ಬರ ವೀಕ್ಷಣೆಗೆ ಬಾರದ ಸಿಎಂ: ಜಿಗಜಿಣಗಿ ಕಿಡಿ
Team Udayavani, Sep 7, 2018, 6:30 AM IST
ವಿಜಯಪುರ: “ಉತ್ತರ ಕರ್ನಾಟಕದ 13 ಜಿಲ್ಲೆಗಳಲ್ಲಿ ಭೀಕರ ಬರ ಆವರಿಸಿ, ಜನ-ಜಾನುವಾರು ಸಂಕಷ್ಟಕ್ಕೆ ಸಿಲುಕಿದ್ದರೂ ಸಿಎಂ ಕುಮಾರಸ್ವಾಮಿ ವಿಧಾನಸೌಧ ಬಿಟ್ಟು ಕದಲಲಿಲ್ಲ. ಮೈತ್ರಿ ಸರ್ಕಾರ ಉಳಿಸಿಕೊಳ್ಳುವುದಕ್ಕೆ ಆಂತರಿಕ ಕಲಹ ಪರಿಹಾರದಲ್ಲೇ ಕಾಲಹರಣ ಮಾಡುತ್ತಿದ್ದಾರೆ. ಬರ ಪೀಡಿತ ಜಿಲ್ಲೆಗಳಿಗೆ ಭೇಟಿ ನೀಡಿ ಜನರ ಕಣ್ಣೀರು ಒರೆಸಲು ಮುಂದಾಗಿಲ್ಲ’ ಎಂದು ಕೇಂದ್ರ ಸಚಿವ ರಮೇಶ ಜಿಗಜಿಣಗಿ ಕಿಡಿ ಕಾರಿದರು.
ಗುರುವಾರ ಪತ್ರರ್ಕರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಒಳಜಗಳ, ಮೈತ್ರಿ ಪಕ್ಷ ಜೆಡಿಎಸ್ ಅತೃಪ್ತಿಗಳಂಥ ಕಾರಣಗಳಿಂದ ರಾಜ್ಯದ ಅಭಿವೃದ್ಧಿ ಕುಸಿತವಾಗಿದ್ದು, ಇತ್ತೀಚಿನ ವಿದ್ಯಮಾನಗಳನ್ನು ಗಮನಿಸಿದರೆ ಮೈತ್ರಿ ಸರ್ಕಾರ ಶೀಘ್ರ ಪತನವಾಗುವ ಕಾಲ ದೂರವಿಲ್ಲ. ರಾಮಕೃಷ್ಣ ಹೆಗಡೆ ಸಿಎಂ ಆಗಿದ್ದಾಗಲೂ ರಾಜ್ಯ ಭೀಕರ ಬರಕ್ಕೆ ತುತ್ತಾಗಿತ್ತು. ಆದರೆ ಹೆಗಡೆ ಅವರು ಸಂಕಷ್ಟವನ್ನು ಸಮರ್ಥವಾಗಿ ನಿಭಾಯಿಸಿದ್ದರು. ರಾಜ್ಯದಲ್ಲಿ ಭೀಕರ ಬರ ಆವರಿಸಿದಾಗ ಜಿಲ್ಲಾ ಉಸ್ತುವಾರಿ ಸಚಿವರನ್ನು ಕೇಂದ್ರ ಸ್ಥಾನ ಬಿಡದಂತೆ ತಾಕೀತು ಮಾಡಿದ್ದರು. ನಿರ್ಲಕ್ಷ್ಯ ತೋರಿ ಬೆಂಗಳೂರಿಗೆ ಬರುತ್ತಿದ್ದ ಸಚಿವರ ಕುರಿತು ಗುಪ್ತ ವಾರ್ತೆ ಅಧಿಕಾರಿಗಳಿಂದ ಮಾಹಿತಿ ಪಡೆದು ಅಂಥ ಸಚಿವರನ್ನು ತರಾಟೆಗೆ ತೆಗೆದುಕೊಳ್ಳುತ್ತಿದ್ದರು ಎಂದರು.
ಕುಮಾರಸ್ವಾಮಿ ಅವರಿಗೆ ಅಂಥ ಬದ್ಧತೆ ಕಂಡು ಬರುತ್ತಿಲ್ಲ. ಭೀಕರ ಬರಗಾಲ ಪರಿಸ್ಥಿತಿ ಇರುವ ಉತ್ತರ ಕರ್ನಾಟಕ ಭಾಗದ ಜಿಲ್ಲೆಗಳಿಗೆ ಮುಖ್ಯಮಂತ್ರಿ ಭೇಟಿ ನೀಡದೇ ಬೇಜವಾಬ್ದಾರಿ ತೋರಿದ್ದಾರೆ. ಕಾಂಗ್ರೆಸ್ ನಾಯಕರು ಅತೃಪ್ತರ ಓಲೈಕೆಯಲ್ಲಿ ತೊಡಗಿದ್ದು, ಸಂಕಷ್ಟದಲ್ಲಿರುವ ಜನರ ಗೋಳು ಕೇಳುವವರೇ ಇಲ್ಲವಾಗಿದೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Election; ಹಂತ 1: 14 ಕ್ಷೇತ್ರಗಳ ಬಹಿರಂಗ ಪ್ರಚಾರ ಅಂತ್ಯ: ನಾಳೆ ಮತದಾನ
ಅನಂತಸ್ವಾಮಿ ಧಾಟಿಯಲ್ಲೇ ನಾಡಗೀತೆ; ರಾಜ್ಯ ಸರಕಾರದ ಆದೇಶ ಎತ್ತಿಹಿಡಿದ ಹೈಕೋರ್ಟ್
Exam; ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ-2ಕ್ಕೆ 1.49 ಲಕ್ಷ ವಿದ್ಯಾರ್ಥಿಗಳ ನೋಂದಣಿ
Congress ಅಭ್ಯರ್ಥಿ ಡಿ.ಕೆ. ಸುರೇಶ್ 6 ಮಂದಿ ಆಪ್ತರ ಮನೆ ಮೇಲೆ ಐಟಿ ದಾಳಿ
Congress ವಿರುದ್ಧ ಬಿಜೆಪಿ ಕ್ಯೂಆರ್ ಕೋಡ್ ಸಮರ
MUST WATCH
ಹೊಸ ಸೇರ್ಪಡೆ
Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ
Lok Sabha Election; ಹಂತ 1: 14 ಕ್ಷೇತ್ರಗಳ ಬಹಿರಂಗ ಪ್ರಚಾರ ಅಂತ್ಯ: ನಾಳೆ ಮತದಾನ
ಅನಂತಸ್ವಾಮಿ ಧಾಟಿಯಲ್ಲೇ ನಾಡಗೀತೆ; ರಾಜ್ಯ ಸರಕಾರದ ಆದೇಶ ಎತ್ತಿಹಿಡಿದ ಹೈಕೋರ್ಟ್
ಕೈಗೆ ಪಿತ್ರೋಡಾರ್ಜಿತ ಸಂಕಟ! ಬಿಜೆಪಿಗೆ ಸಿಕ್ಕಿದ ಹೊಸ ಅಸ್ತ್ರ ; ಕಂಗೆಟ್ಟ ಕಾಂಗ್ರೆಸ್
Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ