ ಕಬಳಿಕೆಯ ಬಗ್ಗೆ ವರದಿ ಕೊಟ್ಟಿದ್ದಾರೆ. ಅಧಿಕಾರಾವಧಿ ಮುಗಿದ ಬಳಿಕ ಅವರು ಕೊಟ್ಟ ವರದಿಗೆ ಮಾನ್ಯತೆಯೇ ಇಲ್ಲ. ಅದನ್ನು ಈ ಹಿಂದಿನ ಸರ್ಕಾರದಲ್ಲೇ ಸಿದ್ದರಾಮಯ್ಯ ಅವರು ತಿರಸ್ಕರಿಸಿದ್ದಾರೆ’ ಎಂದು ಸಚಿವ ಜಮೀರ್ ಅಹ್ಮದ್ ಅವರು ಅಚ್ಚರಿಯ ಹೇಳಿಕೆ ನೀಡಿದ್ದಾರೆ.
ಕುಷ್ಟಗಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, 2013ರ ಫೆಬ್ರವರಿಯಲ್ಲಿ ಅನ್ವರ್ ಮಾನಪ್ಪಾಡಿ ಅವರ 3 ವರ್ಷದ ಅಧಿಕಾರಾವಧಿ ಮುಗಿದಿದೆ. ಅವಧಿ ಮುಗಿದ ಬಳಿಕ ಮಾರ್ಚ್ನಲ್ಲಿ ಆಸ್ತಿ ಕಬಳಿಕೆಯ ಬಗ್ಗೆ ಸದಾನಂದಗೌಡರಿಗೆ ವರದಿ ಸಲ್ಲಿಸಿದ್ದಾರೆ. ಆದರೆ, ಅವಧಿ ಒಳಗೆ ಅವರು ಏಕೆ ವರದಿ ಸಲ್ಲಿಸಲಿಲ್ಲ? ಆಗ ಬಿಜೆಪಿ ಸರ್ಕಾರವೇ ಆಡಳಿತ ನಡೆಸುತ್ತಿತ್ತು. ಆ ಸರ್ಕಾರ ವರದಿ ಬಗ್ಗೆ ಕ್ರಮ ಕೈಗೊಳ್ಳಲಿಲ್ಲ. ಅವರ ವರದಿಗೆ ಮಾನ್ಯತೆ ಇಲ್ಲ ಎಂದರು.
“ಆ ಪ್ರಕರಣ ಕೋರ್ಟ್ನಲ್ಲಿ ನಡೆಯುತ್ತಿದೆ. ಕೋರ್ಟ್ ಏನು ಆದೇಶ ಮಾಡಿದೆ ಎನ್ನುವ ಬಗ್ಗೆ ನನಗೆ ಮಾಹಿತಿ ಇಲ್ಲ. ಮಾನಪ್ಪಾಡಿ ವರದಿಯನ್ನು ಕಾಂಗ್ರೆಸ್ ಸರ್ಕಾರದಲ್ಲಿ ಸಿದ್ದರಾಮಯ್ಯ ಅವರು ಸಚಿವ ಸಂಪುಟದಲ್ಲಿ ತಂದು ತಿರಸ್ಕರಿಸಿದ್ದಾರೆ. ವಕ್ಫ್ ಸೇರಿದಂತೆ ಮುಜರಾಯಿ ಆಸ್ತಿ ದೇವರ ಆಸ್ತಿ ಎಂದು ನಾನು ಭಾವಿಸುವೆ ಎಂದರು.
ಮಾನಪ್ಪಾಡಿ ಅವರು ವಕ್ಫ್ ಆಸ್ತಿಯನ್ನು ರಾಜಕಾರಣಿಗಳು ಕಬಳಿಕೆ ಮಾಡಿದ್ದಾರೆ ಎಂದು ವರದಿಯಲ್ಲಿ ಆರೋಪಿಸಿದ್ದಾರೆ. ಅವರಿಗೆ ಮೂರು ದಿನ ಕಾಲಾವಕಾಶ ಕೊಡುತ್ತೇನೆ. ನನ್ನ ಬಳಿ ಬರಲಿ, ಯಾರೆಂದು ನನಗೆ ಹೇಳಲಿ, ಸ್ಥಳ ಪರಿಶೀಲನೆಗೆ ನಾನೇ ಅಧಿಕಾರಿಗಳೊಂದಿಗೆ ತೆರಳುತ್ತೇನೆ. ವಕ್ಫ್ ಆಸ್ತಿ ಕಬಳಿಕೆ ಮಾಡಿದ ಎಂತಹ ದೊಡ್ಡ ರಾಜಕಾರಣಿಯೇ ಇರಲಿ ಅವರ ವಿರುದ್ಧ ಕ್ರಮ ಕೈಗೊಳ್ಳುತ್ತೇನೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hubli; ನೇಹಾ ಪ್ರಕರಣದಲ್ಲಿ ಸರ್ಕಾರದ ನಡವಳಿಕೆ ಸರಿಯಾಗಿರಲಿಲ್ಲ: ಬಿ.ವೈ. ವಿಜಯೇಂದ್ರ
Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದ್ರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ
Hubballi: ಮೂವರು ನಕಲಿ ಸಿಐಡಿ ಅಧಿಕಾರಿಗಳ ಬಂಧನ… ಮೊಬೈಲ್, ಬೈಕ್ ವಶ
ತಾಳಿಭಾಗ್ಯ ಯೋಜನೆ ತಂದ ‘ಕಾಂಗ್ರೆಸ್’ ಕಿತ್ತುಕೊಳ್ಳುವ ಕೆಲಸ ಎಂದೂ ಮಾಡಲ್ಲ: H.K. Patil
ಮಗಳ ಪ್ರಕರಣ ದಿಕ್ಕು ತಪ್ಪುತ್ತಿದೆ ಎಂದಿದ್ದ ನೇಹಾಳ ತಂದೆ ರಾಜ್ಯ ಸರಕಾರದ ಕ್ಷಮೆ ಕೇಳಿದ್ದೇಕೆ?
MUST WATCH
ಹೊಸ ಸೇರ್ಪಡೆ
Loksabha Election; ಬಿಜೆಪಿ 14ನೇ ಪಟ್ಟಿ: ಲಡಾಖ್ ಹಾಲಿ ಸಂಸದ ನಮ್ಗ್ಯಾಲ್ ಗೆ ಕೊಕ್
Kaniyoor: ಕೆರೆ ಸ್ವಚ್ಛಗೊಳಿಸುವಾಗ ಮುಳುಗಿ ವ್ಯಕ್ತಿ ಸಾವು
BS ಯಡಿಯೂರಪ್ಪನೇ ನನ್ನನ್ನು ವಾಪಸ್ ಬಿಜೆಪಿ ಕರೆಸಿಕೊಳ್ಳುತ್ತಾರೆ: ಈಶ್ವರಪ್ಪ
Mangaluru: ಮದ್ಯಜಪ್ತಿ,16.4 ಕೆಜಿ ಡ್ರಗ್ಸ್ ವಶ: ಜಿಲ್ಲಾಧಿಕಾರಿ ಮಾಹಿತಿ
K.S. Eshwarappa ಗಂಡಸಾಗಿದ್ದರೆ ಮಗನಿಗೆ ಟಿಕೆಟ್ ಕೊಡಿಸಲಿ: ಮಧು