ಭಿನ್ನಮತವಿಲ್ಲ: ಖಂಡ್ರೆ
Team Udayavani, Sep 8, 2018, 6:10 AM IST
ಬೆಳಗಾವಿ: “ಜಿಲ್ಲಾ ಕಾಂಗ್ರೆಸ್ನಲ್ಲಿ ಯಾವುದೇ ಭಿನ್ನಮತ ಇಲ್ಲ. ಪಿಎಲ್ಡಿ ಬ್ಯಾಂಕ್ ಚುನಾವಣೆಯಿಂದ ಸಮ್ಮಿಶ್ರ ಸರ್ಕಾರದ ಮೇಲೆ ಯಾವುದೇ ಪರಿಣಾಮ ಉಂಟಾಗದು. ಸರ್ಕಾರ ಸುಭದ್ರವಾಗಿದೆ’ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ ಖಂಡ್ರೆ ಹೇಳಿದರು.
ಶುಕ್ರವಾರ ಸುದ್ದಿಗಾರರ ಜೊತೆ ಮಾತನಾಡಿದ ಅವರು, ಕಾಂಗ್ರೆಸ್ ವರಿಷ್ಠರ ಸೂಚನೆ ಮೇರೆಗೆ ಇಲ್ಲಿಗೆ ಬಂದಿದ್ದು, ಬೆಳಗ್ಗೆ ಜಿಲ್ಲಾ ಉಸ್ತುವಾರಿ ಸಚಿವ ರಮೇಶ ಜಾರಕಿಹೊಳಿ ಅವರೊಂದಿಗೆ ದೂರವಾಣಿಯಲ್ಲಿ ಮಾತನಾಡಿದೆ. ನಂತರ, ಸತೀಶ ಜಾರಕಿಹೊಳಿ ಹಾಗೂ ಲಕ್ಷ್ಮೀ ಹೆಬ್ಟಾಳ್ಕರ್ ಅವರೊಂದಿಗೆ ಪ್ರತ್ಯೇಕ ಸಮಾಲೋಚನೆ ನಡೆಸಲಾಯಿತು. ಮಾತುಕತೆ ಸೌಹಾರ್ದಯುತವಾಗಿ ಮುಕ್ತಾಯವಾಗಿದೆ.
ಇಬ್ಬರಲ್ಲೂ ಮನಸ್ತಾಪ ಇಲ್ಲ. ಈ ಚುನಾವಣೆ ಸರ್ಕಾರದ ಮೇಲೆ ಯಾವುದೇ ಪರಿಣಾಮ ಬೀರುವುದಿಲ್ಲ ಎಂದರು. ಆದರೆ,
ಸುದ್ದಿಗೋಷ್ಠಿ ವೇಳೆ ಉಪಸ್ಥಿತರಿದ್ದ ಶಾಸಕರಾದ ಸತೀಶ ಜಾರಕಿಹೊಳಿ ಹಾಗೂ ಲಕ್ಷ್ಮೀ ಹೆಬ್ಟಾಳ್ಕರ್ ಒಮ್ಮೆಯೂ ಪರಸ್ಪರ ಮುಖ ನೋಡಲಿಲ್ಲ. ಬದಲಾಗಿ ಬೇರೆ ಕಡೆ ತಿರುಗಿ ಹೋಗಿದ್ದು ಭಿನ್ನಮತ ಶಮನವಾಗದಿರುವ ಸೂಚನೆ ನೀಡಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Politics: ಸುಮಲತಾ – ನಾವು ಶಾಶ್ವತ ಶತ್ರುಗಳಲ್ಲ: ಕುಮಾರಸ್ವಾಮಿ
Bangaluru cafe ಸ್ಫೋಟದ ಸಂಚುಕೋರ ಎನ್ಐಎ ಬಲೆಗೆ: ಯಾರಿದು ಷರೀಫ್?
Lok Sabha Election: ಬಿಜೆಪಿ-ಜೆಡಿಎಸ್ “ಜಂಟಿ ಸಮರಾಭ್ಯಾಸ’
Congress; ಕೋಲಾರಕ್ಕೆ ಗೌತಮ್ ಅಚ್ಚರಿಯ ಅಭ್ಯರ್ಥಿ?: 3ನೇ ವ್ಯಕ್ತಿಗೆ ಲಾಭ!
Politics: ಟಿಕೆಟ್ ಹಂಚಿಕೆ ಮರುಪರಿಶೀಲಿಸಿ ಎಂದ ವೀಣಾ ಬೆಂಬಲಿಗರಿಗೆ ಸಿಎಂ ತಿರುಗೇಟು