ಸತೀಶ ಜಾರಕಿಹೊಳಿ ಸಿಎಂ ಆಗೋವರೆಗೂ ವಿಶ್ರಮಿಸುವುದಿಲ್ಲ
Team Udayavani, Sep 9, 2018, 6:30 AM IST
ಗೋಕಾಕ: ಪಿಎಲ್ಡಿ ಬ್ಯಾಂಕ್ ಅಧ್ಯಕ್ಷ, ಉಪಾಧ್ಯಕ್ಷ ಚುನಾವಣೆಯಲ್ಲಿ ಹಿನ್ನಡೆಯಾದರೆ “ಕಠಿಣ ನಿರ್ಧಾರ ಅನಿವಾರ್ಯ’ ಎಂದು ಆತಂಕ ಸೃಷ್ಟಿಸಿದ್ದ ಪೌರಾಡಳಿತ ಸಚಿವ ರಮೇಶ ಜಾರಕಿಹೊಳಿ ಈಗ ಸಹೋದರ ಸತೀಶ ಜಾರಕಿಹೊಳಿ ಅವರನ್ನು “ರಾಜ್ಯದ ಮುಖ್ಯಮಂತ್ರಿಯನ್ನಾಗಿ ಮಾಡುವವರೆಗೆ ನಾವು ವಿಶ್ರಮಿಸುವುದಿಲ್ಲ’ ಎಂದು ಹೇಳಿರುವುದು ಕುತೂಹಲ ಮೂಡಿಸಿದೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜಾರಕಿಹೊಳಿ ಕುಟುಂಬಕ್ಕೆ ತನ್ನದೇ ಆದ ಇತಿಹಾಸವಿದೆ. ಮೊದಲಿನಿಂದಲೂ ಮುಖ್ಯಮಂತ್ರಿ ಹುದ್ದೆಯ ರೇಸ್ನಲ್ಲಿದೆ. ಪಕ್ಷದಲ್ಲಿನ ಕೆಲ ಕಾಣದ ಕೈಗಳು ನಮ್ಮ ಕುಟುಂಬದ ಏಳ್ಗೆಯನ್ನು ಸಹಿಸದೆ ಪಿತೂರಿ ನಡೆಸಿವೆ. ಇಂಥ ಪಿತೂರಿಗಳಿಂದ ಮನಸ್ಸಿಗೆ ನೋವಾಗಿದೆ. ಇಂಥ ಷಡ್ಯಂತ್ರಗಳಿಗೆ ಬಗ್ಗುವುದಿಲ್ಲ. ನಮ್ಮ ಪ್ರಯತ್ನ ನಿರಂತರವಾಗಿರುತ್ತದೆ. ಜಿಲ್ಲೆಯ ಜನತೆ ನಮ್ಮ ಕುಟುಂಬದೊಂದಿಗೆ ಇದ್ದಾರೆ ಎಂದರು.
ಪಕ್ಷವನ್ನು ಜಿಲ್ಲೆಯಲ್ಲಿ ತಳಮಟ್ಟದಿಂದ ಸಂಘಟಿಸಿದ್ದೇವೆ. ಹೀಗಾಗಿ ಪಕ್ಷ ಬಿಡುವ ವಿಚಾರವೇ ಇಲ್ಲ. ಆಪ್ತ ಶಾಸಕರೊಂದಿಗೆ ಬಿಜೆಪಿ ಸೇರುತ್ತೇನೆ ಎನ್ನುವ ವದಂತಿ ಸುಳ್ಳು. ಯಡಿಯೂರಪ್ಪ ನಮ್ಮ ನಿವಾಸಕ್ಕೆ ಬಂದು ಹೋದರೆ ತಪ್ಪೇನಿಲ್ಲ. ಬಂದು ಚಹಾ ಸೇವಿಸಿ ಹೋಗಲಿ, ಅವರೊಂದಿಗೆ ಉಭಯ ಕುಶಲೋಪರಿ ಮಾತನಾಡುತ್ತೇವೆ. ಆದರೆ ರಾಜಕೀಯ ಮಾತುಕತೆ ನಡೆಸುವುದಿಲ್ಲ ಎಂದರು.
ಬೆಳಗಾವಿ ಪಿಎಲ್ಡಿ ಬ್ಯಾಂಕ್ ಅಧ್ಯಕ್ಷ-ಉಪಾಧ್ಯಕ್ಷ ಚುನಾವಣೆ ಸತೀಶ ಅವರ ಅನಿಸಿಕೆಯಂತೆ ಸರಾಗವಾಗಿ ನಡೆದಿದೆ. ಇಲ್ಲಿ ಯಾರ ಗೆಲುವು-ಸೋಲು ಮುಖ್ಯವಲ್ಲ, ಇದು ಪಕ್ಷದ ಗೆಲುವು. ಪಕ್ಷದ ಕಾರ್ಯಾಧ್ಯಕ್ಷ ಈಶ್ವರ ಖಂಡ್ರೆ ಬರುವ ಮುಂಚೆಯೇ ನಾವು ನಿರ್ಧಾರ ತೆಗೆದುಕೊಂಡಿದ್ದೆವು. ಅದರಂತೆಯೇ ಎಲ್ಲವೂ ನಡೆದಿದೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ
Lok Sabha Polls: “ಮೋದಿ ಮತ್ತೊಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ
Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್
Lok Sabha Election: ಸೀನಿಯರ್ ಖೂಬಾಗೆ ಜ್ಯೂನಿಯರ್ ಖಂಡ್ರೆ ಸವಾಲು
Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…