ಪರಿಸರ ಸ್ನೇಹಿ ಗಣಪತಿ: ವಿದ್ಯಾರ್ಥಿಗಳಿಗೆ ಅರಿವು
Team Udayavani, Sep 7, 2018, 6:25 AM IST
ಬೆಂಗಳೂರು: ರಾಜ್ಯದ ಪ್ರಾಥಮಿಕ ಹಾಗೂ ಪ್ರೌಢಶಾಲಾ ಮಕ್ಕಳಿಗೆ ಗಣೇಶ ಚತುರ್ಥಿಗೆ ಪರಿಸರ ಸ್ನೇಹಿ ಗಣಪತಿ
ಖರೀದಿಸುವಂತೆ ಅರಿವು ಮೂಡಿಸಲು ಕ್ಷೇತ್ರ ಶಿಕ್ಷಣಾಧಿಕಾರಿಗಳಿಗೆ ಮತ್ತು ಜಿಲ್ಲಾ ಉಪನಿರ್ದೇಶಕರಿಗೆ ಸಾರ್ವಜನಿಕ ಶಿಕ್ಷಣ ಇಲಾಖೆ ಆದೇಶಿಸಿದೆ.
ಪರಿಸರ ಸಂರಕ್ಷಣೆ ಮತ್ತು ಸ್ವತ್ಛತೆ ವಿದ್ಯಾರ್ಥಿಗಳ ದೈನಂದಿನ ಚಟುವಟಿಕೆಯಲ್ಲಿ ಹಾಸುಹೊಕ್ಕಾಗಿರಬೇಕು. ರಾಸಾಯನಿಕ ಬಳಸಿ ತಯಾರಿಸುವ ಗಣೇಶನ ಮೂರ್ತಿ ವಿಸರ್ಜನೆಯ ನಂತರ ಕೆರೆಯ ನೀರು ಕಲುಷಿತವಾಗುವ ಜತೆಗೆ ಅಲ್ಲಿರುವ ಜಲಚರಗಳಿಗೂ ಹಾನಿಯಾಗಲಿದೆ. ಈ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳಿಗೆ ಅಗತ್ಯ ಅರಿವು ಮೂಡಿಸುವಂತೆ ಶಿಕ್ಷಣ ಇಲಾಖೆ ಅಧಿಕಾರಿಗಳಿಗೆ ಸೂಚನೆ ನೀಡಿದೆ.
ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ ಎನ್. ಮಹೇಶ್ ಮತ್ತು ಕರ್ನಾಟಕ ಕೆರೆ ಸಂರಕ್ಷಣೆ ಹಾಗೂ ಅಭಿವೃದ್ಧಿ ಪ್ರಾಧಿಕಾರದ ಮಾಜಿ ಸದಸ್ಯ ಡಾ.ಕೆ.ಎಂ.ಜಯರಾಮಯ್ಯ ನೀಡಿರುವ ಸಲಹೆಗಳ ಆಧಾರದ ಮೇಲೆ ಸಾರ್ವಜನಿಕ ಶಿಕ್ಷಣ ಇಲಾಖೆ ಈ ಕ್ರಮ ತೆಗೆದುಕೊಂಡಿದೆ. ಕ್ಷೇತ್ರ ಶಿಕ್ಷಣಾಧಿಕಾರಿ ಮತ್ತು ಜಿಲ್ಲಾ ಉಪನಿರ್ದೇಶಕರು ಸಂಬಂಧಪಟ್ಟ ಶಾಲೆಗಳ
ಮುಖ್ಯಶಿಕ್ಷಕರಿಗೆ ಸೂಚನೆ ನೀಡಲಿದ್ದಾರೆ. ಮುಖ್ಯ ಶಿಕ್ಷಕರು, ಶಿಕ್ಷಕರು ಹಾಗೂ ಸಹ ಶಿಕ್ಷಕರು ಪರಿಸರ ಸ್ನೇಹಿ ಗಣೇಶೋತ್ಸವದ ಬಗ್ಗೆ ಮಕ್ಕಳಿಗೆ ಅರಿವು ಮತ್ತು ಜಾಗೃತಿಯ ಸಂದೇಶ ನೀಡಲಿದ್ದಾರೆ ಎಂದು ಇಲಾಖೆಯ ಅಧಿಕಾರಿಗಳು ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ
Lok Sabha Polls: “ಮೋದಿ ಮತ್ತೊಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ
Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್
Lok Sabha Election: ಸೀನಿಯರ್ ಖೂಬಾಗೆ ಜ್ಯೂನಿಯರ್ ಖಂಡ್ರೆ ಸವಾಲು
Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…
MUST WATCH
ಹೊಸ ಸೇರ್ಪಡೆ
ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ
ಧಾರವಾಡ: “ಶ್ರೀರಾಮ-ಕೃಷ್ಣರ ಜೀವನ ಇಂದಿಗೂ ಆದರ್ಶ’
Kollywood: ಅಜಿತ್ ಹುಟ್ಟುಹಬ್ಬಕ್ಕೆ ಸೂಪರ್ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್ ಖುಷ್
Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ
Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ