ಕೆಪಿಸಿಸಿ ಹೀನಾಯ ಸ್ಥಿತಿ ತಲುಪಿದೆ: ಈಶ್ವರಪ್ಪ
Team Udayavani, Sep 8, 2018, 6:55 AM IST
ಶಿವಮೊಗ್ಗ: “ಕರ್ನಾಟಕ ಪ್ರದೇಶ ಕಾಂಗ್ರೆಸ್ನಲ್ಲಿ ಆಗಿರುವ ಗೊಂದಲ ಗಮನಿಸಿದರೆ ಆ ಪಕ್ಷ ಹೀನಾಯ ಸ್ಥಿತಿಗೆ
ತಲುಪಿರುವುದು ಕಂಡು ಬರುತ್ತಿದೆ’ಎಂದು ಶಾಸಕ ಕೆ. ಎಸ್. ಈಶ್ವರಪ್ಪ ಲೇವಡಿ ಮಾಡಿದರು.
ಸುದ್ದಿಗಾರರೊಂದಿಗೆ ಮಾತನಾಡಿ, ಕಾಂಗ್ರೆಸ್ನ ಆಂತರಿಕ ವಿಷಯಕ್ಕೆ ನಾವು ತಲೆ ಹಾಕುವುದಿಲ್ಲ. ಆದರೆ, ಕೆಪಿಸಿಸಿ
ಅಧ್ಯಕ್ಷ ದಿನೇಶ್ ಗುಂಡೂರಾವ್ ಆದೇಶಕ್ಕೆ ಪಕ್ಷದಲ್ಲೇ ಬೆಲೆ ಇಲ್ಲದಂತಾಗಿದೆ. ರಾಷ್ಟ್ರೀಯ ಪಕ್ಷ ಇಂತಹ ಹೀನಾಯ
ಸ್ಥಿತಿಗೆ ಬರಬಾರದಿತ್ತು ಎಂದರು.
ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಮತ್ತು ಸಿದ್ದರಾಮಯ್ಯ ನಡುವೆ ಹೊಂದಾಣಿಕೆ ಇಲ್ಲ. ಒಬ್ಬರ ಮುಖ ಕಂಡರೆ ಇನ್ನೊಬ್ಬರಿಗೆ ಆಗುವುದಿಲ್ಲ. ಇದನ್ನು ಮುಚ್ಚಿ ಹಾಕಲು ಬಿ.ಎಸ್.ಯಡಿಯೂರಪ್ಪ ಹಾಗೂ ಅವರ ಮಕ್ಕಳ ಹೆಸರನ್ನು ತಂದು ರಾಜಕಾರಣ ಮಾಡುತ್ತಿದ್ದಾರೆ. ಯಡಿಯೂರಪ್ಪ ಪುತ್ರರು ಐಟಿ ಅಧಿಕಾರಿಗಳನ್ನು ಭೇಟಿ ಮಾಡಿದ್ದಾರೆ ಎಂಬುದಕ್ಕೆ
ದಾಖಲೆ ಇದ್ದರೆ ನೀಡಲಿ. ಪ್ರಕರಣವನ್ನು ಸಿಬಿಐಗೆ ವಹಿಸಲಿ. ಅದು ಬಿಟ್ಟು ಬೇಜವಾಬ್ದಾರಿ ಹೇಳಿಕೆ ನೀಡುವುದು ಸರಿಯಲ್ಲ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ
B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್ವೈ ಗರಂ
Transfer order: ರಾಜ್ಯದ 388 ನ್ಯಾಯಾಧೀಶರ ವರ್ಗಾವಣೆ ಮಾಡಿ ಆದೇಶ
PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ
Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!