ಅನಕ್ಷರಸ್ಥರ ಅಕ್ಷರಾಭ್ಯಾಸಕ್ಕಾಗಿ ಹೊಸ ಯೋಜನೆ


Team Udayavani, Sep 7, 2018, 6:15 AM IST

aaddffg.jpg

ಬೆಂಗಳೂರು : ಸಾಕ್ಷರ ಭಾರತ್‌ ಯೋಜನೆ ಮಾರ್ಚ್‌ ತಿಂಗಳಿಗೆ ಅಂತ್ಯಗೊಂಡಿದ್ದು, ಸದ್ಯ ಅನಕ್ಷರಸ್ಥರ ಶಿಕ್ಷಣಕ್ಕೆ ಯಾವುದೇ ಯೋಜನೆ ಇಲ್ಲ. ಸೆಪ್ಟೆಂಬರ್‌ ಎರಡನೇ ವಾರದಲ್ಲಿ “ಲಿಕ್ನಾ-ಪಡ್ನಾ’ ಹೊಸ ಯೋಜನೆ ಘೋಷಣೆಯಾಗುವ ಸಾಧ್ಯತೆ ಇದೆ.

2012-13ನೇ ಸಾಲಿನಲ್ಲಿ ಸಾಕ್ಷರ ಭಾರತ್‌ ಯೋಜನೆ ಕೇಂದ್ರ ಸರ್ಕಾರ ಜಾರಿಗೆ ತಂದಿತ್ತು. 2011ರ ಜನಗತಿಯ ಆಧಾರದಲ್ಲಿ ರಾಜ್ಯದಲ್ಲಿರುವ ಅನಕ್ಷರಸ್ಥರಿಗೆ ಸಾಕ್ಷರ ಭಾರತ್‌ ಯೋಜನೆಯಡಿ ಶಿಕ್ಷಣ ನೀಡಲಾಗಿತ್ತು. 2011ರ ಜನಗಣತಿಯ ಪ್ರಕಾರ ರಾಜ್ಯದಲ್ಲಿ 80 ಲಕ್ಷ ಅನಕ್ಷರಸ್ಥರು ಇರುವುದು ದೃಢಪಟ್ಟಿತ್ತು. ಈ ಆಧಾರದಲ್ಲಿ 2012-13ನೇ ಸಾಲಿನಿಂದ ಸತತವಾಗಿ 2017-18ನೇ ಮಾರ್ಚ್‌ ತನಕ ರಾಜ್ಯದಲ್ಲಿ ಸಾಕ್ಷರ ಭಾರತ್‌ ಯೋಜನೆ ಸಮರ್ಪಕವಾಗಿ ಅನುಷ್ಠಾನ ಮಾಡಿದೆ.

80 ಲಕ್ಷ ಅನಕ್ಷರಸ್ಥರಲ್ಲಿ ಸುಮಾರು 50 ಲಕ್ಷ ಅನಕ್ಷರಸ್ಥರಿಗೆ ಅಕ್ಷರಾಭ್ಯಾಸ ಮಾಡಿಸುವ ಯೋಜನೆ ಲೋಕ ಶಿಕ್ಷಣ ನಿರ್ದೇಶನಾಲಯ ಹಾಕಿಕೊಂಡಿತ್ತು. 2018ರ ಮಾರ್ಚ್‌ ಅಂತ್ಯಕ್ಕೆ ಸಾಕ್ಷರ ಭಾರತ್‌ ಯೋಜನೆಯಡಿ 29 ಲಕ್ಷ ಮಂದಿಗೆ ಅ, ಆ, ಇ, ಈ, ಪದ, ವಾಕ್ಯ ರಚನೆ ಕಲಿಸುವಲ್ಲಿ ಯಶಸ್ವಿಯಾಗಿದೆ.

ಹೊಸ ಕಾರ್ಯಕ್ರಮ :
ಸೆ.8ರಂದು ವಿಶ್ವ ಸಾಕ್ಷರತ ದಿನಾಚರಣೆ ನಡೆಯಲಿದೆ. ಇದೇ ದಿನದಂದು ಕೇಂದ್ರ ಸರ್ಕಾರ ಎಲ್ಲ ರಾಜ್ಯದ ಲೋಕಶಿಕ್ಷಣ ನಿರ್ದೇಶನಾಲಯದ ಉನ್ನತ ಅಧಿಕಾರಿಗಳ ಸಭೆ ಕರೆದಿದೆ. ಅಂದು ಲಿಕ್ನಾ-ಪಡ್ನಾ ಹೊಸ ಯೋಜನೆ ಘೋಷಿಸುವ ಸಾಧ್ಯತೆಯೂ ಇದೆ ಎಂದು ಕರ್ನಾಟಕ ಲೋಕ ಶಿಕ್ಷಣ ನಿರ್ದೇಶನಾಲಯದ ಅಧಿಕಾರಿಗಳು “ಉದಯವಾಣಿ’ಗೆ ಮಾಹಿತಿ ನೀಡಿದ್ದಾರೆ.

ಲಿಕ್ನಾ-ಪಡ್ನಾ ಕಾರ್ಯಕ್ರಮದ ರೂಪುರೇಷೆ ಇನ್ನಷ್ಟೇ ಸಿದ್ಧವಾಗಬೇಕಿದೆ. ಸಾಕ್ಷರ ಭಾರತ್‌ ಕಾರ್ಯಕ್ರಮಕ್ಕಿಂತ ಭಿನ್ನವಾಗಿ ಅನುಷ್ಠಾನ ಮಾಡುವ ಸಾಧ್ಯತೆ ಇದೆ. ಗ್ರಾಮೀಣ ಭಾಗದಲ್ಲಿ ಇರುವ ಸ್ವಸಹಾಯ ಗುಂಪುಗಳನ್ನು  ಹಾಗೂ ಎನ್‌ಜಿಒಗಳನ್ನು ಈ ಕಾರ್ಯದಲ್ಲಿ ತೊಡಗಿಸಿಕೊಳ್ಳುವ ಯೋಜನೆಯೂ ಇದೆ ಎಂದು ವಿವರಿಸಿದರು.

ರಾಜ್ಯದ ಸಾಧನೆ :
ಲೋಕಶಿಕ್ಷಣ ನಿರ್ದೇಶನಾಲಯವು ಸಾಕ್ಷರ ಭಾರತ್‌ ಯೋಜನೆಯಡಿ 2012-13ನೇ ಸಾಲಿನಲ್ಲಿ 14,14,320 ಗುರಿ ಹೊಂದಿದ್ದು, 5,53,309ರಷ್ಟು ಸಾಧನೆ ಮಾಡಿತ್ತು. 2013-14ರಲ್ಲಿ 8,31,600 ಗುರಿಯಲ್ಲಿ 4,86,234 ಸಾಧನೆಯಾಗಿತ್ತು, 2014-15ರಲ್ಲಿ 5,42,000 ಗುರಿಯಲ್ಲಿ 1,21,257 ದಾಖಲೆ ಮಾಡಿತ್ತು. 2015-16ರಲ್ಲಿ 3,37,729 ಗುರಿ ಹೊಂದಿದ್ದು, 1,62,243 ಸಾಧನೆ, 2016-17ರಲ್ಲಿ 11,86,381 ಗುರಿಯಲ್ಲಿ 9,94,919 ಸಾಧನೆ ಹಾಗೂ 2017-18ರಲ್ಲಿ 6 ಲಕ್ಷ ಗುರಿ ಹೊಂದಿದ್ದು, 6 ಲಕ್ಷ ಸಾಧನೆ ಮಾಡಿದೆ.

ಒಟ್ಟಾರೆ ಆರು ವರ್ಷದಲ್ಲಿ 49,12,030 ಗುರಿ ಹೊಂದಿದ್ದು, 29,17,962 ರಷ್ಟು ಸಾಧನೆ ಮಾಡಿದೆ. ಇದರ ಜತೆಗೆ ಡಾ.ನಂಜುಡಪ್ಪ ವರದಿ ಅನ್ವಯ ಹಿಂದುಳಿದ ತಾಲೂಕುಗಳಲ್ಲಿ ಸಾಕ್ಷರತ ಕಾರ್ಯಕ್ರಮ, ವಿಶೇಷ ಘಟಕ ಯೋಜನೆ, ಗಿರಿಜನ ಉಪ ಯೋಜನೆ ಹೀಗೆ ಹಲವು ಕಾರ್ಯಕ್ರಮ ಸಾಕ್ಷರತೆಗಾಗಿ ನಡೆಸಿ, ಉತ್ತಮ ಸಾಧನೆ ಮಾಡಿದೆ.

ಹೊಸ ಸಮೀಕ್ಷೆ:
ಲಿಕ್ನಾ- ಪಡ್ನಾ ಕಾರ್ಯಕ್ರಮ ಘೋಷಣೆಯಾಗುತ್ತಿದ್ದಂತೆ ರಾಜ್ಯದಲ್ಲಿ ಅನಕ್ಷರಸ್ಥರು ಎಷ್ಟಿದ್ದಾರೆ ಎಂಬುದರ ಹೊಸ ಸಮೀಕ್ಷೆ ನಡೆಯಲಿದೆ. ಕಾರ್ಯಕ್ರಮ ಅನುಷ್ಠಾನಕ್ಕೂ ಪೂರ್ವದಲ್ಲಿ ಅನಕ್ಷರಸ್ಥರು ಎಷ್ಟಿದ್ದಾರೆ ಎಂಬುದರ ಸ್ಪಷ್ಟತೆ ನಿರ್ದೇಶನಾಲಕ್ಕೆ ಇರಬೇಕಾಗುತ್ತದೆ. ಇದರ ಆಧಾರದಲ್ಲಿ ಅನುದಾನವೂ ಬರುತ್ತದೆ. ಹೊಸ ಕಾರ್ಯಕ್ರಮ ಘೋಷಣೆಯಾದ ಮೊದಲ ತಿಂಗಳಲ್ಲೇ ಹೊಸ ಸಮೀಕ್ಷೆ ನಡೆಯಲಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದರು.

ಸಾಕ್ಷರತೆಗಾಗಿ ಜಿಪಂ ವತಿಯಿಂದ ಕೆಲವು ಕಾರ್ಯಕ್ರಮ ನಡೆಯುತ್ತಿದೆ. ಆದರೆ, ಅದು ಅತ್ಯಂತ ಕಡಿಮೆ ಸಂಖ್ಯೆಯಲ್ಲಿದೆ. 30 ಜಿಲ್ಲೆಯಲ್ಲಿ ಸುಮಾರು 70ರಿಂದ 80 ಸಾವಿರ ಜನರು ಇದರ ಅನುಕೂಲ ಪಡೆಯುತ್ತಿರಬಹುದು. ನಿರ್ದೇಶನಾಲಯದ ಸಾಕ್ಷರ ಭಾರತ್‌ ಕಾರ್ಯಕ್ರಮ 2018ರ ಮಾರ್ಚ್‌ಗೆ ಕೊನೆಯಾಗಿದೆ. ಸೆ.8ರ ನಂತರ ಲಿಕ್ನಾ-ಪಡ್ನಾ ಕಾರ್ಯಕ್ರಮ ಘೋಷಣೆಯಾಗುವ ಸಾಧ್ಯತೆ ಇದೆ.
– ಆರ್‌.ಎಸ್‌.ಪೆದ್ದಪ್ಪಯ್ಯ, ನಿರ್ದೇಶಕ, ಲೋಕಶಿಕ್ಷಣ ನಿರ್ದೇಶನಾಲಯ.

– ರಾಜು ಖಾರ್ವಿ ಕೊಡೇರಿ

ಟಾಪ್ ನ್ಯೂಸ್

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

2-padubidri

Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

Lok Sabha Election ಮುಗಿದ ಮತದಾನ, ಈಗ ಸೋಲು-ಗೆಲುವಿನ ಲೆಕ್ಕಾಚಾರ

Lok Sabha Election ಮುಗಿದ ಮತದಾನ, ಈಗ ಸೋಲು-ಗೆಲುವಿನ ಲೆಕ್ಕಾಚಾರ

ಕೆಲವೆಡೆ ಹಿಂಸಾಚಾರ, ಕೈ ಕೊಟ್ಟ ಮತಯಂತ್ರ; ಬಿಸಿಲಿನಿಂದ ತಡವಾಗಿ ಬಂದ ಮತದಾರರು

ಕೆಲವೆಡೆ ಹಿಂಸಾಚಾರ, ಕೈ ಕೊಟ್ಟ ಮತಯಂತ್ರ; ಬಿಸಿಲಿನಿಂದ ತಡವಾಗಿ ಬಂದ ಮತದಾರರು

Lok Sabha Election; ಮತದಾನ ಮಾಡಿದ ಬಳಿಕ 7 ಮಂದಿ ಸಾವು

Lok Sabha Election; ಮತದಾನ ಮಾಡಿದ ಬಳಿಕ 7 ಮಂದಿ ಸಾವು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

2-padubidri

Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.