ಸಮಾನ ಮನಸ್ಕ ಸ್ವಾಮಿಗಳ ನೇತೃತ್ವದಲ್ಲಿ ಪ್ರಧಾನಿ ಭೇಟಿ
Team Udayavani, Sep 7, 2018, 6:45 AM IST
ವಿಜಯಪುರ: ಲಿಂಗಾಯತ ಧರ್ಮಕ್ಕೆ ಮಾನ್ಯತೆ ನೀಡುವಂತೆ ಒತ್ತಡ ಹೇರಲು ಸಮಾನ ಮನಸ್ಕ ಶ್ರೀಗಳ ನೇತೃತ್ವದಲ್ಲಿ ನವದೆಹಲಿಗೆ ತೆರಳಿ ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡುವುದಾಗಿ ಕೂಡಲಸಂಗಮ ಪಂಚಮಸಾಲಿ ಪೀಠದ ಜಗದ್ಗುರು ಶ್ರೀ ಬಸವಜಯ ಮೃತ್ಯುಂಜಯ ಸ್ವಾಮೀಜಿ ಹೇಳಿದರು.
ಗುರುವಾರ ನಗರದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಲಿಂಗಾಯತ ಪ್ರತ್ಯೇಕ ಧರ್ಮದ ಮಾನ್ಯತೆ ಹೋರಾಟ ಸ್ಥಗಿತಗೊಂಡಿಲ್ಲ.ಲಿಂಗಾಯತ ಹೋರಾಟದ ಪ್ರಮುಖ ರಾಜಕೀಯ ನಾಯಕರು ಚುನಾವಣೆಯಲ್ಲಿ ಸೋತಿದ್ದರೂ ಅದಕ್ಕೆ ಪ್ರತ್ಯೇಕ ಧರ್ಮ ಹೋರಾಟ ಕಾರಣವಲ್ಲ. ರಾಜಕೀಯಕ್ಕೂ, ಯಾವುದೇ ಪಕ್ಷಕ್ಕೂ, ಪ್ರತ್ಯೇಕ ಧರ್ಮ ಮಾನ್ಯತೆ ಹೋರಾಟಕ್ಕೂ ಸಂಬಂಧವಿಲ್ಲ. ಸಚಿವ ಎಂ.ಬಿ. ಪಾಟೀಲ ಅವರನ್ನು ಸಚಿವರನ್ನಾಗಿ ಮಾಡದಿರಲು ಲಿಂಗಾಯತ ಪ್ರತ್ಯೇಕ ಧರ್ಮ ಹೋರಾಟ ಕಾರಣವಲ್ಲ ಎಂದರು.
ರಾಜ್ಯಾದ್ಯಂತ ರ್ಯಾಲಿ ಮಾಡಿ ರಾಜ್ಯ ಸರ್ಕಾರದ ಮೇಲೆ ಒತ್ತಡ ಹೇರಿ ಕೇಂದ್ರಕ್ಕೆ ಶಿಫಾರಸು ಮಾಡಲಾಗಿದೆ. ಅದು ಈಗ ಕೇಂದ್ರದ ಮುಂದಿದೆ. ಬಸವೇಶ್ವರರ ಸಾಮಾಜಿಕ ಕ್ರಾಂತಿ ಕುರಿತು ಸ್ಪಷ್ಟ ಮಾಹಿತಿ ಹೊಂದಿರುವ ಪ್ರಧಾನಿ ಮೋದಿ ಅವರು, ಲಿಂಗಾಯತ ಪ್ರತ್ಯೇಕ ಧರ್ಮ ಮಾನ್ಯತೆಗೆ ಸಕಾರಾತ್ಮಕ ಸ್ಪಂದನೆ ನೀಡುವ ವಿಶ್ವಾಸವಿದೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ಸಿರಿಯಾದ ಮೇಲೆ ಇಸ್ರೇಲ್ ವೈಮಾನಿಕ ದಾಳಿ… 5 ಹಿಜ್ಬುಲ್ ಸದಸ್ಯರು ಸೇರಿ 38 ಮಂದಿ ಹತ
Crime: ಗುದದ್ವಾರಕ್ಕೆ ಗಾಳಿ: ಸ್ನೇಹಿತನ ದುರ್ಮರಣ: ಕೃತ್ಯವೆಸಗಿದಾತನ ಬಂಧನ
Bidar; ಪತ್ನಿಯ ಅನೈತಿಕ ಸಂಬಂಧಕ್ಕೆ ಮನನೊಂದು ನೀರಿನ ಟ್ಯಾಂಕ್ ಗೆ ಬಿದ್ದು ಪತಿ ಆತ್ಮಹತ್ಯೆ
Gobi Manchurian ಬ್ಯಾನ್ ಎಫೆಕ್ಟ್: ಚಾಟ್ಸ್ ಮಾರಾಟ ಕುಸಿತ
Book Brahma ಸ್ವಾತಂತ್ರ್ಯೋತ್ಸವ ಕಥಾ ಸ್ಪರ್ಧೆ, ಕಾದಂಬರಿ ಪುರಸ್ಕಾರ- 2024: ವಿವರಗಳು