ಭಾರತ್ ಬಂದ್ಗೆ ಜೆಡಿಎಸ್ ಬೆಂಬಲ
Team Udayavani, Sep 9, 2018, 6:00 AM IST
ಬೆಂಗಳೂರು: ತೈಲ ದರ ಏರಿಕೆ ಸೇರಿದಂತೆ ಕೇಂದ್ರ ಸರ್ಕಾರದ ವೈಫಲ್ಯಗಳ ವಿರುದ್ಧ ಸೆ.10 ರಂದು ಕರೆ ನೀಡಿರುವ ಭಾರತ್ ಬಂದ್ಗೆ ನಮ್ಮ ಸಂಪೂರ್ಣ ಬೆಂಬಲವಿದೆ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ವಿಶ್ವನಾಥ್ ತಿಳಿಸಿದ್ದಾರೆ.
ಪಕ್ಷದ ಕಚೇರಿ ಜೆಪಿ ಭವನದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯಾದ್ಯಂತ ಕಾಂಗ್ರೆಸ್ ಜತೆಗೂಡಿ ಜೆಡಿಎಸ್ ಕೇಂದ್ರ ಸರ್ಕಾರದ ವಿರುದ್ಧ ಪ್ರತಿಭಟನೆ ಮಾಡಲಿದೆ ಎಂದು ಹೇಳಿದರು.
ಜೆಡಿಎಸ್ನ ಎಲ್ಲ ಜಿಲ್ಲಾ ಹಾಗೂ ತಾಲೂಕು ಘಟಕಗಳಿಗೆ ಈ ಕುರಿತು ಸೂಚನೆ ನೀಡಲಾಗಿದ್ದು, ಇಡೀ ದೇಶಾದ್ಯಂತ ಭಾರತ್ ಬಂದ್ ಯಶಸ್ವಿಗೊಳಿಸಲು ಬಿಜೆಪಿ ಒಕ್ಕೂಟ ಹೊರತುಪಡಿಸಿದ ಎಲ್ಲ ಪಕ್ಷಗಳು ಒಗ್ಗಟ್ಟಾಗಿ ಹೋರಾಟ ಮಾಡಲಿವೆ ಎಂದು ತಿಳಿಸಿದರು.
ಪ್ರತಿಭಟನೆ ಅಂಗವಾಗಿ ದೆಹಲಿಯಲ್ಲಿ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಎಚ್.ಡಿ.ದೇವೇಗೌಡರು ಹಾಗೂ ಮಹಾ ಪ್ರಧಾನ ಕಾರ್ಯದರ್ಶಿ ಡ್ಯಾನಿಶ್ ಅಲಿ ಅವರು ಧರಣಿಯಲ್ಲಿ ಪಾಲ್ಗೊಳ್ಳಲಿದ್ದಾರೆ. ನಾನು ಮೈಸೂರಿನಲ್ಲಿ ನಡೆಯಲಿರುವ ಪ್ರತಿಭನಾ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದೇನೆ ಎಂದು ಹೇಳಿದರು.
ಬೆಂಗಳೂರಿನ ಪುರಭವನದ ಮುಂಭಾಗ ನಗರದ ಶಾಸಕರು, ಸಂಸದರು, ಪಾಲಿಕೆ ಸದಸ್ಯರು ಬೃಹತ್ ಪ್ರತಿಭಟನೆ ಮಾಡಲಿದ್ದಾರೆ ಎಂದು ತಿಳಿಸಿದರು.
ನರೇಂದ್ರಮೋದಿ ನೇತೃತ್ವದ ಬಿಜೆಪಿ ಸರ್ಕಾರ ಕೇಂದ್ರದಲ್ಲಿ ಅಧಿಕಾರಕ್ಕೆ ಬಂದ ನಂತರ ಪೆಟ್ರೋಲ್-ಡೀಸೆಲ್, ಅಡುಗೆ ಅನಿಲ ಬೆಲೆ ಗಗನಕ್ಕೆ ಏರಿದೆ. ಇದರಿಂದ ಸಹಜವಾಗಿ ಎಲ್ಲ ಅಗತ್ಯ ವಸ್ತುಗಳ ಬೆಲೆಯೂ ಹೆಚ್ಚಾಗಿ ಬಡ ಹಾಗೂ ಮಧ್ಯಮ ವರ್ಗದವರು ಜೀವನ ನಡೆಸಲು ಸಾಧ್ಯವಾಗದಂತಹ ಸ್ಥಿತಿ ನಿರ್ಮಾಣವಾಗಿದೆ ಎಂದು ದೂರಿದರು.
ಪ್ರಧಾನಿ ಮನಮೋಹನ್ಸಿಂಗ್ ಅವರ ಅವಧಿಯಲ್ಲಿ ಪೆಟ್ರೋಲ್ ಬೆಲೆ 60 ರೂ. ಇತ್ತು. ಇದೀಗ 80 ರೂ. ಮುಟ್ಟಿದೆ. ಅಡುಗೆ ಅನಿಲ 475 ರೂ. ಇತ್ತು ಇದೀಗ 900 ರೂ. ವರೆಗೆ ಮುಟ್ಟಿದೆ. ಡಾಲರ್ ಮೌಲ್ಯ 55 ರೂ. ಇತ್ತು, ಇದೀಗ 73 ರೂ. ಆಗಿದೆ ಎಂದು ಹೇಳಿದರು.
ಹಿಂದಿನ ಯುಪಿಎ ಸರ್ಕಾರದಲ್ಲಿ ಪೆಟ್ರೋಲ್-ಡೀಸೆಲ್, ಅಡುಗೆ ಅನಿಲ ಬೆಲೆ ಏರಿಕೆಯಾದಾಗ ರಸ್ತೆಗೆ ಇಳಿದಿದ್ದ ಸದಾನಂದಗೌಡ, ಯಡಿಯೂರಪ್ಪ, ಶೋಭಾ ಕರಂದ್ಲಾಜೆ, ಅನಂತಕುಮಾರ್ ಹೆಗಡೆ ಇದೀಗ ಯಾಕೆ ಬಾಯಿ ಬಿಡುತ್ತಿಲ್ಲ ಎಂದು ಲೇವಡಿ ಮಾಡಿದರು.
ದೇಶದಲ್ಲಿ ಅಲ್ಪಸಂಖ್ಯಾತರು, ದಲಿತರ ಮೇಲೆ ದೌರ್ಜನ್ಯಗಳು ಹೆಚ್ಚಾಗುತ್ತಿವೆ. ಪ್ರಧಾನಿ ಮೋದಿ ಅವರು ವಿಶ್ವ ಪರ್ಯಟನೆಯಲ್ಲಿ ಕಾಲ ಕಳೆಯುತ್ತಿದ್ದಾರೆ ಎಂದು ದೂರಿದರು.
ಪಕ್ಷದ ವಕ್ತಾರ ಹಾಗೂ ವಿಧಾನಪರಿಷತ್ನ ಮಾಜಿ ಸದಸ್ಯ ರಮೇಶ್ ಬಾಬು, ನಗರ ಅಧ್ಯಕ್ಷ ಪ್ರಕಾಶ್, ಮುಖಂಡ ಅಮರ್ನಾಥ್ ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Election: ಸೀನಿಯರ್ ಖೂಬಾಗೆ ಜ್ಯೂನಿಯರ್ ಖಂಡ್ರೆ ಸವಾಲು
Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…
Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ
Modi ಹಸಿ ಸುಳ್ಳು: ಸಿಎಂ ಸಿದ್ದರಾಮಯ್ಯ ಕೆಂಡ; ಒಬಿಸಿ, ಎಸ್ಸಿ ಮೀಸಲಾತಿ ಹೇಳಿಕೆಗೆ ವಿರೋಧ
Lok Sabha Election; ಹಂತ 1: 14 ಕ್ಷೇತ್ರಗಳ ಬಹಿರಂಗ ಪ್ರಚಾರ ಅಂತ್ಯ: ನಾಳೆ ಮತದಾನ
MUST WATCH
ಹೊಸ ಸೇರ್ಪಡೆ
Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ
Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ
LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ
33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್ ಗುಂಡೂರಾವ್
Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ