ಮಂಡ್ಯ: ಬಿಜೆಪಿ ಲೋಕಾ ಅಭ್ಯರ್ಥಿ ಯದುವೀರ್?
Team Udayavani, Sep 8, 2018, 6:00 AM IST
ಮಂಡ್ಯ: ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಮಂಡ್ಯ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಮೈಸೂರು ಯುವರಾಜ ಯದುವೀರ್ ಅವರನ್ನು ಕಣಕ್ಕಿಳಿಸುವ ಮಾತುಗಳು ಬಿಜೆಪಿ ವಲಯದಲ್ಲಿ ಕೇಳಿ ಬರುತ್ತಿವೆ.
ಆರು ತಿಂಗಳ ಹಿಂದೆ ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ಬಿ. ಎಸ್.ಯಡಿಯೂರಪ್ಪ ಅವರು ಮೈಸೂರು ಅರಮನೆಗೆ ಭೇಟಿ ನೀಡಿ, ಯದುವೀರ್ ಜೊತೆ ರಹಸ್ಯ ಮಾತುಕತೆ ನಡೆಸಿ ಹೋಗಿದ್ದರು. ಆ ವೇಳೆ, ಮಂಡ್ಯ ಲೋಕಸಭಾ ಕ್ಷೇತ್ರದಿಂದ ಯದುವೀರ್ ಅವರನ್ನು ಕಣಕ್ಕಿಳಿಸುವ ಬಗ್ಗೆ ಗುಪ್ತವಾಗಿ ಮಾತುಕತೆ ನಡೆಸಲಾಗಿದೆ ಎನ್ನಲಾಗುತ್ತಿದ್ದು, ಅದಕ್ಕೆ ಈಗ ರೆಕ್ಕೆ-ಪುಕ್ಕ ಮೂಡಲಾರಂಭಿಸಿದೆ. ಲೋಕಸಭಾ ಚುನಾವಣೆಯಲ್ಲಿ ರಾಷ್ಟ್ರದಲ್ಲಿ ಮತ್ತೆ ಬಿಜೆಪಿ ಅಧಿಕಾರದ ಚುಕ್ಕಾಣಿ ಹಿಡಿಯಬೇಕಾದರೆ ಒಂದೊಂದು ಸ್ಥಾನವೂ ಬಹಳ ಮುಖ್ಯ.
ಆ ನಿಟ್ಟಿನಲ್ಲಿ ಯದುವೀರ್ ಆಯ್ಕೆ ಸೂಕ್ತ ಹಾಗೂ ಸಮಯೋಚಿತ ಎಂದು ರಾಜ್ಯ, ರಾಷ್ಟ್ರ ನಾಯಕರಿಗೆ ಸಂದೇಶ ರವಾನಿಸಲಾಗಿದೆ. ಬಿಜೆಪಿ ಕೂಡ ಈಗಾಗಲೇ ಇಲ್ಲಿ ಹಲವಾರು ಅಭ್ಯರ್ಥಿಗಳನ್ನು ಕರೆ ತಂದು ನಿಲ್ಲಿಸಿದ್ದರೂ ಜೆಡಿಎಸ್, ಕಾಂಗ್ರೆಸ್ ಎದುರು ಗೆಲುವಿನ ಗುರಿ ಮುಟ್ಟಲಾಗಲೇ ಇಲ್ಲ. ಚಿತ್ರನಟ ಉಪೇಂದ್ರ ಅವರನ್ನು ಕರೆ ತರುವ ಪ್ರಯತ್ನ ಈಡೇರಲೇ ಇಲ್ಲ. ಹಾಗಾಗಿ, ಯದುವೀರ್ ಅವರನ್ನು ಕರೆ ತಂದಲ್ಲಿ ಕಾರ್ಯಕರ್ತರು, ಮುಖಂಡರು ಒಗ್ಗಟ್ಟಿನಿಂದ ದುಡಿಯುವರೆಂಬ ವಿಶ್ವಾಸ ವ್ಯಕ್ತಪಡಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vijaypura:ರಾಹುಲ್ ಗಾಂಧಿ ನಿರ್ಗಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್
Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್
LS Polls: ರಾಜ್ಯದಲ್ಲಿ ಕಾಂಗ್ರೆಸ್ ವಿರೋಧಿ ಅಲೆ: ರಾಘವೇಂದ್ರ
Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…
MUST WATCH
ಹೊಸ ಸೇರ್ಪಡೆ
2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್ಯಾಂಕ್ ಪಡೆದ ತೀರ್ಥಹಳ್ಳಿಯ ಸುಚಿಂತ್
Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ
Vijaypura:ರಾಹುಲ್ ಗಾಂಧಿ ನಿರ್ಗಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ
ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್.ವರಲಕ್ಷ್ಮೀ
CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ