ಜೆಡಿಎಸ್ ಶಾಸಕರ ದಿಢೀರ್ ಸಭೆ ನಡೆಸಿದ ಕುಮಾರಸ್ವಾಮಿ
Team Udayavani, Sep 9, 2018, 6:45 AM IST
ಬೆಂಗಳೂರು: ಡಿ.ಕೆ.ಶಿವಕುಮಾರ್ ಮೇಲೆ ಇಡಿ ಎಫ್ಐಆರ್ ದಾಖಲಿಸಲಿದೆ ಎಂಬ ಮಾತುಗಳ ಬೆನ್ನಲ್ಲೇ ಸಿಎಂ ಕುಮಾರಸ್ವಾಮಿ ಶನಿವಾರ ದಿಢೀರ್ ಜೆಡಿಎಸ್ ಶಾಸಕರ ಸಭೆ ಕರೆದು ಸಮಾಲೋಚನೆ ನಡೆಸಿದರು.
ಖಾಸಗಿ ಹೋಟೆಲ್ನಲ್ಲಿ ನಡೆದ ಸಭೆಯಲ್ಲಿ, ಬಿಜೆಪಿಯವರು ಆಪರೇಷನ್ ಕಮಲ ಕಾರ್ಯಾಚರಣೆಗೆ ಇಳಿದಿರುವುದರಿಂದ
ಹುಷಾರಾಗಿರಿ ಎಂದು ಎಲ್ಲ ಶಾಸಕರಿಗೆ ಸೂಚನೆ ನೀಡಲಾಯಿತು ಎಂದು ಹೇಳಲಾಗಿದೆ.
ಬೆಳಗಾವಿ ಜಿಲ್ಲಾ ವಿದ್ಯಮಾನಗಳು, ಡಿ.ಕೆ.ಶಿವಕುಮಾರ್ ವಿರುದಟಛಿದ ಐಟಿ ಪ್ರಕರಣ ಮುಂದೆ ಪಡೆದುಕೊಳ್ಳಬಹುದಾದ ಸ್ವರೂಪ ಮತ್ತಿತರ ವಿಚಾರಗಳ ಬಗ್ಗೆ ಸಭೆಯಲ್ಲಿ ಚರ್ಚೆ ನಡೆಯಿತು. ಜೆಡಿಎಸ್ ಶಾಸಕರು ಒಗ್ಗಟ್ಟಾಗಿ ಇರೋಣ. ಕಾಂಗ್ರೆಸ್ನಲ್ಲೂ ಎಲ್ಲರೂ ಒಗ್ಗಟ್ಟಾಗಿದ್ದಾರೆ. ಗೊಂದಲ ಸೃಷ್ಟಿಸುವ ಪ್ರಯತ್ನಗಳು ನಡೆಯುತ್ತಿದ್ದು ಅದರ ಬಗ್ಗೆ
ತಲೆಕೆಡಿಸಿಕೊಳ್ಳುವುದು ಬೇಡ ಎಂದು ಶಾಸಕರಿಗೆ ಕುಮಾರಸ್ವಾಮಿ ಕಿವಿಮಾತು ಹೇಳಿದರು ಎಂದು ಹೇಳಲಾಗಿದೆ.
ಇದೇ ಸಂದರ್ಭದಲ್ಲಿ ನಿಗಮ ಮಂಡಳಿ ನೇಮಕಾತಿ, ಸಚಿವ ಸಂಪುಟದಲ್ಲಿ ಜೆಡಿಎಸ್ ಕೋಟಾದಡಿ ಖಾಲಿ ಇರುವ ಒಂದು ಸ್ಥಾನದ ಭರ್ತಿ ಕುರಿತು ಚರ್ಚೆ ನಡೆಯಿತು ಎಂದು ತಿಳಿದು ಬಂದಿದೆ. ದಿಢೀರ್ ಕರೆದ ಸಭೆಯಾದ್ದರಿಂದ ಎಲ್ಲ
ಜೆಡಿಎಸ್ ಶಾಸಕರು ಪಾಲ್ಗೊಂಡಿರಲಿಲ್ಲ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದ್ರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ
Hubballi: ಮೂವರು ನಕಲಿ ಸಿಐಡಿ ಅಧಿಕಾರಿಗಳ ಬಂಧನ… ಮೊಬೈಲ್, ಬೈಕ್ ವಶ
ತಾಳಿಭಾಗ್ಯ ಯೋಜನೆ ತಂದ ‘ಕಾಂಗ್ರೆಸ್’ ಕಿತ್ತುಕೊಳ್ಳುವ ಕೆಲಸ ಎಂದೂ ಮಾಡಲ್ಲ: H.K. Patil
ಮಗಳ ಪ್ರಕರಣ ದಿಕ್ಕು ತಪ್ಪುತ್ತಿದೆ ಎಂದಿದ್ದ ನೇಹಾಳ ತಂದೆ ರಾಜ್ಯ ಸರಕಾರದ ಕ್ಷಮೆ ಕೇಳಿದ್ದೇಕೆ?
ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ
MUST WATCH
ಹೊಸ ಸೇರ್ಪಡೆ
Team India; ಹಾರ್ದಿಕ್ ಅಲ್ಲ; ಟೀಂ ಇಂಡಿಯಾದ ಮುಂದಿನ ಟಿ20 ನಾಯಕನ ಹೆಸರು ಸೂಚಿಸಿದ ಭಜ್ಜಿ
ಬಿಜೆಪಿ ದಲಿತರ ಪರ ಮೊಸಳೆ ಕಣ್ಣೀರು: ಬಿ.ಕೆ. ಹರಿಪ್ರಸಾದ
Haveri Lok Sabha constituency: “ಮೇ 7 ರಂದು ತಪ್ಪದೇ ಮತದಾನ ಮಾಡಿ’
Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದ್ರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ
ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸುವಂತಹ ನೀಚತನಕ್ಕೆ ಬಿಜೆಪಿ ಇಳಿದಿದೆ-ಚನ್ನರಾಜ ಹಟ್ಟಿಹೊಳಿ